Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದದ ನಡುವೆಯೂ ತೋತಾಪುರಿ ಚಿತ್ರೀಕರಣ ಮಾಡಿದ ಜಗ್ಗೇಶ್
ದರ್ಶನ್ ಅಭಿಮಾನಿಗಳ ಜೊತೆಗಿನ ಕಿತ್ತಾಟದ ನಡುವೆಯೂ ನವರಸ ನಾಯಕ ಜಗ್ಗೇಶ್ ವೃತ್ತಿಪರತೆ ಮೆರೆದಿದ್ದಾರೆ. ಮೈಸೂರಿನಲ್ಲಿ ನಡೆಯುತ್ತಿರುವ ತೋತಾಪುರಿ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿ ಚಿತ್ರತಂಡಕ್ಕೆ ಸಹಕಾರಿಯಾಗಿದ್ದಾರೆ.
Recommended Video
ವಿಜಯ್ ಪ್ರಸಾದ್ ನಿರ್ದೇಶನದ ತೋತಾಪುರಿ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಇಂದು ಮದುವೆ ದೃಶ್ಯದ ಶೂಟಿಂಗ್ ನಡೆಯಿತು. ಮದುಮಗನ ಗೆಟಪ್ನಲ್ಲಿ ನಟ ಜಗ್ಗೇಶ್ ಕಾಣಿಸಿಕೊಂಡಿದ್ದಾರೆ. ಜಗ್ಗೇಶ್ ಜೊತೆ ನಟಿ ಅದಿತಿ ಪ್ರಭುದೇವ, ಸುಮನ್ ರಂಗನಾಥ್, ಹಿರಿಯ ನಟ ದತ್ತಣ್ಣ ಸೇರಿದಂತೆ ಜೂನಿಯರ್ ಕಲಾವಿದರು ಭಾಗಿಯಾಗಿದ್ದರು.
ಜಗ್ಗೇಶ್-ದರ್ಶನ್ ಅಭಿಮಾನಿಗಳ ವಿವಾದಕ್ಕೆ ಅವರೊಬ್ಬರಿಂದಲೇ ಪರಿಹಾರ ಸಾಧ್ಯ!
ಜಗ್ಗೇಶ್ ಅವರು ಶೂಟಿಂಗ್ ಭಾಗಿಯಾಗಿದ್ದ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜಗ್ಗೇಶ್ ಅವರ ವೃತ್ತಿಪರತೆಗೆ ಮೆಚ್ಚುಗೆ ವ್ಯಕ್ತವಾಗಿದೆ. ದರ್ಶನ್ ಅಭಿಮಾನಿಗಳ ಜೊತೆಗಿನ ವಿವಾದದಿಂದ ಮಾನಸಿಕವಾಗಿ ನೊಂದಿದ್ದರು, ಚಿತ್ರತಂಡಕ್ಕೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಶೂಟಿಂಗ್ ಮುಂದುವರಿಸಿದ್ದಾರೆ.
ಸೋಮವಾರ ದರ್ಶನ್ ಅಭಿಮಾನಿಗಳು ತೋತಾಪುರಿ ಸೆಟ್ಗೆ ಮುತ್ತಿಗೆ ಹಾಕಿ ನಟ ಜಗ್ಗೇಶ್ ಅವರ ವಿರುದ್ಧ ಧಿಕ್ಕಾರ ಕೂಗಿದ್ದರು. ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಈ ಘಟನೆ ಬಹಳ ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಸಿತ್ತು.
'ತೋತಾಪುರಿ' ಚಿತ್ರೀಕರಣ ಆರಂಭಿಸಿದ ಜಗ್ಗೇಶ್-ಅದಿತಿ ಪ್ರಭುದೇವ
ಈ ವಿಚಾರಕ್ಕೆ ಸಂಬಂಧಿಸಿದಂತೆ ನಟ ಜಗ್ಗೇಶ್ ಟ್ವಿಟ್ಟರ್ನಲ್ಲಿ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದರು. ''40 ವರ್ಷದಿಂದ ಚಿತ್ರರಂಗದಲ್ಲಿ ಇದ್ದೇನೆ, ಚಿತ್ರರಂಗ ಹಾಳಾಗಿ ಹೋಗಿದೆ, ರೌಡಿಸಂ, ಸ್ಟಾರ್ಡಂ ಅಂತ ಇಂದಿನ ನಟರು ತೊಡಗಿಕೊಂಡಿದ್ದಾರೆ. ಇನ್ಮುಂದೆ ನಾನು ಯಾವುದೇ ಸಿನಿಮಾ ಕಾರ್ಯಕ್ರಮ, ಹುಟ್ಟುಹಬ್ಬ, ಸಮಾರಂಭಗಳಿಗೆ ಹೋಗಲ್ಲ'' ಎಂದು ಬೇಸರ ವ್ಯಕ್ತಪಡಿಸಿದ್ದರು.