Just In
- 19 min ago
ಬ್ಯಾಕ್ ಲೆಸ್ ಡ್ರೆಸ್ ಧರಿಸಿ ಪಿಯಾನೋ ನುಡಿಸುತ್ತಿರುವ ಶ್ರುತಿ ಹಾಸನ್; ವಿಡಿಯೋ ವೈರಲ್
- 2 hrs ago
ನಟಿ ಶ್ರೀದೇವಿ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ: ಬೋನಿ ಕಪೂರ್ ಹೇಳಿದ್ದೇನು?
- 3 hrs ago
ಅನೀಶ್ 'ರಾಮಾರ್ಜುನ' ಸಿನಿಮಾದ ರಿಲೀಸ್ ಡೇಟ್ ಫಿಕ್ಸ್: ರಕ್ಷಿತ್ ಶೆಟ್ಟಿ ಸಾಥ್
- 4 hrs ago
ಬಾಲಿವುಡ್ ಗೆ ಎಂಟ್ರಿ ಕೊಟ್ಟ 'ದಿಯಾ' ಪೃಥ್ವಿ ಅಂಬರ್; ಯಾವ ಸಿನಿಮಾ?
Don't Miss!
- Sports
ಇಂಗ್ಲೆಂಡ್ ವಿರುದ್ಧದ ಸರಣಿಗೆ ನೆಟ್ ಬೌಲರ್ ಆಗಿ ಕರ್ನಾಟಕದ ಕೆ ಗೌತಮ್ ಆಯ್ಕೆ
- News
Jesus Calls ಮಿಷನರಿಯ ದಿನಕರನ್ ಮೇಲೆ ಐಟಿ ದಾಳಿ
- Finance
ಪ್ರಧಾನ ಮಂತ್ರಿ ಜನ್ ಧನ್ ಯೋಜನಾಗೆ 41 ಕೋಟಿಗೂ ಹೆಚ್ಚು ಫಲಾನುಭವಿಗಳು
- Automobiles
ಮಾರುತಿ ಕಾರಿಗೂ ಮುನ್ನ ಭಾರೀ ಜನಪ್ರಿಯವಾಗಿತ್ತು ಭಾರತದ ಮೊದಲ ಸ್ವದೇಶಿ ಕಾರು
- Lifestyle
ಚಳಿಗಾಲದಲ್ಲಿ ಕೂದಲ ಆರೈಕೆಗೆ ಇಲ್ಲಿವೆ ಸರಳ ಮನೆಮದ್ದುಗಳು
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿ ಅಳಿಲು ಸೇವೆ ಮಾಡಿ: ನಟ ಜಗ್ಗೇಶ್ ಮನವಿ
ಐತಿಹಾಸಿಕ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ನಿಧಿ ಸಮರ್ಪಣ ಅಭಿಯಾನ ಪ್ರಾರಂಭವಾಗಿದೆ. ಈಗಾಗಲೇ ಅನೇಕರು ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುತ್ತಿದ್ದಾರೆ. ದೇಶಾದ್ಯಂತ ಮನೆ ಮನೆಗೆ ತಲುಪಿ ಜನರಿಂದ ದೇಣಿಗೆ ಸಂಗ್ರಹಿಸಲು ರಾಮ ಮಂದಿರ ಟ್ರಸ್ಟ್ ನಿರ್ಧರಿಸಿದೆ.
ರಾಜ್ಯದಲ್ಲಿ ಜನವರಿ 15 ರಿಂದ ಫೆಬ್ರವರಿ 27ರವರೆಗೂ ವಿಶ್ವ ಹಿಂದೂ ಪರಿಷತ್ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡಲಿದೆ. ತಲಾ 5 ಮಂದಿಯನ್ನು ಒಳಗೊಂಡ ವಿ ಎಚ್ ಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಹಣ ಸಂಗ್ರಹಿಸಲಿದ್ದಾರೆ ಎಂದು ಕೇಂದ್ರಿಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಡಿ ಮಾಹಿತಿ ನೀಡಿದ್ದಾರೆ.
ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ 1 ಲಕ್ಷ ನೆರವು ನೀಡಿದ ಪ್ರಣಿತಾ ಸುಭಾಷ್
ಐತಿಹಾಸಿಕ ರಾಮ ಮಂದಿರ ನಿರ್ಮಾಣದ ಅನೇಕ ವರ್ಷಗಳ ಕನಸು ನನಸಾಗುತ್ತಿದೆ. ಇತ್ತೀಚಿಗಷ್ಟೆ ನಟಿ ಪ್ರಣಿತಾ ಸುಭಾಷ್ ಒಂದು ಲಕ್ಷ ದೇಣಿಗೆ ನೀಡಿ, ನೀವು ನೀಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಇದೀಗ ನಟ ಜಗ್ಗೇಶ್ ಸಹ ದೇಣಿಗೆ ನೀಡಿ ಎಂದು ಕೇಳಿಕೊಂಡಿದ್ದಾರೆ.

