Don't Miss!
- News EPFO: ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ, 1 ಲಕ್ಷದವರೆಗೂ ಹಣ ಬಿಡಿಸಿಕೊಳ್ಳಬಹುದು!
- Automobiles ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಮಲತಾ ಅಂಬರೀಶ್ ಸ್ಪರ್ಧೆ ಬಗ್ಗೆ ಜಗ್ಗೇಶ್ ಹೇಳಿದ್ದಿಷ್ಟು
Recommended Video
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡುವ ತಯಾರಿಯಲ್ಲಿದ್ದಾರೆ. ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರ್ ಸ್ಪರ್ಧೆ ಮಾಡ್ತಿದ್ದಾರೆ. ಈಗ ಸುಮಲತಾ ಅವರ ಮುಂದೆ ಎರಡು ಆಯ್ಕೆಯಿದ್ದು ಬಿಜೆಪಿ ಅಭ್ಯರ್ಥಿಯಾಗಿ ಅಥವಾ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಬೇಕಿದೆ.
ಸುಮಲತಾ ಅವರು ತಮ್ಮ ನಿರ್ಧಾರವನ್ನ ಮಾರ್ಚ್ 18 ರಂದು ಅಧಿಕೃತವಾಗಿ ಘೋಷಿಸಲಿದ್ದಾರೆ. ಈ ನಡುವೆ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟ ಹಾಗೂ ಮಾಜಿ ಶಾಸಕ ಜಗ್ಗೇಶ್, ಸುಮಲತಾ ಬಗ್ಗೆ ಮಾತನಾಡಿದ್ದಾರೆ.
ಮಂಡ್ಯದಲ್ಲಿ ಸುಮಲತಾಗೆ ಸಪೋರ್ಟ್ ಮಾಡ್ತಾರ ಶಿವಣ್ಣ?
''ರಾಜಕೀಯ ಹೊರತುಪಡಿಸಿ ನನ್ನ ಮತ್ತು ಅಂಬರೀಶ್ ಅವರದ್ದು 30 ವರ್ಷದ ಸ್ನೇಹ. ನಾವು ಯಾವತ್ತು ಅವರಿಗೆ ಒಳ್ಳೆಯದನ್ನೇ ಬಯಸುತ್ತೇವೆ. ಸುಮಲತಾ ಅವರು ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನೇ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ'' ಎಂದಿದ್ದಾರೆ.
ನಿಖಿಲ್ ಬೆಂಬಲಕ್ಕೆ ಚಿತ್ರರಂಗದಿಂದ ಯಾರೂ ಬರಲ್ಲ: ಸಿಎಂ ಪುತ್ರ ಹೇಳಿದ್ದೇನು?
''ನನ್ನ ಅಂತರಾತ್ಮ ಹೇಳುತ್ತಿದೆ, ಅಂಬರೀಶ್ ಅವರು ಮಾಡಿದ ಸಾಧನೆ ಮತ್ತು ಜನರ ಪ್ರೀತಿ ನಿಜವಾಗಲೂ ಸುಮಲತಾ ಅವರ ಕೈ ಹಿಡಿಯುತ್ತೆ'' ಎಂದು ಜಗ್ಗೇಶ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ಈ ನಾಲ್ಕು ವರ್ಗ ಸುಮಲತಾ ಬೆನ್ನಿಗೆ ನಿಂತರೆ ಗೆಲುವು ಖಚಿತ.!
ಸುಮಲತಾ ಅವರ ಪರವಾಗಿ ದರ್ಶನ್, ಯಶ್ ಪ್ರಚಾರ ಮಾಡುವ ಸಾಧ್ಯತೆ ಇದ್ದು, ಚಿತ್ರರಂಗದಿಂದ ಇನ್ನು ಕೆಲವರು ಸುಮಲತಾ ಅವರ ಪರವಾಗಿ ಮಂಡ್ಯ ಅಖಾಡಕ್ಕೆ ಧುಮುಕಲಿದ್ದಾರೆ ಎನ್ನಲಾಗುತ್ತಿದೆ.