Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿರು ಸಾವಿಗೆ ಕಾರಣವಾಯ್ತಾ ಜಾತಕ ದೋಷ? ಜೋತಿಷಿ ಹೇಳಿದ ಕಥೆ ಬಿಚ್ಚಿಟ್ಟ ಜಗ್ಗೇಶ್
ನಟ ಚಿರಂಜೀವಿ ಸರ್ಜಾ ನಿಧನದ ಸುದ್ದಿ ಇಡೀ ಕರುನಾಡಿಗೆ ದೊಡ್ಡ ಆಘಾತವೊಂಟು ಮಾಡಿದೆ. 39ನೇ ವಯಸ್ಸಿನಲ್ಲಿಯೇ ಚಿರು ಜೀವನವನ್ನು ಅರ್ಧಕ್ಕೆ ನಿಲ್ಲಿಸಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಅರಗಿಸಿಕೊಳ್ಳಲಾಗದ ಚಿರು ನಿಧನದ ಸುದ್ದಿ ಕೇಳಿ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ.
Recommended Video
ಚಿರಂಜೀವಿ ಸರ್ಜಾ ಮದುವೆಯಾಗಿ ಎರಡು ವರ್ಷಗಳಾಗಿದೆ. ಇತ್ತೀಚಿಗಷ್ಟೆ ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಮುದ್ದಾದ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದರು.. ಆದರೆ ಮಗುವಿನ ಮುಖ ನೋಡುವ ಮೊದಲೆ ಚಿರು ಇಹಲೋಕ ತ್ಯಜಿಸಿದ್ದಾರೆ.
'ಇರುವುದೆಲ್ಲವ ಬಿಟ್ಟು...': ಚಿರು ಸಾವಿನ ಬೆನ್ನಲ್ಲೇ ಹೃದಯ ಕಲಕುವ ಘಟನೆ ಹಂಚಿಕೊಂಡ ಕವಿರಾಜ್
2018 ಮೇ 2ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೇಘನ ಮತ್ತು ಚಿರಂಜೀವಿ ಸರ್ಜಾ ಅದ್ಧೂರಿ ವಿವಾಹ ಜೀವನಕ್ಕೆ ಕಾಲಿಟ್ಟದ್ದರು. 2017ರಲ್ಲಿ ವಜ್ರದುಂಗುರ ತೊಡಿಸುವ ಮೂಲಕ ಚಿರು ಸರ್ಜಾ, ಮೇಘನಾ ಅವರಲ್ಲಿ ಪ್ರೇಮ ನಿವೇದನೆ ಮಾಡಿದ್ದರು. ಇಬ್ಬರ ಮದುವೆ ಹಾಗೂ ಆರತಕ್ಷತೆ ಸಮಾರಂಭಕ್ಕೆ ಚಿತ್ರರಂಗದ ಬಹುತೇಕ ಗಣ್ಯರು, ಕಲಾವಿದರು, ತಂತ್ರಜ್ಞರು ಭಾಗವಹಿಸಿ ಶುಭ ಹಾರೈಸಿದ್ದರು.
ಇಬ್ಬರ ಮದುವೆ ಬಗ್ಗೆ ನಟ ಜಗ್ಗೇಶ್ ಒಂದಿಷ್ಟು ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ. ಮದುವೆ ವಿಚಾರವಾಗಿ ಚಿರು ಸರ್ಜಾ ಫೋನ್ ಮಾಡಿ ಜಗ್ಗೇಶ್ ಬಳಿ ಹೇಳಿದ್ದನು? ಇಬ್ಬರ ಮದುವೆಗೆ ಒಪ್ಪಿಸಿದ ಜಗ್ಗೇಶ್ ಜಾತಕ ದೋಷದ ಬಗ್ಗೆ ಈಗ ಬಹಿರಂಗಪಡಿಸಿದ್ದಾರೆ. ಮುಂದೆ ಓದಿ..
