Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ'
ಕೊರೊನಾ ವೈರಸ್ನಿಂದ ನೂರಾರು ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜನರು ಜೀವಕ್ಕಾಗಿ ಹೋರಾಡುತ್ತಿರುವ ಈ ಸಮಯದಲ್ಲಿ ದುಡ್ಡು ಮಾಡಿಕೊಳ್ಳುವ ಪ್ರವೃತ್ತಿಯನ್ನು ಅನೇಕರು ಮುಂದುವರಿಸಿದ್ದಾರೆ. ಆಸ್ಪತ್ರೆ, ಆಂಬುಲೆನ್ಸ್, ಆಕ್ಸಿಜನ್, ಬೆಡ್, ಸ್ಮಶಾನ ಕಾರ್ಯಕರ್ತರು ಮಾನವೀಯತೆ ಮರೆತು ದುಡ್ಡಿನ ಆಸೆಗೆ ಬಿದ್ದಿದ್ದಾರೆ.
Recommended Video
ಗಂಟೆಗೊಂದು ಘಟನೆ, ದಿನಕ್ಕೊಂದು ಹೃದಯವಿದ್ರಾವಕ ಸನ್ನಿವೇಶಗಳು ವರದಿಯಾಗುತ್ತಲೇ ಇದೆ. ಇಂತಹ ಘಟನೆಗಳ ಬಗ್ಗೆ ತೀರಾ ಬೇಸರ ವ್ಯಕ್ತಪಡಿಸಿರುವ ಹಿರಿಯ ನಟ ಜಗ್ಗೇಶ್ 'ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ' ಎಂದು ಕುಟುಕಿದ್ದಾರೆ. ಮುಂದೆ ಓದಿ...
ಸತ್ತರೆ ಹಣ ಬರೋಲ್ಲಾ ಪಾಪ ಪುಣ್ಯ ಮಾತ್ರ
ಕೋವಿಡ್ ಸಂತ್ರಸ್ತರು ನೊಂದು ಟಿವಿಯಲಿ ಮಾತಾಡಿದ್ದು ನೋಡಿ ಸಂಕಟವಾಯ್ತು. ಆಸ್ಪತ್ರೆ, ಆಂಬುಲೆನ್ಸ್, ಔಷಧಿ ಅಂಗಡಿ, ಸ್ಮಶಾನ ಕಾರ್ಯಕರ್ತರು ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ. ನೊಂದವರಿಗೆ ಭುಜ ಕೊಟ್ಟು ಸಹಾಯಮಾಡಿ. ಸತ್ತರೆ ಹಣ ಬರೋಲ್ಲಾ ಪಾಪ ಪುಣ್ಯ ಮಾತ್ರ ನಮ್ಮಹಿಂದೆ ಬರೋದು. ದೇವನೊಬ್ಬನಿರುವ ಎಲ್ಲ ನೋಡುತಿರುವ'' ಎಂದು ಟ್ವಿಟ್ಟರ್ ಮೂಲಕ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಹಿಟ್ ಆದರೂ ಸಂಬಳ ಕೊಡದೆ ಜಗ್ಗೇಶ್ಗೆ ನಿರ್ಮಾಪಕರ ಮೋಸ
ಮನುಷ್ಯರಿಗೆ ಮನುಷ್ಯರ ಮೇಲೆ ನಂಬಿಕೆ ಸತ್ತು ಹೋಗಿದೆ
''ಇಂಥ ಸಮಯದಲ್ಲೆ ಇಂಥ ಕ್ರೂರಿಗಳು active ಆಗೋದು. ಇಂಥ ಕೀಳು ಜನರಿಂದ ಮನುಷ್ಯರಿಗೆ ಮನುಷ್ಯರ ಮೇಲೆ ನಂಬಿಕೆ ಸತ್ತು ಹೋಗಿದೆ, ನಾನು ಇಷ್ಟು ನೊಂದದ್ದು ಇತ್ತೀಚಿನ ಈ ಕ್ರೂರ ವರ್ತನೆಯಿಂದ. ನನಗೆ ಅರಿಯದಂತೆ ಕೆಟ್ಟ ಬೈಗುಳ ಕೋಪ ಅನಾವಶ್ಯಕ ಬರುತ್ತಿದೆ. ತಪ್ಪು ಎಂದು ನನ್ನ ನಾನೇ ಸರಿಪಡಿಸಿಕೊಳ್ಳುತ್ತಿರುವೆ. ಇಂಥ ದಿನಗಳ ಎಣಿಸಲಿಲ್ಲಾ ನಾನು horrible'' ಎಂದು ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ.
ಸಹಾಯ ಮಾಡಲು ಆಗದಿದ್ದರೆ ಮೌನವಾಗಿ ಇದ್ದುಬಿಡಿ
''ನಾನು ಕಾಯವಾಚಮನ ದೇವರು ಮೆಚ್ಚುವಂತೆ 5 ಜನ ಕೋವಿಡ್ ಬಂದವರಿಗೆ ತನು ಮನ ಧನ ಅರ್ಪಿಸಿ ಸೇವೆ ಮಾಡುತ್ತಿರುವೆ. ಅದರಲ್ಲಿ ಒಬ್ಬ ಬಂಧು ತೀರಿಹೋದ. ದಯಮಾಡಿ ನೀವು ನಿಮ್ಮವರಿಗೆ ಸಹಾಯ ಮಾಡಿ ಆಗದಿದ್ದರೆ ಮೌನವಾಗಿ ಇದ್ದುಬಿಡಿ. ಇಲ್ಲಿ ಬಂದು ಸಂಬಂಧವಿಲ್ಲದ ಪ್ರಶ್ನೆ ತೀಟೆ ಅಣಕ timepassಗೆ ಈಕೆಟ್ಟ ಪರಿಸ್ಥಿತಿ ಬಳಕೆ ಮಾಡಬೇಡಿ ಈ ಗುಣ ಯಾರಿಗು ಶೋಭೆಯಲ್ಲಾ'' ಎಂದು ನಟ ಜಗ್ಗೇಶ್ ಮನವಿ ಮಾಡಿದ್ದಾರೆ.
'ಟೀಕಿಸುವುದು, ದೂಷಿಸುವುದು ಬಿಡಿ, ಜನರು ಜವಾಬ್ದಾರಿಯಿಂದ ವರ್ತಿಸಿ'
ಸೆಲೆಬ್ರಿಟಿಗಳಿಗೂ ಕಷ್ಟ ತಪ್ಪಿದ್ದಲ್ಲ
ಸೆಲೆಬ್ರಿಟಿಗಳು ಅಥವಾ ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವವರಿಗೂ ಕೊರೊನಾದಿಂದ ಭಾರಿ ಸಮಸ್ಯೆ, ಸಂಕಷ್ಟಗಳು ಎದುರಾಗಿದೆ. ಇತ್ತೀಚಿಗಷ್ಟೆ ಸುನೇತ್ರಾ ಪಂಡಿತ್ ತಮ್ಮ ಸಹೋದರಿಯನ್ನು ಕಳೆದುಕೊಂಡರು. ಕಿರುತೆರೆ ನಟ ಪವನ್ ಕುಮಾರ್ ಸಹ ತಮ್ಮ ಕುಟುಂಬ ಸದಸ್ಯರನ್ನು ಕೊರೊನಾದಿಂದ ಕಳೆದುಕೊಂಡರು.