Don't Miss!
- News ನಮ್ಮ ಗ್ಯಾರಂಟಿ ಜನರ ಕೈಯಲ್ಲಿದೆ, ಆದ್ರೆ ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ-ಪ್ರಿಯಾಂಕ್ ಖರ್ಗೆ
- Lifestyle ಬಿಸಿಲಿನಲ್ಲಿ ಬಸವಳಿದಿದ್ದ ಆನೆಗೆ ನೀರು ನೀಡಿ ಹೀರೋ ಆದ ಯುವಕ..!
- Automobiles ಸಾಮಾನ್ಯನ ಸ್ಟೋರಿ: ಬಹುಕಾಲದ ಕನಸನ್ನು ನನಸು ಮಾಡಿಕೊಂಡ ವಿಘ್ನೇಶ..! ನೆಚ್ಚಿನ ವ್ಯಾಗನ್ಆರ್ ಕಾರು ಖರೀದಿ
- Technology ನೀವು ಜಿಯೋ ಗ್ರಾಹಕರೇ?..ಹಾಗಿದ್ರೆ, ಈ ಪ್ಲ್ಯಾನಿಗೆ ಖಂಡಿತಾ ಫಿದಾ ಆಗ್ತೀರಾ!
- Finance ದೀಪಿಕಾ ಪಡುಕೋಣೆಯೊಂದಿಗೆ ಅಂಬಾನಿ ಮಗಳು ಒಪ್ಪಂದ, ಇಲ್ಲಿದೆ ವಿವರ
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇಂದ್ರ ಸಚಿವರಿಗೇ ಇಂಥಹಾ ಸ್ಥಿತಿ: ಜಗ್ಗೇಶ್ ಹಂಚಿಕೊಂಡ ಆಘಾತಕಾರಿ ವಿಡಿಯೋ
ಇತ್ತೀಚೆಗಷ್ಟೆ ಕೊರೊನಾ ದಿಂದ ಮೃತಪಟ್ಟ ಕೇಂದ್ರ ಸಚಿವ ಸುರೇಶ್ ಅಂಗಡಿ ಅಂತ್ಯಕ್ರಿಯೆ ದೆಹಲಿಯಲ್ಲಿ ನಡೆದಿದೆ. ಅಂತ್ಯಕ್ರಿಯೆಯ ವಿಡಿಯೋ ನಟ, ರಾಜಕಾರಣಿ ಜಗ್ಗೇಶ್ ಹಂಚಿಕೊಂಡಿದ್ದು, ವಿಡಿಯೋ ನೋಡಿದವರು 'ಕೇಂದ್ರ ಸಚಿವರಿಗೆ ಇಂಥಹಾ ಸ್ಥಿತಿಯೇ' ಎಂದು ಆಘಾತ ವ್ಯಕ್ತಪಡಿಸಿದ್ದಾರೆ.
Recommended Video
ಕೇಂದ್ರ ಸಚಿವ ಸುರೇಶ್ ಅಂಗಡಿ ಕೆಲವು ದಿನಗಳ ಹಿಂದಷ್ಟೆ ಕೊರೊನಾ ಸೋಂಕಿನಿಂದಾಗಿ ದೆಹಲಿಯಲ್ಲಿ ಮೃತಪಟ್ಟರು. ಕೊರೊನಾ ನಿಯಮಾವಳಿಗಳಿಗೆ ಅನುಸಾರವಾಗಿ ದೆಹಲಿಯಲ್ಲಿಯೇ ಅವರ ಅಂತ್ಯಕ್ರಿಯೆ ಮಾಡಲಾಯಿತು.
'ಕಪ್ಪಾಗಿ ಹುಟ್ಟಿದ್ದು ಕರ್ಮನಾ' ಎಂದಿದ್ದೇಕೆ ವಿಜಯ್? ಜಗ್ಗೇಶ್-ವಿಜಿ ನಡುವೆ ನಡೆದ ಸಂಭಾಷಣೆ ಏನು?
ಅಂತ್ಯಕ್ರಿಯೆ ವೇಳೆ, ಸುರೇಶ್ ಅಂಗಡಿಯವರ ಶವಕ್ಕೆ ಹಗ್ಗಗಳನ್ನು ಕಟ್ಟಿ ಗುಂಡಿಗೆ ಇಳಿಬಿಡಲಾಗಿದೆ. ಹೀಗೆ ಇಳಿಬಿಡುವ ವೇಳೆ ಅಂಗಡಿ ಅವರ ಶವ ಗುಂಡಿಯೊಳಗೆ ತಲೆಕೆಳಗಾಗಿ ಬಿದ್ದುಹೋಗುತ್ತದೆ. ಯಾವ ಗೌರವಗಳಿಲ್ಲದೆ ಶವವನ್ನು ಗುಂಡಿಯೊಳಗೆ ಮಲಗಿಸಿ ಜೆಸಿಬಿಯಿಂದ ಮಣ್ಣು ಮುಚ್ಚಲಾಗುತ್ತದೆ.
