Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಸಿನಿಮಾದ ಕಲೆಕ್ಷನ್ ನೋಡಿ ಖುಷಿಯಾದ ಜಗ್ಗೇಶ್
ದರ್ಶನ್ ಅಭಿನಯದ 'ಕುರುಕ್ಷೇತ್ರ' ಸಿನಿಮಾ ಈ ವರ್ಷದ ದೊಡ್ಡ ಹಿಟ್ ಆಗಿದೆ. ಈ ಸಿನಿಮಾ ಇದೀಗ ಕಿರುತೆರೆಯಲ್ಲಿ ಪ್ರದರ್ಶನ ಆಗುತ್ತಿದೆ. ಜೀ ಕನ್ನಡ ವಾಹಿನಿ ಮೂಲಕ ಸಿನಿಮಾ ಮನೆ ಮನೆಗೆ ಬರುತ್ತಿದೆ.
ಈ ಸಿನಿಮಾದ ಬಗ್ಗೆ ನಟ ಜಗ್ಗೇಶ್ ಮಾತನಾಡಿದ್ದಾರೆ. ಜೀ ಕನ್ನಡದ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ 'ಕುರುಕ್ಷೇತ್ರ' ಸಿನಿಮಾವನ್ನು ಜಗ್ಗೇಶ್ ಹೊಗಳಿದ್ದಾರೆ. 'ಕುರುಕ್ಷೇತ್ರ' ಕನ್ನಡದ ಹೆಮ್ಮೆಯ ಸಿನಿಮಾ. ಈ ಸಿನಿಮಾ ನನಗೆ ಇರುವ ಮಾಹಿತಿ ಪ್ರಕಾರ 75 ಕೋಟಿ ಕಲೆಕ್ಷನ್ ಮಾಡಿದೆ ಎಂದಿದ್ದಾರೆ.
'ಕುರುಕ್ಷೇತ್ರ' ಮಲಯಾಳಂ ವರ್ಷನ್ ರಿಲೀಸ್ ಗೆ ದಿನಾಂಕ ನಿಗದಿ
'ಕುರುಕ್ಷೇತ್ರ' ಕಲೆಕ್ಷನ್ ಮೊತ್ತವನ್ನು ತಿಳಿಸಿದ ಜಗ್ಗೇಶ್ ಸಿನಿಮಾದ ಯಶಸ್ಸು ಕಂಡು ಖುಷಿಯಾಗಿದ್ದಾರೆ. ನಟಿ ರಕ್ಷಿತಾ ಕೂಡ ಈ ಬಗ್ಗೆ ಮಾತನಾಡಿದ್ದು, ದರ್ಶನ್ ನನಗೆ ತಾನೇ ಬಂದು ಯಾವ ಸಿನಿಮಾವನ್ನು ನೋಡು ಎಂದು ಹೇಳಿರಲಿಲ್ಲ. ಆದರೆ, ಕುರುಕ್ಷೇತ್ರ ನೋಡು ಎಂದು ಹೇಳಿದ್ದ. ಅವನಿಗೆ ಅಷ್ಟೊಂದು ಆತ್ಮವಿಶ್ವಾಸ ಇತ್ತು ಎಂದರು.
ಇದೇ ಕಾರ್ಯಕ್ರಮದಲ್ಲಿ ನಟ ಕೋಮಲ್ ಕೂಡ ಅತಿಥಿ ಆಗಿದ್ದರು. ಟಿವಿಯಲ್ಲಿ ಸಿನಿಮಾ ಬರುತ್ತಿದ್ದು, ಎಲ್ಲರೂ ನೋಡಿ ಎಂದು ಹೇಳಿದರು. ಅಂದಹಾಗೆ, 'ಕುರುಕ್ಷೇತ್ರ' ಸಿನಿಮಾ ಇದೇ ಭಾನುವಾರ ಸಂಜೆ 6.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ.
ಕಿರುತೆರೆಯಲ್ಲಿ ಪ್ರಸಾರ ಆಗ್ತಿದೆ 'ಮುನಿರತ್ನ ಕುರುಕ್ಷೇತ್ರ' ಸಿನಿಮಾ
'ಕುರುಕ್ಷೇತ್ರ' ನಾಗಣ್ಣ ನಿರ್ದೇಶನದ ಸಿನಿಮಾವಾಗಿದ್ದು, ಮುನಿರತ್ನ ನಿರ್ಮಾಣ ಮಾಡಿದ್ದರು. ಈ ವರ್ಷ ನೂರು ದಿನ ಓಡಿದ ಸಿನಿಮಾಗಳ ಪೈಕಿ ಇದು ಒಂದಾಗಿದೆ.