ಚಿರು ಇನ್ನಿಲ್ಲ ಎಂಬ ಕಹಿ ಸಂಗತಿಯನ್ನು ವೈದ್ಯರು ಮೊದಲು ತಿಳಿಸಿದ್ದು ಈ ನಿರ್ದೇಶಕರಿಗೆ...
ಮದುವೆಗೆ ಮೇಘನಾ ಅಪ್ಪ-ಅಮ್ಮನ ಒಪ್ಪಿಸಿದ್ದು ಜಗ್ಗೇಶ್
"ಒಂದು ದಿನ ರಾತ್ರಿ 11ಗಂಟೆಗೆ ನನಗೆ ಕರೆ ಬಂತು. ಸಿಟ್ಟಿನಿಂದ ಯಾರು ಅಂದೆ..? ನಾನು ಮಾಮ ಚಿರು ಅಂದ. ಯಾರೋ ನನ್ನ ನಂಬರ್ ನಿನಗೆ ಕೊಟ್ಟಿದ್ದು ಅಂದೆ. ನಕ್ಕು ದಯವಿಟ್ಟು ಮಾಮ ಅದು ಬಿಡಿ. ಅಂದ. ವಿಷಯ ನಾನು ಮೇಘನಾ ಮದುವೆ ಆಗಬೇಕು, ನಿಮ್ಮ ಆಶೀರ್ವಾದ ಬೇಕು. ಜೊತೆಗೆ ನೀವೇ ಅವಳ ಅಪ್ಪ ಅಮ್ಮನ ಜೊತೆ ಮಾತಾಡಬೇಕು ಅಂದ."
ಸಾವಿಗೆ ಕಾರಣವಾಯ್ತಾ ಜಾತಕ ದೋಷ?
"ಸುಂದರ್ ಮನೆಗೆ ಹೋಗಿ ಇದರ ಬಗ್ಗೆ ಮಾತಾಡಿ ನನ್ನ ಸ್ನೇಹಿತರಾದ ಜೋತಿಷಿ ಪ್ರಕಾಶ ಅಮ್ಮಣ್ಯರ ಬಳಿ ಇಬ್ಬರ ಜಾತಕ ಕೊಟ್ಟು ಚರ್ಚಿಸಿದೆ. ಆಗ ಅವರು ಹೇಳಿದ್ದು ಜಗ್ಗೇಶ್, ಅಷ್ಟಮ ಕುಜ ದೋಷ, ಅದಕ್ಕೆ ಕೆಲ ಪೂಜೆ ಮುಖ್ಯ. ಅದು ಮಾಡಿ ಮುಂದುವರೆಯಿರಿ" ಎಂದರು. ನಂತರ ಆ ಪೂಜೆ ಬಗ್ಗೆ ನನಗೆ ಮಾಹಿತಿ ಇಲ್ಲ. ಮದುವೆ ನಿಶ್ಚಯ ಆಯಿತು."
ಮೃತ ಚಿರಂಜೀವಿ ಸರ್ಜಾ ಕೊರೊನಾ ವೈರಸ್ ವರದಿ
ಸುಂದರ್ ರಾಜ್ ಮನೆಗೆ ಹೋಗಿ ಮದುವೆ ಫಿಕ್ಸ್ ಮಾಡಿದ್ದೆವು
"ಗಣೇಶನ ಜೊತೆ ಒಂದು ಗೆಸ್ಟ್ ರೋಲ್ ಮಾಡಿದೆ. ಆ ಚಿತ್ರೀಕರಣ ಮೇಘನಾ ಮನೆ ಮುಂದೆಯೇ ಇತ್ತು. ಚಿತ್ರೀಕರಣ ಮುಗಿಸಿ ಅವರ ಮನೆಗೆ ಹೋಗಿ ಕಾಫಿ ಕುಡಿದು ಅವರ ಮದುವೆಯ ವಿಷಯ ಮಾತಾಡಿ ಫಿಕ್ಸ್ ಆಗಿ ಮೇಘನಾ ಹಾಗು ಚಿರು ಜೊತೆ ಮಾತಾಡಿ ಸಂತೋಷವಾಗಿ ಮನೆಗೆ ಬಂದು, ನಾನು ಪರಿಮಳಾ ಈ ವಿಷಯ ಪ್ರಸ್ತಾಪ ಮಾಡಿದೆವು. ದೇವರ ದಯೆಯಿಂದ ಮದುವೆಯು ಮುಗಿಯಿತು."
