Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ವಾಸಿಗಳ ಬದ್ಧತೆ ಬಗ್ಗೆ ಪ್ರಶ್ನಿಸಿದ ನಟ ಜಗ್ಗೇಶ್.!
ಕರ್ನಾಟಕ ವಿಧಾನಸಭೆ ಚುನಾವಣೆ 2018 ರ ಮತದಾನ ಪ್ರಕ್ರಿಯೆ ಮುಗಿದಿದೆ. ಚುನಾವಣೆ ದಿನವಾದ ನಿನ್ನೆ (ಮೇ 12) ಪ್ರಜ್ಞಾವಂತ ಜನಸಾಮಾನ್ಯರು ಮತ ಚಲಾಯಿಸಿ ಕರ್ತವ್ಯ ನಿರ್ವಹಿಸಿದ್ದಾರೆ.
ಆದರೆ, ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇಕಡವಾರು ಮತದಾನ ಕಮ್ಮಿ. ಇದನ್ನ ಗಮನಿಸಿದ ನಟ ಹಾಗೂ ರಾಜಕಾರಣಿ ಜಗ್ಗೇಶ್ ಬೆಂಗಳೂರು ವಾಸಿಗಳ ಬದ್ಧತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
''ಬೆಂಗಳೂರು ವಾಸಿಗಳೇ... ಏನು ಬದ್ಧತೆ, ಏನು ಪ್ರೇಮ, ಏನು ಸ್ವಾಭಿಮಾನ, ಅಂತರರಾಷ್ಟ್ರೀಯ ಗುಣಮಟ್ಟ ಬೇಕು. ಟಿವಿ ಕಂಡರೆ ಸಾಕು ಏನು ವಾದ ಮಂಡನೆ. ಮೆಚ್ಚಬೇಕು ಬದ್ಧತೆ. ಹಳ್ಳಿಯಲ್ಲಿ ದುಡ್ಡಿಗೆ ವೋಟ್. ಸಿಟಿಯಲ್ಲಿ ಬೂತ್ ತಿರುಗಿ ನೋಡಲ್ಲ. ಹೀಗಾದರೆ ಬದಲಾವಣೆ ಹೇಗೆ.? ಯಾರಿಂದ ಬದಲಾವಣೆ.? ಯಾಕೆ ಬದಲಾವಣೆ.? ನಗು ಬರುತ್ತಿದೆ'' ಎಂದು ಟ್ವೀಟ್ ಮಾಡಿದ್ದಾರೆ ನಟ ಜಗ್ಗೇಶ್.
ಏನ್ ಓಟ ಹಾಕಿದ್ದಾರೆ city ಜನ..
— ನವರಸನಾಯಕ ಜಗ್ಗೇಶ್ (@Jaggesh2) May 13, 2018
ಶಹಭಾಸ್ ಜೈ ಬೆಂಗಳೂರು ವಾಸಿಗಳೆ
ಏನ್ ಬಧ್ಧತೆ..ಏನ್ ಪ್ರೇಮ..ಏನ್ ಸ್ವಾಭಿಮಾನ..ಅಂತರರಾಷ್ಟ್ರದ ಗುಣಮಟ್ಟ ಬೇಕು.tvಕಂಡರೆ ಸಾಕು ಏನು ವಾದಮಂಡನೆ..ಮೆಚ್ಚಬೇಕು ಬಧ್ಧತೆ..ಹಳ್ಳಿಯಲ್ಲಿ ದುಡ್ಡಿಗೆvote..
Cityಯಲ್ಲಿ boothತಿರುಗಿ ನೋಡಲ್ಲಾ.
ಹೇಗೆ ಬದಲಾವಣೆ..ಯಾರಿಂದ ಬದಲಾವಣೆ..ಯಾಕೆ ಬದಲಾವಣೆ..
ನಗುಬರುತ್ತಿದೆ. pic.twitter.com/2hZ6mPI9c0
ಮತದಾನ ಮಾಡಿ ಉತ್ತಮ ಆಯ್ಕೆ ಮಾಡದೇ ಇದ್ದರೆ, ಬದಲಾವಣೆ ಹೇಗೆ ತಾನೆ ತರಲು ಸಾಧ್ಯ ಅಂತ ತಮ್ಮ ಟ್ವೀಟ್ ಮೂಲಕ ಬೆಂಗಳೂರಿಗರನ್ನ ಜಗ್ಗೇಶ್ ಪ್ರಶ್ನಿಸಿದ್ದಾರೆ.
ವೋಟ್ ಮಾಡಿದ ಸ್ಟಾರ್ ಪಟ್ಟಿ : ಮತದಾನ ಮಾಡಿ ಜವಾಬ್ದಾರಿ ಮೆರೆದವರು
ಮತದಾನದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ, ಬೆಂಗಳೂರು ನಗರದಲ್ಲಿಯೇ ಅತಿ ಕಡಿಮೆ ಮತದಾನ ಆಗಿರುವುದು ವಿಷಾದನೀಯ.
ಅಂದ್ಹಾಗೆ, ನಟ ಜಗ್ಗೇಶ್ ಯಶವಂತಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ. ವರ್ಷಗಳ ನಂತರ ಕಣಕ್ಕೆ ಇಳಿದಿರುವ ಜಗ್ಗೇಶ್ ಗೆಲುವಿನ ನಗೆ ಬೀರುತ್ತಾರಾ.? ಕಾದು ನೋಡಬೇಕು.