Don't Miss!
- Technology ಹಾನರ್ನಿಂದ ಹೊಸ ಬ್ಲೂಟೂತ್ ಸ್ಪೀಕರ್ ಲಾಂಚ್: ಬೆಲೆ ಎಷ್ಟು?
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Sports IPL ಬಿಡಿ, WPLನಲ್ಲಿ ಆರ್ಸಿಬಿಗೆ ಗೆದ್ದ ಮೊತ್ತಕ್ಕೂ ಸಮವಿಲ್ಲ PSL ವಿಜೇತರಿಗೆ ಸಿಕ್ಕ ಬಹುಮಾನ
- Lifestyle ಕೆಜಿಎಫ್ ಎಲ್ ಡೊರಾಡೊ ಕಥೆ ಕೇಳಿದ್ದೀರಾ? ಇದು ಸಮುದ್ರದಲ್ಲಿ ಮುಳುಗಿದ ಎಲ್ ಡೊರಾಡೊ ಹಡಗಿನ ಕಥೆ..!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನವರಸ ನಾಯಕ 42 ಬಾರಿ ನೋಡಿದ ಏಕೈಕ ಚಿತ್ರ ಇದು
ಕನ್ನಡ ಸಿನಿಮಾರಂಗದ ನವರಸ ನಾಯಕ ಜಗ್ಗೇಶ್ ಕನ್ನಡ ಒಂದು ಸಿನಿಮಾವನ್ನ ಸುಮಾರು 42 ಬಾರಿ ನೋಡಿದ್ದಾರಂತೆ. ಅದಷ್ಟೇ ಅಲ್ಲದೆ ಮತ್ತೊಂದು ಚಿತ್ರವನ್ನು 29 ಸಲ ನೋಡಿದ್ದಾರಂತೆ. ಈ ವಿಚಾರವನ್ನು ಜಗ್ಗೇಶ್ ಅವರೇ ತಮ್ಮ ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದಾರೆ.
ಅಷ್ಟಕ್ಕೂ ಜಗ್ಗೇಶ್ ಈ ವಿಚಾರವನ್ನು ಈಗ ಚರ್ಚೆ ಮಾಡಲು ಕಾರಣವೂ ಇದೆ. ವಿಷ್ಣುವರ್ಧನ್ ಅಭಿನಯದ 'ನಾಗರಹಾವು' ಸಿನಿಮಾ ಹೊಸ ರೂಪದಲ್ಲಿ ತೆರೆಗೆ ಬರಲು ಸಿದ್ದವಾಗಿದೆ. ಇದೇ ಸಂದರ್ಭದಲ್ಲಿ ನವರಸ ನಾಯಕ ನಾನು 42 ಬಾರಿ ನೋಡಿದ ಏಕೈಕ 'ನಾಗರಹಾವು' ಚಿತ್ರ ಎನ್ನುವುದನ್ನು ಹೇಳಿಕೊಂಡಿದ್ದಾರೆ.
ಮತ್ತೆ ರೀ ರಿಲೀಸ್ ಆಗುತ್ತಿದೆ ಪುಟ್ಟಣ್ಣನ 'ನಾಗರಹಾವು' ಸಿನಿಮಾ
ಅದರ ಜೊತೆಯಲ್ಲಿ ಡಾ ರಾಜ್ ಕುಮಾರ್ ಅವರ 'ಮಯೂರ' ಸಿನಿಮಾವನ್ನು 29 ಬಾರಿ ನೋಡಿದ್ದೇನೆ ಎಂದಿದ್ದಾರೆ. "ನನ್ನ ಬಾಲ್ಯದಲ್ಲಿ ನಾನು 42 ಬಾರಿ ನೋಡಿದ ಚಿತ್ರ ಇದೊಂದೆ..ಬಿಟ್ಟರೆ ಮಯೂರ 29 ಬಾರಿ..ಮತ್ತೆ ನಾಗರ ಹಾವು ಚಿತ್ರ ವಿಷ್ಣುವರ್ಧನ ಮಯೂರ ರಾಜಣ್ಣ ಹುಟ್ಟಲಾರ.. ಬಂದರು ಪ್ರೀತಿಕೊಟ್ಟು ಹೋದರು ಮಹನೀಯರು" ಎಂದು ಫೋಟೋ ಮೂಲಕ ಟ್ವೀಟ್ ಮಾಡಿದ್ದಾರೆ.
'ನಾಗರಹಾವು' ಸಿನಿಮಾವನ್ನ ನಿರ್ಮಾಪಕ ವೀರಸ್ವಾಮಿ ನಿರ್ಮಾಣ ಮಾಡಿದ್ದರು. ಈಗ ಅವರ ಎರಡನೇ ಪುತ್ರ, ರವಿಚಂದ್ರನ್ ಸಹೋದರ ಬಾಲಾಜಿ ಈ ಚಿತ್ರವನ್ನು ಮತ್ತೆ ರೀ ರಿಲೀಸ್ ಮಾಡುವ ಚಿಂತನೆ ನಡೆಸಿದ್ದಾರೆ. ಹೊಸ ತಂತ್ರಜ್ಙಾನದೊಂದಿಗೆ 7.1 ಡಿಜಿಟಲ್ ಅಲ್ಟ್ರಾ ಸೌಂಡಿಂಗ್ ಎಫೆಕ್ಟ್ ನಲ್ಲಿ 'ನಾಗರಹಾವು' ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ. ಚಿತ್ರವನ್ನು ಮತ್ತೆ ಬಿಡುಗಡೆ ಮಾಡುವ ಪ್ಲಾನ್ ಮಾಡಿರುವ ಬಾಲಾಜಿ ಚಿತ್ರದ ಪ್ರಚಾರಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅಂಬರೀಶ್ ಅವರನ್ನು ಬಳಸಿಕೊಳ್ಳಲಿದ್ದಾರಂತೆ.