Don't Miss!
- News ಕನಕಪುರಕ್ಕೆ ಕಾಲಿಡಲು ಭಯ; ಕೋರ್ಟ್ಗೆ ಯತ್ನಾಳ್ ಹೇಳಿಕೆ!
- Finance ತನ್ನ 4 ವರ್ಷದ ಮೊಮ್ಮಗನಿಗೆ 240 ಕೋಟಿ ಮೌಲ್ಯದ ಇನ್ಫೋಸಿಸ್ ಷೇರುಗಳನ್ನು ಉಡುಗೊರೆಯಾಗಿ ನೀಡಿದ ನಾರಾಯಣ ಮೂರ್ತಿ
- Technology ಇಂದು ಮಾರುಕಟ್ಟೆಗೆ ಬರಲಿದೆ ಗೆಸ್ಚರ್ ಮೂಲಕ ಕೆಲಸ ಮಾಡುವ ಸ್ಮಾರ್ಟ್ಫೋನ್!
- Automobiles Tata Nexon: ಮುಂಬರಲಿರುವ ಟಾಟಾ ನೆಕ್ಸಾನ್ ಸಿಎನ್ಜಿ ಕಾರಿನ ವಿಶೇಷತೆಗಳಿವು.. ಹೆಚ್ಚು ಮೈಲೇಜ್!
- Sports IPL 2024: ಐಪಿಎಲ್ ಆರಂಭಕ್ಕೂ ಮುನ್ನವೇ 'ಸೂಪರ್' ಭವಿಷ್ಯ; ಆರ್ಸಿಬಿ ಈ ಬಾರಿ ಕಪ್ ಗೆಲ್ಲುತ್ತದಾ? ಇಲ್ಲಿದೆ ಉತ್ತರ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಾವ ಚಿಕಿತ್ಸೆ ನೀಡುತ್ತಾರೆ ತಿಳಿಯುತ್ತಿಲ್ಲ, ಪಾರದರ್ಶಕ ವ್ಯವಸ್ಥೆ ಆಗಲಿ; ನಟ ಜಗ್ಗೇಶ್
ಭಾರತ ಕೋವಿಡ್-19ನಿಂದ ತತ್ತರಿಸಿ ಹೋಗಿದೆ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಸಿಗದೆ ಒದ್ದಾಡುತ್ತಿದ್ದಾರೆ. ಸಾವಿರಾರು ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಒಂದು ವೇಳೆ ಆಸ್ಪತ್ರೆ ಸಿಕ್ಕಿದರೂ ಕೇವಲ 2 ಅಥವಾ 3 ದಿನಗಳಲ್ಲೇ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ವೈದ್ಯರು ಯಾವ ಚಿಕಿತ್ಸೆ ನೀಡುತ್ತಿದ್ದಾರೆ, ಹೇಗೆ ನೋಡಿಕೊಳ್ಳುತ್ತಿದ್ದಾರೆ ಎನ್ನುವ ಮಾಹಿತಿ ಹೊರಗಿರುವ ಸಂಬಂಧಿಕರಿಗೆ ತಿಳಿಯುತ್ತಿಲ್ಲ. ಒಂದು ವೇಳೆ ಸಾವನ್ನಪ್ಪಿದರೆ ಮುಖ ಕೂಡ ನೋಡಲು ಸಂಬಂಧಿಕರಿಗೆ ಬಿಡುತ್ತಿಲ್ಲ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿದೆ ದೇಶ. ಈ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯೆ ನೀಡಿ ಪಾರದರ್ಶಕ ವ್ಯವಸ್ಥೆ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.
'ಹಣಕ್ಕಾಗಿ ಸಾಯಬೇಡಿ, ನೊಂದವರ ಪೀಡಿಸಬೇಡಿ, ತಿನ್ನಲು ಅನ್ನಸಿಗದೆ ಸಾಯುತ್ತೀರಿ'
ಈ ಬಗ್ಗೆ ಜಗ್ಗೇಶ್ ದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 'ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ: ಸಾರ್, ಕೊರೊನಾ ರೋಗಿ ಅಡ್ಮಿಟ್ ಆದ 2/3ದಿನಕ್ಕೆ ಸಾವು ಸಂಭವಿಸುತ್ತಿದೆ (ಸ್ವಂತ ಅನುಭವ). ಯಾವ ಚಿಕಿತ್ಸೆ ನೀಡುತ್ತಾರೆ ಬಂಧುಗಳಿಗೆ ಹೊರಗೆ ತಿಳಿಯದು. ಸಾವಾಗಿದೆ ಎಂದು ತಿಳಿಸುತ್ತಾರೆ ಮುಖಸಹಿತ ನೋಡಲಾಗದು. ಬೆರಳೆಣಿಸುವ ಕೆಲ ಸಿಬ್ಬಂದಿ ಹೊರತುಪಡಿಸಿ ತಜ್ಞರು ವೈಯುಕ್ತಿಕವಾಗಿ ಸಿಗರು ವಿಷಯ ತಿಳಿಯಲು'
Recommended Video
'ಪ್ರತಿ ರೋಗಿಯ ಮನೆಯವರಿಗೆ ದೂರದಿಂದ ನೋಡಲು ಅವಕಾಶ (safety measures)ನಲ್ಲಿ ಅವಕಾಶ ನೀಡಬೇಕು.ಇಲ್ಲದಿದ್ದರೆ ಒಳಗೆ ನಡೆಯುವ ವಿಷಯ ಹೊರಗೆ ಅರಿವಾಗುತ್ತಿಲ್ಲಾ. ಯಾವುದು ಇಲ್ಲದೆ ಅಡ್ಮಿಟ್ ಮಾಡಿಕೊಂಡು ನಂತರ ಯಾವ ವಿಷಯ ಹೊರಗೆ ತಿಳಿಸದೆ ರೋಗಿಯ ಸಾವಿನ ಜೊತೆ ಮನೆಯವರು ಸಾಯುವಂತೆ tension. ದಯಮಾಡಿ ರೋಗಿ monitor ಡಾಕ್ಟರ್ ಹಾಗು ಬಂಧುಗಳಿಗೆ ತಿಳಿಯುವಂತೆ ಪಾರದರ್ಶಕ ವ್ಯೆವಸ್ಥೆ ಆಗಲಿ' ಎಂದು ಟ್ವೀಟ್ ಮಾಡಿ ಸಿಎಂ ಯಡಿಯೂರಪ್ಪ ಅವರಿಗೆ ಟ್ಯಾಗ್ ಮಾಡಿದ್ದಾರೆ.