Don't Miss!
- News Lok Sabha Election 2024: ಚಾಮರಾಜನಗರ ಕ್ಷೇತ್ರದಲ್ಲಿರುವ ಮತದಾರರ ವಿವರ-ಅಂಕಿಅಂಶಗಳ ಮಾಹಿತಿ
- Finance ನೂಡಲ್ಸ್ ಪ್ಯಾಕೆಟ್ ಒಳಗಿತ್ತು ವಜ್ರಗಳ ರಾಶಿ, ಬರೋಬ್ಬರಿ 6.46 ಕೋಟಿ ರೂ. ಮೌಲ್ಯದ ಚಿನ್ನ, ಡೈಮಂಡ್ ವಶ!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ನಿರ್ಮಾಪಕರು ಭಿಕ್ಷುಕರೇ.? ಚಿತ್ರರಂಗದ ದೌರ್ಭಾಗ್ಯದ ಬಗ್ಗೆ ಜಗ್ಗೇಶ್ ಆಕ್ರೋಶ.!
ಮನೆಗೆ ಮಾರಿ, ಊರಿಗೆ ಉಪಕಾರಿ ಎಂಬಂತೆ... ಎಷ್ಟೋ ಬಾರಿ ಕರ್ನಾಟಕದಲ್ಲಿ, ಕನ್ನಡ ಚಿತ್ರರಂಗದಲ್ಲಿ ಕನ್ನಡ ಪ್ರತಿಭೆಗಳಿಗೆ ಅವಕಾಶ ಸಿಗುವುದಿಲ್ಲ. ಕನ್ನಡದ ಮಣ್ಣಿನ ಪ್ರತಿಭಾವಂತರಿಗೆ ಮಣೆ ಹಾಕದೆ, ಭಾಷೆ ಬಾರದ ಪರಭಾಷೆಯವರಿಗೆ ರತ್ನಗಂಬಳಿ ಹಾಸುವ ಪದ್ಧತಿ ಸ್ಯಾಂಡಲ್ ವುಡ್ ನಲ್ಲಿ ಬಹಳ ವರ್ಷಗಳಿಂದಲೂ ಇದೆ.
ಹಾಗಂತ, ಕನ್ನಡ ಚಿತ್ರರಂಗದಲ್ಲಿ ಇರುವ ಎಲ್ಲರೂ ಅದನ್ನೇ ಮಾಡ್ತಾರೆ ಅಂತಲ್ಲ. ತಮ್ಮ ಸಿನಿಮಾಗಳಿಗೆ ಹೆಚ್ಚಿನ ಮೈಲೇಜ್ ಸಿಗಬಹುದು ಎಂಬ ಕಾರಣಕ್ಕೆ ಕೆಲವರು ಪರಭಾಷೆಯ ಸ್ಟಾರ್ ಗಳನ್ನ ಕರೆದು ತರುತ್ತಾರೆ. ಕನ್ನಡ ನಿರ್ಮಾಪಕರ ಆಹ್ವಾನಕ್ಕೆ ಬೆಲೆ ಕೊಟ್ಟು ಅಲ್ಲಿನ ಸ್ಟಾರ್ ಗಳು ಇಲ್ಲಿಗೆ ಬಂದರೆ ಖುಷಿಯೇ. 'ಇಲ್ಲ' ಅಂದ್ರೆ..?
'ಪ್ಲಾಸ್ಟಿಕ್ ಬೊಂಬೆ', 'ಸೊಕ್ಕಿನ ಹುಡುಗಿ' ಶ್ರುತಿ ಹಾಸನ್ ವಿರುದ್ಧ ಕನ್ನಡಿಗರು ಸಿಡಿಮಿಡಿ
ಚಿತ್ರರಂಗದ ಈ ಪರಿಸ್ಥಿತಿ ಬಗ್ಗೆ ನವರಸ ನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ''ಕನ್ನಡ ನಿರ್ಮಾಪಕರು ಭಿಕ್ಷುಕರೇ.? ನಮ್ಮವರಿಗೆ ಇನ್ನೂ ಬುದ್ಧಿ ಬಂದಿಲ್ಲ'' ಎಂದು ತಮ್ಮ ಬೇಸರವನ್ನ ಜಗ್ಗೇಶ್ ಹೊರಹಾಕಿದ್ದಾರೆ. ಮುಂದೆ ಓದಿರಿ....
