Just In
Don't Miss!
- News
ಎಲ್ಲಾ ಲೆಕ್ಕಾಚಾರ ಉಲ್ಟಾ: ಬಸವಕಲ್ಯಾಣ ಬಿಜೆಪಿ ಟಿಕೆಟ್ ಬಹುತೇಕ ಫೈನಲ್: ಈ ಇಬ್ಬರಲ್ಲಿ ಒಬ್ಬರಿಗೆ ಪಕ್ಕಾ?
- Sports
ಏಷ್ಯಕಪ್ 2021ರಲ್ಲಿ ಭಾರತಕ್ಕೆ ಭಾಗವಹಿಸಲು ಅವಕಾಶವಿಲ್ಲ?!
- Education
CBSE CTET Result 2021: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ
- Lifestyle
ಕೊರೊನಾ 2ನೇ ಅಲೆ: ಹೀಗೆ ಮಾಡಿ ವೈರಸ್ ವಿರುದ್ಧ ರೋಗ ನಿರೋಧಕ ಸಾಮರ್ಥ್ಯ ಹೆಚ್ಚಿಸಿ
- Automobiles
ಸನ್ರೂಫ್, ಪೆಟ್ರೋಲ್ ವೆರಿಯೆಂಟ್ ಸೇರಿದಂತೆ ಭಾರೀ ಬದಲಾವಣೆ ಪಡೆದುಕೊಂಡ ನ್ಯೂ ಜನರೇಷನ್ ಸ್ಕಾರ್ಪಿಯೋ
- Finance
ಮಾರ್ಚ್ 2021ರ ಬ್ಯಾಂಕ್ ರಜಾ ದಿನಗಳು: 11 ದಿನಗಳು ಮುಚ್ಚಲ್ಪಡಲಿದೆ!
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಿವಾದದ ನಡುವೆಯೂ ತೋತಾಪುರಿ ಚಿತ್ರೀಕರಣ ಮಾಡಿದ ಜಗ್ಗೇಶ್
ದರ್ಶನ್ ಅಭಿಮಾನಿಗಳ ಜೊತೆಗಿನ ಕಿತ್ತಾಟದ ನಡುವೆಯೂ ನವರಸ ನಾಯಕ ಜಗ್ಗೇಶ್ ವೃತ್ತಿಪರತೆ ಮೆರೆದಿದ್ದಾರೆ. ಮೈಸೂರಿನಲ್ಲಿ ನಡೆಯುತ್ತಿರುವ ತೋತಾಪುರಿ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿ ಚಿತ್ರತಂಡಕ್ಕೆ ಸಹಕಾರಿಯಾಗಿದ್ದಾರೆ.
ವಿಜಯ್ ಪ್ರಸಾದ್ ನಿರ್ದೇಶನದ ತೋತಾಪುರಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಇಂದು ಮದುವೆ ದೃಶ್ಯದ ಶೂಟಿಂಗ್ ನಡೆಯಿತು. ಮದುಮಗನ ಗೆಟಪ್ನಲ್ಲಿ ನಟ ಜಗ್ಗೇಶ್ ಕಾಣಿಸಿಕೊಂಡಿದ್ದಾರೆ. ಜಗ್ಗೇಶ್ ಜೊತೆ ನಟಿ ಅದಿತಿ ಪ್ರಭುದೇವ, ಸುಮನ್ ರಂಗನಾಥ್, ಹಿರಿಯ ನಟ ದತ್ತಣ್ಣ ಸೇರಿದಂತೆ ಜೂನಿಯರ್ ಕಲಾವಿದರು ಭಾಗಿಯಾಗಿದ್ದರು.
ಜಗ್ಗೇಶ್-ದರ್ಶನ್ ಅಭಿಮಾನಿಗಳ ವಿವಾದಕ್ಕೆ ಅವರೊಬ್ಬರಿಂದಲೇ ಪರಿಹಾರ ಸಾಧ್ಯ!
ಜಗ್ಗೇಶ್ ಅವರು ಶೂಟಿಂಗ್ ಭಾಗಿಯಾಗಿದ್ದ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಗ್ಗೇಶ್ ಅವರ ವೃತ್ತಿಪರತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ದರ್ಶನ್ ಅಭಿಮಾನಿಗಳ ಜೊತೆಗಿನ ವಿವಾದದಿಂದ ಮಾನಸಿಕವಾಗಿ ನೊಂದಿದ್ದರು, ಚಿತ್ರತಂಡಕ್ಕೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಶೂಟಿಂಗ್ ಮುಂದುವರಿಸಿದ್ದಾರೆ.
ಸೋಮವಾರ ದರ್ಶನ್ ಅಭಿಮಾನಿಗಳು ತೋತಾಪುರಿ ಸೆಟ್ಗೆ ಮುತ್ತಿಗೆ ಹಾಕಿ ನಟ ಜಗ್ಗೇಶ್ ಅವರ ವಿರುದ್ಧ ಧಿಕ್ಕಾರ ಕೂಗಿದ್ದರು. ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಈ ಘಟನೆ ಬಹಳ ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಸಿತ್ತು.
'ತೋತಾಪುರಿ' ಚಿತ್ರೀಕರಣ ಆರಂಭಿಸಿದ ಜಗ್ಗೇಶ್-ಅದಿತಿ ಪ್ರಭುದೇವ
ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಟ್ವಿಟ್ಟರ್ನಲ್ಲಿ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದರು. ''40 ವರ್ಷದಿಂದ ಚಿತ್ರರಂಗದಲ್ಲಿ ಇದ್ದೇನೆ, ಚಿತ್ರರಂಗ ಹಾಳಾಗಿ ಹೋಗಿದೆ, ರೌಡಿಸಂ, ಸ್ಟಾರ್ಡಂ ಅಂತ ಇಂದಿನ ನಟರು ತೊಡಗಿಕೊಂಡಿದ್ದಾರೆ. ಇನ್ಮುಂದೆ ನಾನು ಯಾವುದೇ ಸಿನಿಮಾ ಕಾರ್ಯಕ್ರಮ, ಹುಟ್ಟುಹಬ್ಬ, ಸಮಾರಂಭಗಳಿಗೆ ಹೋಗಲ್ಲ'' ಎಂದು ಬೇಸರ ವ್ಯಕ್ತಪಡಿಸಿದ್ದರು.