Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಜಗ್ಗೇಶ್ ಪುತ್ರನ ಕಾರು ಅಪಘಾತ: ಅಪಾಯದಿಂದ ಪಾರು
ಕನ್ನಡದ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಅವರ ಮಗ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Recommended Video
ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಜಗ್ಗೇಶ್ ಪುತ್ರ ಯತಿರಾಜ್ ಗೆ ಸಣ್ಣಪುಟ್ಟ ಗಾಯಗಳಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಆಗಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿದು ಬಂದಿದೆ.
ಕಾರನ್ನು ಸ್ವತಃ ಯತಿರಾಜ್ ಡ್ರೈವ್ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದ್ದು, ಈ ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯಕ್ಕೆ ಯತಿರಾಜ್ ಆರೋಗ್ಯ ಸ್ಥಿತಿ ಚೆನ್ನಾಗಿದೆ.
ಅಪಘಾತ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಯತಿರಾಜ್ ಪ್ರಸ್ತುತ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಅಪಘಾತದ ರಭಸಕ್ಕೆ ಯತಿರಾಜ್ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ಮಗನ
ಕಾರು
ಅಪಘಾತದ
ಬಗ್ಗೆ
ನಟ
ಜಗ್ಗೇಶ್
ಟ್ವಿಟ್ಟರ್
ಮೂಲಕ
ಮಾಹಿತಿ
ನೀಡಿದ್ದಾರೆ.
''ಕೊರೊನಾ
ಬಂದಾಗಿನಿಂದ
ಹೊರ
ಹೋಗಿಲ್ಲಾ
ಹೋಗಿಬರುವೆ
ಎಂದು
ಅಮ್ಮನಿಗೆ
ಹೇಳಿ
ಹೊರ
ಹೋದ
ಮಗ
ಯತಿರಾಜ,
ಅವನು
ಪ್ರತಿಬಾರಿ
ಅವನ
ಇಷ್ಟದ
ರಸ್ತೆ
ಬೆಂಗಳೂರಿನಿಂದ
ಚಿಕ್ಕಬಳ್ಳಾಪುರ
ಹೋಗಿ
ಬರುವಾಗ
ಅಡ್ಡ
ಬಂದ
ನಾಯಿ
ರಕ್ಷಿಸಲು
ಹೋಗಿ
ರಸ್ತೆ
ವಿಭಜಕ್ಕೆ
ಹೊಡೆದು
ಕಾರು
ಪಕ್ಕದ
ರಸ್ತೆಗೆ
ಬಿದ್ದಿದೆ.
ರಾಯರದಯೇ
ಹಾಗು
ನಿಮ್ಮ
ಶುಭ
ಹಾರೈಕೆ
ಯತಿರಾಜನಿಗೆ
ಸಣ್ಣ
ಗಾಯವು
ಇಲ್ಲ''
ಎಂದು
ತಿಳಿಸಿದ್ದಾರೆ.