Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತನ್ನ ಶ್ರಮವನ್ನ ಗಾಳಿಗೆ ತೂರಿಬಿಟ್ಟ ದುನಿಯಾ ವಿಜಿ' - ಜಗ್ಗೇಶ್ ಬೇಸರ
ದುನಿಯಾ ವಿಜಯ್ ಓರ್ವ ಕಲಾವಿದ. ಸ್ಯಾಂಡಲ್ ವುಡ್ ಇಂಡಸ್ಟ್ರಿಯ ಸ್ಟಾರ್ ನಟ. ಈ ನಟನನ್ನ ಇಷ್ಟ ಪಡುವ ಹಾಗೂ ಫಾಲೋ ಮಾಡುವ ಸಾವಿರಾರು ಮಂದಿ ಅಭಿಮಾನಿಗಳು ಇದ್ದಾರೆ. ಇಂತಹ ಅಭಿಮಾನಿಗಳು ವಿಜಿ ಅವರ ಮೇಲೆ ಅನುಮಾನ ಪಡುವಂತಹ ಘಟನೆ ನಡೆದುಹೋಗಿದೆ.
ಹೌದು, ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿಯ ಅಣ್ಣನ ಮಗ ಮಾರುತಿ ಗೌಡ ಎಂಬುವವರ ಮೇಲೆ ವಿಜಿ ಮತ್ತು ಸ್ನೇಹಿತರ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪಾನಿಪೂರಿ ಕಿಟ್ಟಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಅಂದು ದುಷ್ಮನ್, ಇಂದು ಫ್ರೆಂಡ್; ದುನಿಯಾ ವಿಜಿ ಹೇಳ್ತಿರೋದು ಯಾರ ಬಗ್ಗೆ?
ಈ ದೂರಿನ ಅನ್ವಯ ಪೊಲೀಸರು ದುನಿಯಾ ವಿಜಯ್ ಮತ್ತು ಸ್ನೇಹಿತರನ್ನ ಬಂಧಿಸಿದ್ದಾರೆ. ಈ ಘಟನೆ ಈಗ ವಿಜಿ ಅವರ ಅಭಿಮಾನಿ ಬಳಗದಲ್ಲಿ ಹಾಗೂ ಚಿತ್ರರಂಗದಲ್ಲಿ ಭಾರಿ ಬೇಸರಕ್ಕೆ ಕಾರಣವಾಗಿದೆ. ಅದರಲ್ಲೂ ಹಿರಿಯ ನಟ ಜಗ್ಗೇಶ್ ಅವರು ಈ ಬಗ್ಗೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದು, ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ಜಗ್ಗೇಶ್ ಈ ಪ್ರಕರಣದ ಬಗ್ಗೆ ಏನಂದ್ರು.? ಮುಂದೆ ಓದಿ.....
ತನ್ನ ಶ್ರಮವನ್ನ ಗಾಳಿಗೆ ತೂರಿಬಿಟ್ಟ
''ಕ್ರೂರನಾಗಿದ್ದ ವಾಲ್ಮೀಕಿ ನಾರದರ ಮಾರ್ಗದರ್ಶನದಿಂದ ರಾಮಾಯಣ ರಚಿಸಿ ಮಹನೀಯನಾದ..ಶಾರದೆಯ ಒಲುಮೆಯಿಂದ ಸಾಮಾನ್ಯ ಅಸಮಾನ್ಯನಾದ #ದುನಿಯಾವಿಜಿ ಇಂದಿನ ಘಟನೆಯಿಂದ ತನ್ನ ಶ್ರಮವನ್ನು ಗಾಳಿಗೆ ತೂರಿಬಿಟ್ಟ'' ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ದುನಿಯಾ ವಿಜಯ್ ತನಿಖೆಗೆ ಸಿಸಿಬಿ : ಡಿಸಿಎಂ ಪರಮೇಶ್ವರ್ ಪ್ರತಿಕ್ರಿಯೆ
ಕಲಾವಿದ ಮಾರ್ಗದರ್ಶಕನಾಗಬೇಕು
''ಕಲಾವಿದ ಸಮಾಜದ ಮಾರ್ಗದರ್ಶಕ ಆಗಬೇಕು! ಇಲ್ಲದಿದ್ದರೆ ನಮ್ಮ ಬೆವರಿಗು ಜನರ ಚಪ್ಪಾಳೆಗು ಅಪಮಾನ ಮಾಡಿದಂತೆ. ನಶ್ವರ ಜಗಕ್ಕೆ ಗುಣವೆ ಶ್ರೀಮಂತಿಕೆ.'' ಎಂದು ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ದುನಿಯಾ ವಿಜಯ್ ಮೇಲೆ ಮತ್ತೊಂದು ಕೇಸ್ : ನಿವೃತ್ತ ಯೋಧನಿಗೆ ಕೋಲೆ ಬೆದರಿಕೆ ಆರೋಪ
ಅಂಬೇಡ್ಕರ್ ಭವನದಲ್ಲಿ ಘಟನೆ
ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಕಾಂಪಿಟೇಷನ್ ನಡೆಯುತ್ತಿತ್ತು. ಈ ವೇಳೆ ದುನಿಯಾ ವಿಜಿ ತಂಡ ಹಾಗೂ ಟ್ರೈನರ್ ಮಾರುತಿ ಗೌಡ ನಡುವೆ ಜಗಳ ಶುರುವಾಗಿದೆ. ಬಳಿಕ ಮಾರುತಿ ಗೌಡ ಎನ್ನುವವರನ್ನ ದುನಿಯಾ ವಿಜಯ್ ಹಾಗೂ ಮಣಿಪ್ರಸಾದ್ ಕಿಡ್ನಾಪ್ ಮಾಡಿದ್ದಾರೆ. ಕಾರಿನಲ್ಲಿ ಕರೆದೊಯ್ದಿದ್ದು, ಹಲ್ಲೆ ಮಾಡಿದ್ದಾರೆ ಎಂದು ಪಾನಿಪುರಿ ಕಿಟ್ಟಿ ಆರೋಪ ಮಾಡಿದ್ದರು.
ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಲ್ಲಿ ದುನಿಯಾ ವಿಜಯ್ ಬಂಧನ
ವಿಜಿಗೂ ಕಿಟ್ಟಿಗೂ ಏನ್ ಸಂಬಂಧ
ಅಂದ್ಹಾಗೆ, ನಟ ದುನಿಯಾ ವಿಜಯ್ ಮತ್ತು ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿ ಇಬ್ಬರು ಸ್ನೇಹಿತರು. ಪಾನಿಪೂರಿ ಕಿಟ್ಟಿ ಈ ಹಿಂದೆ ವಿಜಿಗೆ ಪರ್ಸನಲ್ ಟ್ರೈನರ್ ಆಗಿದ್ದರು. ಆದ್ರೆ, ಕೆಲ ತಿಂಗಳುಗಳಿಂದ ಮತ್ತು ವಿಜಿ ದೂರವಾಗಿದ್ದರು. ಪ್ರಸಾದ್ ಎಂಬುವರು ವಿಜಿ ಹೊಸ ಟ್ರೈನರ್ ಆಗಿದ್ದರು. ಆದ್ರೀಗ, ಪ್ರಸಾದ್ ಎಂಬುವರ ಕುಮ್ಮಕ್ಕಿನಿಂದಲೇ ಕಿಟ್ಟಿ ಅವರ ಅಣ್ಣನ ಮಗನ ಮೇಲೆ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ.