Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾದಿಂದ ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡ ಜಗ್ಗೇಶ್; ಭಾವುಕ ಪೋಸ್ಟ್
ಕೊರೊನಾ ಭೀಕರ ಸ್ಥಿತಿಗೆ ಇಡೀ ದೇಶವೇ ನಲುಗಿ ಹೋಗಿದೆ. ಎಲ್ಲಿ ನೋಡಿದ್ರು, ಎಲ್ಲಿ ಕೇಳಿದ್ರು ಸಾವು ನೋವಿನ ಸುದ್ದಿಗಳೇ ಕಾಣಸಿಗುತ್ತಿದೆ. ಕೊರೊನಾ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿದೆ. ಸಾಮಾನ್ಯರು, ಗಣ್ಯರು, ದುಡ್ಡು ಇರೋರು, ಇಲ್ಲದೆ ಇರೋರು ಯಾರನ್ನು ಬಿಡದೆ ಸಾಯಿಸುತ್ತಿದೆ.
ಪರಿಸ್ಥಿತಿ ನಿಯಂತ್ರಣ ತಪ್ಪಿದ್ದು, ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಅಂತ ಪರದಾಡುತ್ತಿದ್ದಾರೆ. ಕೊರೊನಾ ಮಹಾಮಾರಿಗೆ ಹಿರಿಯ ನಟ ಜಗ್ಗೇಶ್ ಅವರ ಆಪ್ತ ಸ್ನೇಹಿತ ಬಲಿಯಾಗಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ನಟಿ ಮಾಲಾಶ್ರೀಗೆ ತಲೆಬಾಗಿ ಕ್ಷಮೆ ಕೇಳಿದ ಹಿರಿಯ ನಟ ಜಗ್ಗೇಶ್
ತನ್ನ ಸ್ನೇಹಿತನನ್ನು ಹೆಮ್ಮಾರಿ ಹದ್ದಿನಂತೆ ಆರಿಸಿಕೊಂಡು ಹೋಯಿತಿ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಜಗ್ಗೇಶ್, 'ನನ್ನ ಪಕ್ಕದಲ್ಲಿ ಕೂತು ಬಾಲ್ಯದ ನನ್ನ ತೀಟೆ ಸಹಿಸಿ ನಕ್ಕು ನಲಿದು ಜೊತೆಗೂಡಿ ಬೆಳೆದ ನನ್ನ ಬಾಲ್ಯ ಸ್ನೇಹಿತ U.V ಸತೀಶ್ ನನ್ನು ಕೋವಿಡ್ ಹೆಮ್ಮಾರಿ ಹದ್ದಿನಂತಿ ಆರಿಸಿಕೊಂಡು ಹೋಯಿತು. Am totally upset. ಆತ್ಮೀಯ ಆತ್ಮವೆ ಹೋಗಿ ಬಾ Loudly crying face ಯಾಕೆ ಈ ಶಿಕ್ಷೆ ಮನುಕುಲಕ್ಕೆ' ಎಂದು ಬರೆದುಕೊಂಡಿದ್ದಾರೆ.
Recommended Video
ನಟ ಜಗ್ಗೇಶ್ ಅಗತ್ಯ ಇರೋರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿಸುವ ಪ್ರತ್ನ ಮಾಡುತ್ತಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಜಗ್ಗೇಶ್ ಅನೇಕರಿಗೆ ಸಹಾಯ ಮಾಡಿದ್ದಾರೆ. ನಿನ್ನೆ 23 ಜನರ ಕೊರೊನಾ ರಕ್ಷಣೆಗೆ ಮನೆಯ ಹಿರಿಯನಾಗಿ ಹೋರಾಡಿದ್ದೇನೆ ಎಂದು ಹೇಳಿದ್ದಾರೆ. ಸಾಕಷ್ಟು ಮಂದಿಗೆ ಜಗ್ಗೇಶ್ ಸಹಾಯ ಹಸ್ತ ಚಾಚುತ್ತಿದ್ದಾರೆ.