ಮೆಚ್ಚಿನ ಹುಡುಗ ಚಿರು ಸರ್ಜಾ ಗೆ ದುಃಖದ ಶ್ರದ್ಧಾಂಜಲಿ ಸಲ್ಲಿಸಿದ ಅರ್ಜುನ್ ಸರ್ಜಾ
ಮದುವೆ ಆದಮೇಲೆ ಯಾಕೆ ಗ್ಯಾಪ್?
"ನಂತರ ಚಿರು ಅನೇಕ ಬಾರಿ ಕರೆಮಾಡಿ "ಮಾಮ ದಯಮಾಡಿ ಅಜ್ಜಿಯ ಕೈ ರುಚಿ ಸವಿಯಲು ಮನೆಗೆ ಬನ್ನಿ" ಎಂದು ಕರೆಯುತ್ತಿದ್ದ. ನನ್ನದು ವಿಚಿತ್ರ ಜನ್ಮ, ಹೂಂ ಎನ್ನುತ್ತಿದ್ದೆ ಆದರೆ ಹೋಗಲಿಲ್ಲ. ಯಾಕೋ ಇಂದು ನಾನು ಪರಿಮಳಾ, ಚಿರು ಬಗ್ಗೆ ಮಾತಾಡುತ್ತಾ ಏನ್ ಹುಡುಗರೋ, ಮದುವೆ ಆದಮೇಲೆ ಯಾಕೆ ಗ್ಯಾಪ್? ಇಷ್ಟೊತ್ತಿಗೆ Good News ಬೇಕಿತ್ತು, ಎಂದು ಮಾತಾಡಿಕೊಂಡೆವು."
ಶಂಕರ್ ನಾಗ್ ಸಾಲಿಗೆ ಚಿರು ಸೇರಿಬಿಟ್ಟನೆ
"ಮಧ್ಯಾಹ್ನ ಊಟ ಮಾಡಿ ಮಲಗಿದೆ. ಚಾಲಕ ಪದ್ದು ಕರೆಮಾಡಿ, Boss TV ನೋಡಿದ್ರಾ.? ಚಿರು ಹೋಗಿಬಿಟ್ಟಾ ಎಂದ. ಕೇಳಿ ಹುಚ್ಚನಂತೆ ಅತ್ತುಬಿಟ್ಟೆ. ಇಷ್ಟೇನಾ ಬದುಕು.? ಇದಕ್ಕಾ ನಮ್ಮ ಹೋರಾಟ..? ನಮ್ಮಂಥ ಹಿರಿಯರು ನಮ್ಮ ಕಣ್ಣ ಮುಂದಿನ ಕಿರಿಯರ ಸಾವು ನೋಡಬೇಕೆ.? ಎಂಥ ದೌರ್ಭಾಗ್ಯ. ಶಂಕರ್ ನಾಗ್ ಹೀಗೆ 36ನೇ ವಯಸ್ಸಿಗೆ ಕಾಲವಾದರು. ಆ ಸಾಲಿಗೆ ಚಿರು ಸೇರಿಬಿಟ್ಟನೆ. ಹುಟ್ಟಿಗೆ ಸಾವು ಖಚಿತ. ಆದರೆ ಇಷ್ಟು ಬೇಗವೇ.? ಓ ದೇವರೆ ಈ ಸಾವು ನ್ಯಾಯವೇ.? ದುಃಖದಿಂದ ವಿದಾಯ ಕಲಾಬಂಧುವಿಗೆ. ಓಂಶಾಂತಿ"