Don't Miss!
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಸಿನಿಮಾದ ಕಲೆಕ್ಷನ್ ನೋಡಿ ಖುಷಿಯಾದ ಜಗ್ಗೇಶ್
ದರ್ಶನ್ ಅಭಿನಯದ 'ಕುರುಕ್ಷೇತ್ರ' ಸಿನಿಮಾ ಈ ವರ್ಷದ ದೊಡ್ಡ ಹಿಟ್ ಆಗಿದೆ. ಈ ಸಿನಿಮಾ ಇದೀಗ ಕಿರುತೆರೆಯಲ್ಲಿ ಪ್ರದರ್ಶನ ಆಗುತ್ತಿದೆ. ಜೀ ಕನ್ನಡ ವಾಹಿನಿ ಮೂಲಕ ಸಿನಿಮಾ ಮನೆ ಮನೆಗೆ ಬರುತ್ತಿದೆ.
ಈ ಸಿನಿಮಾದ ಬಗ್ಗೆ ನಟ ಜಗ್ಗೇಶ್ ಮಾತನಾಡಿದ್ದಾರೆ. ಜೀ ಕನ್ನಡದ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ 'ಕುರುಕ್ಷೇತ್ರ' ಸಿನಿಮಾವನ್ನು ಜಗ್ಗೇಶ್ ಹೊಗಳಿದ್ದಾರೆ. 'ಕುರುಕ್ಷೇತ್ರ' ಕನ್ನಡದ ಹೆಮ್ಮೆಯ ಸಿನಿಮಾ. ಈ ಸಿನಿಮಾ ನನಗೆ ಇರುವ ಮಾಹಿತಿ ಪ್ರಕಾರ 75 ಕೋಟಿ ಕಲೆಕ್ಷನ್ ಮಾಡಿದೆ ಎಂದಿದ್ದಾರೆ.
'ಕುರುಕ್ಷೇತ್ರ' ಮಲಯಾಳಂ ವರ್ಷನ್ ರಿಲೀಸ್ ಗೆ ದಿನಾಂಕ ನಿಗದಿ
'ಕುರುಕ್ಷೇತ್ರ' ಕಲೆಕ್ಷನ್ ಮೊತ್ತವನ್ನು ತಿಳಿಸಿದ ಜಗ್ಗೇಶ್ ಸಿನಿಮಾದ ಯಶಸ್ಸು ಕಂಡು ಖುಷಿಯಾಗಿದ್ದಾರೆ. ನಟಿ ರಕ್ಷಿತಾ ಕೂಡ ಈ ಬಗ್ಗೆ ಮಾತನಾಡಿದ್ದು, ದರ್ಶನ್ ನನಗೆ ತಾನೇ ಬಂದು ಯಾವ ಸಿನಿಮಾವನ್ನು ನೋಡು ಎಂದು ಹೇಳಿರಲಿಲ್ಲ. ಆದರೆ, ಕುರುಕ್ಷೇತ್ರ ನೋಡು ಎಂದು ಹೇಳಿದ್ದ. ಅವನಿಗೆ ಅಷ್ಟೊಂದು ಆತ್ಮವಿಶ್ವಾಸ ಇತ್ತು ಎಂದರು.
ಇದೇ ಕಾರ್ಯಕ್ರಮದಲ್ಲಿ ನಟ ಕೋಮಲ್ ಕೂಡ ಅತಿಥಿ ಆಗಿದ್ದರು. ಟಿವಿಯಲ್ಲಿ ಸಿನಿಮಾ ಬರುತ್ತಿದ್ದು, ಎಲ್ಲರೂ ನೋಡಿ ಎಂದು ಹೇಳಿದರು. ಅಂದಹಾಗೆ, 'ಕುರುಕ್ಷೇತ್ರ' ಸಿನಿಮಾ ಇದೇ ಭಾನುವಾರ ಸಂಜೆ 6.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ.
ಕಿರುತೆರೆಯಲ್ಲಿ ಪ್ರಸಾರ ಆಗ್ತಿದೆ 'ಮುನಿರತ್ನ ಕುರುಕ್ಷೇತ್ರ' ಸಿನಿಮಾ
'ಕುರುಕ್ಷೇತ್ರ' ನಾಗಣ್ಣ ನಿರ್ದೇಶನದ ಸಿನಿಮಾವಾಗಿದ್ದು, ಮುನಿರತ್ನ ನಿರ್ಮಾಣ ಮಾಡಿದ್ದರು. ಈ ವರ್ಷ ನೂರು ದಿನ ಓಡಿದ ಸಿನಿಮಾಗಳ ಪೈಕಿ ಇದು ಒಂದಾಗಿದೆ.