Don't Miss!
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಜಗ್ಗೇಶ್ ಮತ್ತು ಗುರು ಪ್ರಸಾದ್ ಜೋಡಿಯ 'ರಂಗನಾಯಕ' ಸಿನಿಮಾ ಕಥೆ ಏನಾಯಿತು?
ಸ್ಯಾಂಡಲ್ ವುಡ್ ನ ಹಿರಿಯ ನಟ ಜಗ್ಗೇಶ್ ಮತ್ತು ನಿರ್ದೇಶಕ ಮಠ ಗುರುಪ್ರಸಾದ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಬರ್ತಿದೆ ಎನ್ನುವ ವಿಚಾರ ಕೇಳಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದರು. ಚಿತ್ರಕ್ಕೆ ರಂಗನಾಯಕ ಎಂದು ಟೈಟಲ್ ಇಟ್ಟು ಚಿತ್ರಪ್ರಿಯರ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದ್ದರು.
ರಂಗನಾಯಕ ಸಿನಿಮಾದಿಂದ ಟೀಸರ್ ಸಹ ರಿಲೀಸ್ ಮಾಡಿದ್ದರು. ಈ ಸಿನಿಮಾ ಅನೌನ್ಸ್ ಮಾಡಿ ವರ್ಷದ ಮೇಲಾಗಿದೆ. ಈ ಬಗ್ಗೆ ಯಾವುದೇ ಅಪ್ ಡೇಟ್ ಸಿಗದೆ ಅಭಿಮಾನಿಗಳು ಕಂಗಾಲಾಗಿದ್ದರು. ಆದರೀಗ ಸಿನಿಮಾ ಕಡೆಯಿಂದ ಹೊಸ ಸುದ್ದಿ ಕೇಳಿಬಂದಿದೆ. ಚಿತ್ರೀಕರಣಕ್ಕೆ ಹೊರಡಲಿ ಸಿನಿಮಾತಂಡ ತಯಾರಿ ನಡೆಸುತ್ತಿದೆಯಂತೆ.
'ಪದವಿ ಪೂರ್ವ' ಚಿತ್ರದ ಸೆಟ್ಗೆ ಸರ್ಪ್ರೈಸ್ ಭೇಟಿ ನೀಡಿದ ನಟ ಜಗ್ಗೇಶ್
ಮಠ, ಎದ್ದೇಳು ಮಂಜುನಾಥದಂತಹ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಈ ಜೋಡಿ ಮನಸ್ತಾಪ ಮಾಡಿಕೊಂಡು ದೂರ ದೂರ ಆಗಿದ್ದರು. ಆದರೆ ರಂಗನಾಯಕ ಮೂಲಕ ಮುನಿಸು ಮರೆತು ಮೂರನೆ ಬಾರಿಗೆ ಒಂದಾಗಿರುವ ಈ ಜೋಡಿಯ ಮೇಲೆ ನಿರೀಕ್ಷೆ ಇಮ್ಮಡಿಯಾಗಿದೆ. ರಂಗನಾಯಕ ಈಗ ಚಿತ್ರೀಕರಣಕ್ಕೆ ಹೊರಡಲು ಸಜ್ಜಾಗಿದೆ.
ಈಗಾಗಲೇ ಸಿನಿಮಾತಂಡ ಹಾಡಿನ ರೆಕಾರ್ಡಿಂಗ್ ನಲ್ಲಿ ಬ್ಯುಸಿಯಾಗಿದೆ. ಜನವರಿಯಿಂದ ಚಿತ್ರೀಕರಣ ಪ್ರಾರಂಭ ಮಾಡಲು ಸಿನಿಮಾತಂಡ ತಯಾರಿ ಮಾಡಿಕೊಂಡಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕೊರೊನಾ ಲಾಕ್ ಡೌನ್ ಬಳಿಕ ಜಗ್ಗೇಶ್ ಯಾವುದೇ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಆದರೀಗ ರಂಗನಾಯಕ ಮೂಲಕ ಚಿತ್ರೀಕರಣಕ್ಕೆ ಹೊರಡುತ್ತಿದ್ದಾರೆ.
Recommended Video
ರಂಗನಾಯಕ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿರುವ ಸಿನಿಮಾ ಎಂದು ಈ ಹಿಂದೆ ಜಗ್ಗೇಶ್ ಹೇಳಿದ್ದರು. ಅಲ್ಲದೆ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಕೂಡ ನಡೆಯುತ್ತಿದೆ ಎಂದಿದ್ದರು. ಇದೀಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ಚಿತ್ರೀಕರಣಕ್ಕೆ ಹೊರಡುತ್ತಿದೆ. ರಂಗನಾಯಕ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.