ಎಲ್ಲಾ ಬಾಂಧವರಲ್ಲಿ ಮನವಿ
'ಎಲ್ಲಾ ಕನ್ನಡದ ಮನಗಳಿಗೆ ನಮಸ್ಕಾರ. ಗುರು ರಾಯರ ನೆಚ್ಚಿನ ದೇವರು ಶ್ರೀರಾಮ. ರಾಮ ನಮ್ಮ ದೊರೆ, ಭಾರತದ ಪ್ರತೀಕ. 500 ವರ್ಷದ ಹೋರಾಟದ ನಂತರ ರಾಮ ಮಂದಿರ ಕಟ್ಟಬೇಕು ಎನ್ನುವ ಘನವಾದ ನಿರ್ಣಯವಾಗಿದೆ. ಎಲ್ಲಾ ನನ್ನ ಬಾಂಧವರಲ್ಲಿ ನನ್ನ ಮನವಿ ಇಷ್ಟೆ.'
'ಅವನಿಗಾಗಿ ಗೆಲ್ಲಲೆ ಬೇಕು ಒಂದು ದಿನ ಎಂಬ ಛಲ ಇತ್ತು': ಮಗನಿಗೆ ವಿಶ್ ಮಾಡಿದ ಜಗ್ಗೇಶ್

ನಿಮ್ಮ ಕೈಯಲ್ಲಿ ಎಷ್ಟು ಆಗುತ್ತೋ ಅಷ್ಟು ಕೊಡಿ
'ನಿಮ್ಮ ಕೈಯಲ್ಲಿ ಎಷ್ಟು ಆಗುತ್ತೋ ಅಷ್ಟು ಹಣವನ್ನು ರಾಮ ಮಂದಿರ ಕಟ್ಟಲು ದೇಣಿಗೆಯಾಗಿ ಕೊಡಿ. ದೇವಸ್ಥಾನ ಮುಗಿದ ಮೇಲೆ ಇಡೀ ವಿಶ್ವವೇ ಬಂದು ನೋಡುತ್ತೆ. ನಾವು ಹೋಗುತ್ತೇವೆ, ನೀವು ಹೋಗಿ. ನಿಂತಾಗ ನಮ್ಮ ಮನಸ್ಸು ಹೆಮ್ಮೆ ಪಡಬೇಕು. ನನ್ನ ಒಂದು ಅಳಿಲು ಕಾಣಿಕೆ ಕೂಡ ಈ ಆಲಯದಲ್ಲಿ ಸೇರಿದೆ ಅಂತ. ಆ ಕರ್ತವ್ಯವನ್ನು ಮಾಡೋಣ' ಎಂದಿದ್ದಾರೆ.

ನಮ್ಮ ತಲೆಮಾರಿನಲ್ಲಿ ಆಗುತ್ತಿರುವುದೇ ದೊಡ್ಡ ಪುಣ್ಯ
'ಈ ಪುಣ್ಯ ಇನ್ನೊಂದು ಜನ್ಮಕ್ಕೆ ಯಾರಿಗೂ ಸಿಗಲ್ಲ. ನಮ್ಮ ಕಾಲದಲ್ಲಿ, ನಮ್ಮ ತಲೆಮಾರಿನಲ್ಲಿ ಆಗಿದೆಯಲ್ಲ ಎನ್ನುವುದೇ ದೊಡ್ಡ ಪುಣ್ಯ ಅಂತ ಭಾವಿನೋಣ. ದಯಮಾಡಿ ತಾವು ದೇಣಿಗೆ ಕೊಡಲು ತಯಾರಾಗಿ. ದೇಣಿಗೆಯನ್ನು ನೇರವಾಗಿ ತಲುಪಿಸಿ. ಜೈ ಶ್ರೀರಾಮ್' ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

1 ಲಕ್ಷ ರೂ. ನೀಡಿದ ಪ್ರಣಿತಾ
ರಾಮ ಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿರುವ ನಟಿ ಪ್ರಣಿತಾ, ನೀವೆಲ್ಲರೂ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ. ಈ ಕುರಿತು ಟ್ವಿಟ್ಟರ್ನಲ್ಲಿ ವಿಡಿಯೋ ಮೂಲಕ ಮಾಹಿತಿ ನೀಡಿರುವ ಪ್ರಣಿತಾ ಸುಭಾಷ್ 'ಅಯೋಧ್ಯೆ ರಾಮ ಮಂದಿರ ನಿಧಿ ಸಂಗ್ರಹ ಅಭಿಯಾನಕ್ಕಾಗಿ ನಾನು 1 ಲಕ್ಷ ರೂ ನೀಡಿದ್ದೇನೆ. ನೀವೆಲ್ಲರೂ ಕೈಜೋಡಿಸಿ ಈ ಐತಿಹಾಸಿಕ ಅಭಿಯಾನದಲ್ಲಿ ಭಾಗಿಯಾಗಿ' ಎಂದು ಮನವಿ ಮಾಡಿಕೊಂಡಿದ್ದಾರೆ.