Don't Miss!
- News Rain Alert: ಮಳೆ.. ಮಳೆ.. ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಗ್ಯಾರಂಟಿ!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಗ್ಗೇಶ್ ನಟನಾಗುವ ಬಗ್ಗೆ ಭವಿಷ್ಯ ನುಡಿದಿದ್ದ ಮೇಷ್ಟ್ರು ಇನ್ನಿಲ್ಲ
ಜಗ್ಗೇಶ್ ಮುಂದೊಂದು ದಿನ ಕಲಾವಿದರಾಗುತ್ತಾರೆ ಎಂದು ಎಳವೆಯಲ್ಲಿಯೇ ಭವಿಷ್ಯ ನುಡಿದಿದ್ದ ಜಗ್ಗೇಶ್ ಅವರ ಪ್ರೀತಿಯ ಶಿಕ್ಷಕ ಎಂ.ರಾಮಮೂರ್ತಿ ಅವರು ನಿಧನ ಹೊಂದಿದ್ದಾರೆ. ಈ ಬಗ್ಗೆ ಜಗ್ಗೇಶ್ ಅವರು ಟ್ವೀಟ್ ಮಾಡಿದ್ದು, ನೆಚ್ಚಿನ ಶಿಕ್ಷಕ ಅಗಲಿದ್ದಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
''ನನಗೆ ಗಣಿತ ವಿಜ್ಞಾನ ಪಾಠ ಮಾಡಿ ಹಾಗು ಒಂದಲ್ಲಾ ಒಂದುದಿನ ಇವನು ಕಲಾವಿದ ಆಗುತ್ತಾನೆ ಎಂದು ನಾನು 8ನೆ ಕ್ಲಾಸಿನಲ್ಲಿ ಇರಬೇಕಾದರೆ ಭವಿಷ್ಯ ನುಡಿದಿದ್ದ ಗುರುಗಳು ಮಾರ್ಚ್ 18 ರಂದು ಶಿವನಲ್ಲಿ ಲೀನವಾದರು'' ಎಂದಿದ್ದಾರೆ ಜಗ್ಗೇಶ್.
'ಬಿಪಿಐಎಚ್ಎಸ್ ಶಾಲೆ ಮಲ್ಲೇಶ್ವರದ ಹೆಮ್ಮೆಯ ಪ್ರಾಧ್ಯಾಪಕರ ಆತ್ಮಕ್ಕೆ ಶಾಂತಿ ಕೋರುವ ನಿಮ್ಮ ತುಂಟ ವಿದ್ಯಾರ್ಥಿ ಈಶ್ವರಗೌಡ' ಎಂದು ಅಗಲಿದ ಶಿಕ್ಷಕನ ಆತ್ಮಕ್ಕೆ ಶಾಂತಿ ಕೋರಿದ್ದಾರೆ ಜಗ್ಗೇಶ್.
ಬಿಪಿ ಇಂಡಿಯನ್ ಹೈ ಸ್ಕೂಲ್ನಲ್ಲಿ ಪ್ರಾಧ್ಯಾಪಕರಾಗಿದ್ದ ರಾಮಮೂರ್ತಿ ಅವರು ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧನೆ ಮಾಡುತ್ತಿದ್ದರು. ವಿದ್ಯಾರ್ಥಿಗಳ ಮೆಚ್ಚಿನ ಎಂಆರ್ಎಂ ಮೇಷ್ಟ್ರಾಗಿ ಇವರು ಗುರುತಿಸಿಕೊಂಡಿದ್ದರು.
Recommended Video
ರಾಮಮೂರ್ತಿ ಅವರು ಅಗಲಿದ ಬಗ್ಗೆ ಅವರ ಮಗ ನಂದ ಗೋಪಾಲ್ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, '60 ವರ್ಷದ ಅವರ ಶಿಕ್ಷಕ ಸೇವಾ ಜೀವನದಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ಗಣಿತ, ವಿಜ್ಞಾನ ಬೋಧಿಸಿದ್ದಾರೆ. ರಾಮಮೂರ್ತಿ ಅವರು 87 ವರ್ಷ ಸಾರ್ಥಕ ಜೀವನ ನಡೆಸಿ ವಿಧಿವಶರಾಗಿದ್ದಾರೆ' ಎಂದಿದ್ದಾರೆ.