ಶ್ರುತಿ ಹಾಸನ್ ವಿಚಾರದ ಬಗ್ಗೆ ಜಗ್ಗೇಶ್ ಮಾತು
ನಟ ಧ್ರುವ ಸರ್ಜಾ ಹಾಗೂ ನಿರ್ದೇಶಕ ನಂದ ಕಿಶೋರ್ ಕಾಂಬಿನೇಶನ್ ನಲ್ಲಿ ಮೂಡಿಬರುವ 'ಪೊಗರು' ಚಿತ್ರಕ್ಕೆ ನಟಿ ಶ್ರುತಿ ಹಾಸನ್ ನಾಯಕಿ ಆಗಲಿದ್ದಾರೆ ಎಂಬ ಮಾತುಗಳು ಕಳೆದ ಕೆಲ ದಿನಗಳ ಹಿಂದೆ ಕೇಳಿಬಂದಿತ್ತು. ಆದ್ರೆ, 'ಕನ್ನಡ ಸಿನಿಮಾದಲ್ಲಿ ನಟಿಸುವ ಯೋಚನೆ ಇಲ್ಲ' ಎಂದು ನಟಿ ಶ್ರುತಿ ಹಾಸನ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ನಟ ಜಗ್ಗೇಶ್ ಆಕ್ರೋಶಗೊಂಡಿದ್ದಾರೆ.
ಅಂತೆ-ಕಂತೆಯೆಲ್ಲ ಸುಳ್ಳಾಯ್ತಲ್ಲ: ಕನ್ನಡಕ್ಕೆ ಕಮಲ್ ಪುತ್ರಿ ಶ್ರುತಿ ಬರ್ತಿಲ್ಲ.!
ನಾಯಕಿಯರಿಗೆ ಕೊರತೆ ಇದ್ಯಾ.?
''ನಮ್ಮ ಕನ್ನಡದಲ್ಲಿ ನಾಯಕಿಯರಿಗೆ ಕೊರತೆಯೇ.? ಇಂಥ ಮಾತು ಕೇಳಿ ಇವರ ಮನೆ ಮುಂದೆ ನಿಲ್ಲಲು ಕನ್ನಡ ನಿರ್ಮಾಪಕರು ಭಿಕ್ಷುಕರೇ.? ನಮ್ಮವರಿಗೆ ಇನ್ನೂ ಬುದ್ಧಿ ಬಂದಿಲ್ಲ. ದೌರ್ಭಾಗ್ಯ'' ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
'ವಿಷ ಕೊಟ್ಟು ಸಾಯಿಸಿ ಸಂತೋಷ ಪಡಿ': 'ವಿಕೃತ'ರಿಗೆ ಮಾತಲ್ಲೇ ಪೆಟ್ಟು ಕೊಟ್ಟ ಜಗ್ಗೇಶ್!
ಮೇಕಪ್ ತೆಗೆದರೆ ಯುವಕರು ಮೈಲಿ ದೂರ ಓಡುತ್ತಾರೆ
''ಕರ್ನಾಟಕದ ಕಾಲೇಜು ಹೆಣ್ಣುಮಕ್ಕಳ ರೂಪದ ಮುಂದೆ ಇವರೆಲ್ಲ ಕಾಲುಧೂಳು.! ಬಣ್ಣ ತೆಗೆದು ಬಂದರೆ ನಮ್ಮ ಯುವಕರು ಮೈಲಿ ದೂರ ಓಡುತ್ತಾರೆ. ಕನ್ನಡಿಗರ ದುಡ್ಡುಬೇಕು, ಕನ್ನಡ ಚಿತ್ರ ಬೇಡ್ವಂತೆ.!'' ಅಂತ ಸಿಡಿಮಿಡಿಗೊಂಡು ಜಗ್ಗೇಶ್ ಟ್ವೀಟಿಸಿದ್ದಾರೆ.
ಜಗ್ಗೇಶ್ ಮಾತುಗಳಿಗೆ ಜೈಕಾರ
ಜಗ್ಗೇಶ್ ರವರ ಈ ಮಾತುಗಳಿಗೆ ಕನ್ನಡಿಗರು, ಕನ್ನಡಾಭಿಮಾನಿಗಳು ಜೈಕಾರ ಹಾಕಿದ್ದಾರೆ. ಜೊತೆಗೆ ನಟಿ ಶ್ರುತಿ ಹಾಸನ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ.