Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನನ್ನ ಪದಬಳಕೆ ಅರ್ಥವಾಗದೆ ಅಸೂಯೆ ಎಂದು ಭಾವಿಸಿದರೆ ದೌರ್ಭಾಗ್ಯ: ಜಗ್ಗೇಶ್
ಒಕ್ಕಲಿಗರ ವಿದ್ಯಾ ಸಂಸ್ಥೆಯ ಕಾರ್ಯಕ್ರಮದಲ್ಲಿ ಹಿರಿಯ ಸಾಧಕರ ಜೊತೆಗೆ ಯುವ ನಟಿ ಪ್ರಿಯಾ ವಾರಿಯರ್ ವೇದಿಕೆ ಹಂಚಿಕೊಂಡಿದ್ದಕ್ಕೆ ನಟ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದರು.
ಈ ಬಗ್ಗೆ ನಿರ್ಮಾಪಕ ಕೆ ಮಂಜು ಪ್ರತಿಕ್ರಿಯಿಸಿದ್ದು, ''ಜಗ್ಗೇಶ್ ಅವರಿಗೆ ಬೇಸರ ಯಾಕೆ ಎಂದು ಅರ್ಥವಾಗಿಲ್ಲ. ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ'' ಎಂದಿದ್ದರು. ಇದೇ ವೇಳೆ 'ಹೊಸಬರು ಅಂದ್ರೆ ಅಸೂಯೆ ಪಡಬಾರದು, ಎಲ್ಲರನ್ನು ಬೆಳೆಸಬೇಕು' ಎಂಬ ಮಾತನ್ನು ಕೂಡ ಹೇಳಿದ್ದರು.
ಅಸೂಯೆ ಪಡಬಾರದು, ಎಲ್ಲರನ್ನು ಬೆಳೆಸಬೇಕು: ಜಗ್ಗೇಶ್ ಟ್ವೀಟ್ ಬಗ್ಗೆ ಕೆ ಮಂಜು ಪ್ರತಿಕ್ರಿಯೆ
ಕೆ ಮಂಜು ಅವರ ಹೇಳಿಕೆ ಕುರಿತು ಜಗ್ಗೇಶ್ ಟ್ವಿಟ್ಟರ್ ನಲ್ಲಿ ಮಾತನಾಡಿದ್ದಾರೆ. ''ನನ್ನ ಪದಬಳಕೆ ಅರ್ಥವಾಗದೆ ಅಸೂಯೆ ಎಂದು ಭಾವಿಸಿದರೆ ದೌರ್ಭಾಗ್ಯ! ನಾನು ಯಾವ ನಟಿಯನ್ನು ವಿರೋಧಿಸಿಲ್ಲಾ! ಯಾರಿಂದ ನನಗೇನು ಆಗಬೇಕಿಲ್ಲ! ನಿರ್ಮಲಾನಂದ ಶ್ರೀಗಳ ಮಾರ್ಗದರ್ಶನ ಹಿತವಚನಕ್ಕಿಂತ ಅಲ್ಲಿದ್ದ ಯುವ ಸಮುದಾಯಕ್ಕೆ glamour ಮುಖ್ಯವಾಯಿತೆ ವಿನಹ ಬದುಕಿಗೆ ಮಾರ್ಗ ತೋರಿಸುವ ಮಾತು ನಗಣ್ಯವಾಯಿತೆ ಎಂದು ಕೊರಗಿದೆ! ಬರವಣಿಗೆ ಅರ್ಥವಾಗದ ಮಹನೀಯರು!'' ಎಂದು ಟ್ವೀಟ್ ಮಾಡಿದ್ದಾರೆ.
ಕಣ್ ಸನ್ನೆ ಹುಡುಗಿಯ ವಿರುದ್ಧ ಕೆಂಡಕಾರಿದ ನವರಸನಾಯಕ ಜಗ್ಗೇಶ್
ಅಂದ್ಹಾಗೆ, ಬಿಜಿಎಸ್ ವಿದ್ಯಾ ಸಂಸ್ಥೆಯ ಕಾರ್ಯಕ್ರಮಕ್ಕೆ ಪ್ರಿಯಾರನ್ನು ಕೆ ಮಂಜು ಕರೆದುಕೊಂಡು ಹೋಗಿದ್ದರು. ಕೆ ಮಂಜು ನಿರ್ಮಾಣದ ಚಿತ್ರದಲ್ಲಿ ಪ್ರಿಯಾ ನಟಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರಿಯಾ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಹಾಗಾಗಿ, ಈ ಕಾರ್ಯಕ್ರಮಕ್ಕೆ ಕೆ ಮಂಜು ಅವರು ಪ್ರಿಯಾ ವಾರಿಯರ್ ಅವರನ್ನ ಕರೆದುಕೊಂಡು ಬಂದಿದ್ದರು.