Just In
Don't Miss!
- News
ಕೃಷಿ ಕಾಯ್ದೆಗಳ ಕಥೆ: ರೈತರಿಗೆ ಸಮಾಧಾನ ನೀಡದ "ಸಂಧಾನ" ಸಭೆಗಳ ಸಾಲು!
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 20ರ ಚಿನ್ನ, ಬೆಳ್ಳಿ ದರ
- Sports
ಐಪಿಎಲ್ 2021: ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡ, ಬಿಟ್ಟುಕೊಟ್ಟ ಆಟಗಾರರ ಪಟ್ಟಿ
- Lifestyle
ಕೋವಿಡ್ 19 ಲಸಿಕೆಯ ಅಡ್ಡಪರಿಣಾಮದಿಂದ ಸಾವು ಸಂಭವಿಸಲ್ಲ: ಏಮ್ಸ್ ನಿರ್ದೇಶಕ
- Automobiles
ಭಾರೀ ಗಾತ್ರದ ಎಸ್ಯುವಿಯನ್ನು ಬಾಯಿಂದ ಹಿಂದಕ್ಕೆಳೆದ ಹುಲಿ
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ನಟ ಜಗ್ಗೇಶ್ ಮತ್ತು ಗುರು ಪ್ರಸಾದ್ ಜೋಡಿಯ 'ರಂಗನಾಯಕ' ಸಿನಿಮಾ ಕಥೆ ಏನಾಯಿತು?
ಸ್ಯಾಂಡಲ್ ವುಡ್ ನ ಹಿರಿಯ ನಟ ಜಗ್ಗೇಶ್ ಮತ್ತು ನಿರ್ದೇಶಕ ಮಠ ಗುರುಪ್ರಸಾದ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಬರ್ತಿದೆ ಎನ್ನುವ ವಿಚಾರ ಕೇಳಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದರು. ಚಿತ್ರಕ್ಕೆ ರಂಗನಾಯಕ ಎಂದು ಟೈಟಲ್ ಇಟ್ಟು ಚಿತ್ರಪ್ರಿಯರ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದ್ದರು.
ರಂಗನಾಯಕ ಸಿನಿಮಾದಿಂದ ಟೀಸರ್ ಸಹ ರಿಲೀಸ್ ಮಾಡಿದ್ದರು. ಈ ಸಿನಿಮಾ ಅನೌನ್ಸ್ ಮಾಡಿ ವರ್ಷದ ಮೇಲಾಗಿದೆ. ಈ ಬಗ್ಗೆ ಯಾವುದೇ ಅಪ್ ಡೇಟ್ ಸಿಗದೆ ಅಭಿಮಾನಿಗಳು ಕಂಗಾಲಾಗಿದ್ದರು. ಆದರೀಗ ಸಿನಿಮಾ ಕಡೆಯಿಂದ ಹೊಸ ಸುದ್ದಿ ಕೇಳಿಬಂದಿದೆ. ಚಿತ್ರೀಕರಣಕ್ಕೆ ಹೊರಡಲಿ ಸಿನಿಮಾತಂಡ ತಯಾರಿ ನಡೆಸುತ್ತಿದೆಯಂತೆ.
'ಪದವಿ ಪೂರ್ವ' ಚಿತ್ರದ ಸೆಟ್ಗೆ ಸರ್ಪ್ರೈಸ್ ಭೇಟಿ ನೀಡಿದ ನಟ ಜಗ್ಗೇಶ್
ಮಠ, ಎದ್ದೇಳು ಮಂಜುನಾಥದಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಈ ಜೋಡಿ ಮನಸ್ತಾಪ ಮಾಡಿಕೊಂಡು ದೂರ ದೂರ ಆಗಿದ್ದರು. ಆದರೆ ರಂಗನಾಯಕ ಮೂಲಕ ಮುನಿಸು ಮರೆತು ಮೂರನೆ ಬಾರಿಗೆ ಒಂದಾಗಿರುವ ಈ ಜೋಡಿಯ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ. ರಂಗನಾಯಕ ಈಗ ಚಿತ್ರೀಕರಣಕ್ಕೆ ಹೊರಡಲು ಸಜ್ಜಾಗಿದೆ.
ಈಗಾಗಲೇ ಸಿನಿಮಾತಂಡ ಹಾಡಿನ ರೆಕಾರ್ಡಿಂಗ್ ನಲ್ಲಿ ಬ್ಯುಸಿಯಾಗಿದೆ. ಜನವರಿಯಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ತಯಾರಿ ಮಾಡಿಕೊಂಡಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕೊರೊನಾ ಲಾಕ್ ಡೌನ್ ಬಳಿಕ ಜಗ್ಗೇಶ್ ಯಾವುದೇ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಆದರೀಗ ರಂಗನಾಯಕ ಮೂಲಕ ಚಿತ್ರೀಕರಣಕ್ಕೆ ಹೊರಡುತ್ತಿದ್ದಾರೆ.
ರಂಗನಾಯಕ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ ಎಂದು ಈ ಹಿಂದೆ ಜಗ್ಗೇಶ್ ಹೇಳಿದ್ದರು. ಅಲ್ಲದೆ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಕೂಡ ನಡೆಯುತ್ತಿದೆ ಎಂದಿದ್ದರು. ಇದೀಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ಚಿತ್ರೀಕರಣಕ್ಕೆ ಹೊರಡುತ್ತಿದೆ. ರಂಗನಾಯಕ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.