ಕೇಂದ್ರ ಸಚಿವರ ಶವವನ್ನು ಗುಂಡಿಗೆ ದೂಡಲಾಗಿದೆ
ಜಗ್ಗೇಶ್ ಅವರು ಈ ವಿಡಿಯೋ ಹಂಚಿಕೊಂಡಿದ್ದು, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದವರಿಗೆ ಇಂಥಹಾ ಸ್ಥಿತಿಯಾದರೆ ಸಾಮಾನ್ಯರ ಪರಿಸ್ಥಿತಿ ಏನು ಎಂದು ಆತಂಕಪಡುವಂತಿದೆ ವಿಡಿಯೋ. ತುಸುವೂ ಗೌರವವಿಲ್ಲದೆ ಗುಂಡಿಗೆ ದೂಡಲಾಗುತ್ತದೆ ಸುರೇಶ್ ಅಂಗಡಿ ಅವರ ಶವವನ್ನು.
ಹಣ-ಅಧಿಕಾರ ಎಷ್ಟಿದ್ದರೇನು: ಜಗ್ಗೇಶ್
ವಿಡಿಯೋ ಹಂಚಿಕೊಂಡಿರುವ ಜಗ್ಗೇಶ್, ಬಹುನೋವಿನಿಂದ ಕೆಲವು ಸಾಲುಗಳನ್ನು ಬರೆದಿದ್ದಾರೆ. 'ಸತ್ತಾಗ ಬಂಧು-ಮಿತ್ರರು ನೋಡದಂತೆ ಮುಖಮುಚ್ಚಿ, ಕಸದ ಗುಂಡಿಗೆ ಬಿಸಾಕುವ ಸ್ಥಿತಿ ಬಂದಮೇಲೆ, ಹಣ-ಅಧಿಕಾರ ಎಷ್ಟಿದ್ದರೇನು' ಎಂದಿದ್ದಾರೆ ನಟ ಜಗ್ಗೇಶ್.
'ನಾನ್ ಪಕ್ಕಾ ಕಾಂಗ್ರೆಸ್ ಕಾರ್ಯಕರ್ತ, ಆದ್ರೆ ನಿಮ್ಮ ಅಭಿಮಾನಿ' ಎಂದ ವ್ಯಕ್ತಿಗೆ ಜಗ್ಗೇಶ್ ಏನಂದ್ರು?
ಹಣ, ಅಧಿಕಾರ ನಾನು ನನ್ನದು ಮಮಕಾರ ಏಕೆ: ಜಗ್ಗೇಶ್ ಪ್ರಶ್ನೆ
ಕೊರೊನಾ ಆರ್ಭಟ, ಅದರಿಂದ ಸಾಮಾನ್ಯ ಜನರ ನೋವು, ಧನನಷ್ಟ ನೆಮ್ಮದಿಹಾಳು, ಮಾನಸಿಕ ಒತ್ತಡ ಇವುಗಳನ್ನು ತಕ್ಕಮಟ್ಟಿಗೆ ತಡೆಯಬಹುದು, ಆದರೆ ಸತ್ತಾಗ ಬಂಧುಮಿತ್ರನು ನೋಡಲಾಗದೆ , ಮುಖಮುಚ್ಚಿ, ಯಾರೊ ಅನಾಮಿಕರು ಸತ್ತವರನ್ನು ಕಸದಂತೆ ಗುಂಡಿಯಲ್ಲಿ ಹೀಗೆ ಬಿಸಾಕುವ ಸ್ಥಿತಿ ಬಂದಮೇಲೆ, ಯಾವ ಪುರುಷಾರ್ಥಕ್ಕೆ ಹಣ ಅಧಿಕಾರ ನಾನು ನನ್ನದು ಮಮಕಾರ? ಎಂದು ಪ್ರಶ್ನಿಸಿದ್ದಾರೆ ಜಗ್ಗೇಶ್.
ವಿಡಿಯೋ ಮೂಲಕ ಅಂತ್ಯಕ್ರಿಯೆ ನೋಡಿದ ಕುಟುಂಬದವರು
ಸುರೇಶ್ ಅಂಗಡಿ ಅವರು, ಸೆಪ್ಟೆಂಬರ್ 23 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಅವರ ಅಂತ್ಯಕ್ರಿಯೆ ದೆಹಲಿಯಲ್ಲೇ ಆಯಿತು. ಸುರೇಶ್ ಅಂಗಡಿ ಅವರ ತಾಯಿ ಸಹ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿಲ್ಲ. ವಿಡಿಯೋ ಮೂಲಕ ಮಗನ ಅಂತ್ಯಕ್ರಿಯೆ ನೋಡಿ ಕಣ್ಣೀರು ಹಾಕಿದರು.
'ಅಲೆದಿಲ್ಲಾ, ನಿರ್ಮಾಪಕರ ಕಾಲಿಗೆ ಬಿದ್ದು ಪಾತ್ರ ಸಂಪಾದಿಸಿದವರು ನಾವು'