Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಣ್ಣಾವ್ರ ಅಭಿಮಾನಿ ಜಗ್ಗೇಶ್ ಗೆ ಅದೃಷ್ಟ ಅಂದ್ರೆ ಇದೇ ನೋಡಿ
Recommended Video
ಕನ್ನಡದ ಖ್ಯಾತ ನಟ, ನವರಸ ನಾಯಕ ಜಗ್ಗೇಶ್ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಕ್ಕಿದೆ. ನಿನ್ನೆ ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಜಗ್ಗೇಶ್ ಅವರು ಯಶವಂತಪುರದಿಂದ ಸ್ಪರ್ಧೆ ಮಾಡುತ್ತಿರುವುದು ಅಧಿಕೃತ ಘೋಷಣೆಯಾಗಿದೆ.
ಇದು ಸ್ವತಃ ಜಗ್ಗೇಶ್ ಅವರೇ ಹೇಳುವಾಗೆ ಬಯಸದೇ ಬಂದ ಭಾಗ್ಯ. ಯಾಕಂದ್ರೆ, ಜಗ್ಗೇಶ್ ಅವರು ಸಾರ್ವಜನಿಕವಾಗಿ ಎಲ್ಲಿಯೂ ನಾನು ಈ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ನನಗೆ ಈ ಕ್ಷೇತ್ರದ ಟಿಕೆಟ್ ಬೇಕು ಎಂದು ಕೇಳಿಲ್ಲ. ಆದ್ರೆ, ರಾಜಕೀಯ ಲೆಕ್ಕಾಚಾರಗಳಲ್ಲಿ ಜಗ್ಗೇಶ್ ಅವರಿಗೆ ಟಿಕೆಟ್ ಸಿಕ್ಕಿದೆ.
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾದ ಇಂದು (ಏಪ್ರಿಲ್ 24) ಭಾರತ್ ನಗರದಲ್ಲಿ ಮಧ್ಯಾಹ್ನ 12.30ಕ್ಕೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಇದು ಇನ್ನೊಂದು ರೀತಿಯಲ್ಲಿ ಬಯಸದೇ ಬಂದ ಭಾಗ್ಯ.
ಯಶವಂತಪುರದಿಂದ ಚುನಾವಣಾ ಕಣಕ್ಕೆ ಬಿಜೆಪಿ ಅಭ್ಯರ್ಥಿ ನಟ ಜಗ್ಗೇಶ್!
ಹೌದು, ಹೇಳಿ ಕೇಳಿ ಜಗ್ಗೇಶ್ ಅವರು, ನಟಸಾರ್ವಭೌಮ ಡಾ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿ. ಇಂದು ಅಣ್ಣಾವ್ರ ಹುಟ್ಟುಹಬ್ಬ. ರಾಜ್ ಅವರನ್ನ ತಮ್ಮ ಆರಾಧ್ಯ ದೈವ ಎಂದೇ ಹೇಳಿಕೊಳ್ಳುವ ಜಗ್ಗೇಶ್ ಅವರು, ಅವರ ಹುಟ್ಟುಹಬ್ಬದಂದೇ ಚುನಾವಣ ಕಣಕ್ಕೆ ಇಳಿಯುತ್ತಿದ್ದಾರೆ. ಹೀಗಾಗಿ, ಟಿಕೆಟ್ ಸಿಕ್ಕಿದ್ದು ಮತ್ತು ನಾಮಪತ್ರ ಸಲ್ಲಿಸುತ್ತಿರುವುದು ಜಗ್ಗೇಶ್ ಅವರ ಪಾಲಿಗೆ ಖುಷಿ ಕೊಟ್ಟಿದೆ.
'ಲಕ್ಕಿ ಸ್ಟಾರ್' ನವರಸ ನಾಯಕ ಜಗ್ಗೇಶ್ ರಾಜಕೀಯ ಪಯಣ
ಜಗ್ಗೇಶ್ ಅವರು ಈ ಹಿಂದೆ ತುರುವೇಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. ಜಗದೀಶ್ ಶೆಟ್ಟರ್ ಅವರು ವಿಧಾನಸಭೆ ಸ್ಪೀಕರ್ ಆಗಿದ್ದ ಕಾಲದಲ್ಲಿ ಶಾಸಕ ಸ್ಥಾನ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಕೆಎಸ್ಸಾರ್ಟಿಸಿ ಉಪಾಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆ ಹುದ್ದೆ ನಿಭಾಯಿಸಿದರು. ಸದ್ಯ ಕರ್ನಾಟಕ ಬಿಜೆಪಿಯ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದಾರೆ.