Don't Miss!
- Finance ಬ್ಯಾಂಕುಗಳ ಮೇಲೆ ನಡೆಯಲಿದ್ಯಾ ಸೈಬರ್ ಅಟ್ಯಾಕ್! ಎಚ್ಚರ ಎಚ್ಚರ ಎಂದ ಆರ್ಬಿಐ
- News ಆಜಾನ್ ಕೂಗುತ್ತಿದ್ದಾಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ: ವಿಡಿಯೋ ಹಂಚಿಕೊಂಡು ವಿಜಯೇಂದ್ರ ಕಿಡಿ
- Automobiles BAJAJ CNG ಬೈಕ್ ಚಿತ್ರಗಳು ಸೋರಿಕೆ: ಬೆಲೆ ಕೇಳಿದರೆ ಶಾಕ್ ಆಗುವುದಂತೂ ಪಕ್ಕಾ!
- Sports ಜೆರ್ಸಿ ನಂ.18, ವಿರಾಟ್ ಕೊಹ್ಲಿ ಜೊತೆಗಿನ ಹೋಲಿಕೆ ಬಗ್ಗೆ ಸ್ಮೃತಿ ಮಂಧಾನ ಹೇಳಿದ್ದೇನು?
- Technology Lenovo: ಲೆನೊವೊದಿಂದ ಎಐ ಚಾಲಿತ ಲೀಜನ್ ಗೇಮಿಂಗ್ ಲ್ಯಾಪ್ಟಾಪ್ಗಳು ಲಾಂಚ್; ಬೆಲೆ ಎಷ್ಟು?
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಲಾಭಿಮಾನಿ ಇರುವತನಕ ಕಲಾವಿದನಿಗೆ ಸಾವಿಲ್ಲಾ'- ಜಗ್ಗೇಶ್
ರಾಷ್ಟ್ರ ಪ್ರಶಸ್ತಿ ವಿಜೇತ, ದಿವಂಗತ ನಟ ಸಂಚಾರಿ ವಿಜಯ್ ಜೀವನದ ಕುರಿತು 'ಅನಂತವಾಗಿರು' ಎಂಬ ಪುಸ್ತಕ ಹೊರತರಲಾಗುತ್ತಿದೆ. ಈ ಪುಸ್ತಕದ ಬಗ್ಗೆ ಹಿರಿಯ ನಟ ಜಗ್ಗೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದು, '''ಕಲಾಭಿಮಾನಿ ಇರುವತನಕ ಕಲಾವಿದನಿಗೆ ಸಾವಿಲ್ಲಾ'' ಎಂದಿದ್ದಾರೆ.
ಸಂಚಾರಿ ವಿಜಯ್ ಪುಸ್ತಕದ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ''ಕಲಾವಠಾರ ಪರವಾಗಿ ಹೃದಯಪೂರ್ವಕ ಧನ್ಯವಾದ. ಕೆಲದಿನ ಕೆಲಚಿತ್ರಕ್ಕೆ ಮಾತ್ರ ಕಲಾವಿದನ ಕೃಷಿ ಕಣ್ಮರೆಯಾಗದೆ ಇಂಥ ಅದ್ಭುತ ಕಾರ್ಯದಿಂದ ಕಲಾವಿದ ಜನರಮನದಲ್ಲಿ ಉಳಿಯಲಿ. ನೂರಾರು ಕನಸುಗಳ ತೆರೆಯಮೇಲೆ ಅನಾವರಣ ಮಾಡಬೇಕಿದ್ದ ಆತ್ಮ. ಆಕಸ್ಮಿಕ ನಿರ್ಗಮನ. ಇದರಿಂದ ಪೂರ್ಣವಾಗಿ ಕಲಾವಿದನ ಆತ್ಮ ಸಂತೃಪ್ತಿ ಹೊಂದಲಿ. ಕಲಾಭಿಮಾನಿ ಇರುವತನಕ ಕಲಾವಿದನಿಗೆ ಸಾವಿಲ್ಲಾ'' ಎಂದು ಹೇಳಿದ್ದಾರೆ.
'ಅನಂತವಾಗಿರು...' ಪುಸ್ತಕ ರೂಪದಲ್ಲಿ ಸಂಚಾರಿ ವಿಜಯ್ ಜೀವನ
ಈ ಹಿಂದೆ ಅಂಬರೀಶ್, ಕಿಚ್ಚ ಸುದೀಪ್ ಅವರ ಕುರಿತಾದ ಪುಸ್ತಕ ಬರೆದಿದ್ದ ಪತ್ರಕರ್ತ, ರಾಜ್ಯ ಪ್ರಶಸ್ತಿ ವಿಜೇತ ಲೇಖಕ ಶರಣು ಹುಲ್ಲೂರು ಸಂಪಾದಕತ್ವದಲ್ಲಿ 'ಅನಂತವಾಗಿರು' ಎಂಬ ಪುಸ್ತಕ ಹೊರಬರುತ್ತಿದೆ. ಇದರಲ್ಲಿ ಸಂಚಾರಿ ವಿಜಯ್ ಅವರ ಜೀವನದ ಅನೇಕ ಕಥೆಗಳು ಒಳಗೊಂಡಿದೆ.
ಈ ಕುರಿತು ಫಿಲ್ಮಿಬೀಟ್ ಕನ್ನಡದ ಜೊತೆ ಮಾತನಾಡಿದ ಶರಣು ಹುಲ್ಲೂರು, ''ಇದು ಬಯೋಗ್ರಫಿ ಮಾದರಿಯಲ್ಲಿ ರೂಪುಗೊಂಡಿರುವ ಪುಸ್ತಕ. ಇದರಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದನ ಬಾಲ್ಯ, ಜೀವನದ ಬಗ್ಗೆ ಸಹೋದರರು, ಕುಟುಂಬದವರು ಹೇಳಿರುವ ವಿಷಯಗಳಿವೆ. ಕಾಲೇಜು ದಿನಗಳ ಬಗ್ಗೆ ಸಂಚಾರಿ ಸ್ನೇಹಿತರು, ಆಪ್ತರು ಹಂಚಿಕೊಂಡಿರುವ ವಿಚಾರಗಳಿವೆ. ರಂಗಭೂಮಿ, ಸಿನಿಮಾ, ಕಿರುತೆರೆ, ಸಂಗೀತ ಸೇರಿದಂತೆ ವಿಜಯ್ ಅವರು ನಡೆದು ಬಂದ ಜರ್ನಿ ಬಗ್ಗೆ ಗೆಳೆಯರು, ಸಿನಿಮಾ ನಿರ್ದೇಶಕರು, ರಂಗಕರ್ಮಿಗಳು, ಸಹಪಾಠಿಗಳು ಮಾತನಾಡಿದ್ದಾರೆ'' ಎಂದು ತಿಳಿಸಿದರು.
Recommended Video
ಖ್ಯಾತ ಲೇಖಕರಾದ ವಸುಧೇಂದ್ರ, ಜೋಗಿ, ಸಂಧ್ಯಾರಾಣಿ, ನಿರ್ದೇಶಕ ಲಿಂಗದೇವರು, ಮಂಸೋರೆ, ಅರವಿಂದ್ ಕುಪ್ಳಿಕರ್, ಕವಿರಾಜ್, ಎಂಎಸ್ ರಮೇಶ್, ರಂಗ ನಿರ್ದೇಶಕಿ ಮಂಗಳಾ, ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ, ಲೇಖಕ ಕೆ ಪುಟ್ಟಸ್ವಾಮಿ ಸೇರಿದಂತೆ ವಿಜಯ್ ಜೊತೆ ಒಡನಾಟ ಹೊಂದಿದ್ದ ಸುಮಾರು 32ಕ್ಕೂ ಅಧಿಕ ವ್ಯಕ್ತಿಗಳು ವಿಜಯ್ ಬಗ್ಗೆ ಬರೆದಿರುವ ಬರಹಗಳನ್ನು ಈ ಪುಸ್ತಕ ಒಳಗೊಂಡಿದೆ.