Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಗರಿ ಅನೇಕ ಮಹನೀಯರ ಕನಸು, ಒಬ್ಬರಿಂದ ಸಾಧ್ಯವಾಗಿಲ್ಲ: ನಟ ಜಗ್ಗೇಶ್
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ 75ನೇ ವರ್ಷದ ಲಾಂಛನ ಬಿಡುಗಡೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ಸಮಾರಂಭದಲ್ಲಿ ಹಿರಿಯ ನಟ ಜಗ್ಗೇಶ್, ರವಿಚಂದ್ರನ್, ಜಯಮಾಲಾ ಮತ್ತು ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಾಕಷ್ಟು ಗಣ್ಯರು ಭಾಗಿಯಾಗಿದ್ದರು.
75ನೇ ವರ್ಷದ ಲಾಂಛನವನ್ನು ಬಿಡುಗಡೆ ಮಾಡಲಾಯಿತು. ನಂತರ ಮಾತನಾಡಿದ ಜಗ್ಗೇಶ್ "ಇಲ್ಲಿ ಫೌಂಡೇಶನ್ ಗೆ ಗೌರವ ಕೊಟ್ಟಿದ್ದಾರೆ, ಕಳಶಕ್ಕೆ ಗೌರವ ಕೊಟ್ಟಿಲ್ಲ ಎನ್ನುವುದೇ ನನಗೆ ಸಂತಸ ತಂದಿದೆ" ಎಂದರು. "1944ನೇ ಇಸವಿಯಲ್ಲಿ ಮೈಸೂರು ವಾಣಿಜ್ಯ ಮಂಡಳಿ ಆಗಿತ್ತು. ರಾಜ್ ಕುಮಾರ್, ಅಂಬಿ, ವಿಷ್ಣು ಮತ್ತು ಸಾಕಷ್ಟು ದಿಗ್ಗಜರ ಪರಿಕಲ್ಪನೆಯಲ್ಲಿ ಆಗಿದ್ದು ವಾಣಿಜ್ಯ ಮಂಡಳಿ" ಎಂದರು.
ನನ್ನ-ಗುರು ಜೋಡಿ ಕನ್ನಡಿಗರಿಗೆ ನಗುವಿನ ಹಬ್ಬ: ನವರಸನಾಯಕ ಜಗ್ಗೇಶ್
"ಸರ್ಕಾರ ಚಿತ್ರನಗರಿ ನಿರ್ಮಾಣಕ್ಕೆ 500 ಕೋಟಿ ಕೊಡಲಾಗಿದೆ. ಅದರ ಕೀರ್ತಿ ಫೌಂಡೇಶನ್ (ಹಿರಿಯರಿಗೆ) ಸೇರಬೇಕು. ಪ್ರತಿದಿನ ಪ್ರತಿನಿತ್ಯ ಸಿನಿಮಾ ರಂಗದ ಬಗ್ಗೆ ನಮ್ಮ ಚಿತ್ರ ನಗರಿ ಎಂದು ದೊಡ್ಡ ಕನಸನ್ನು ಇಟ್ಟುಕೊಂಡು ಬಂದಂತಹ ಮಹನೀಯರು ಅನೇಕರು ಇದ್ದಾರೆ. ಇದು ಒಬ್ಬರಿಂದ ಸಾಧ್ಯವಾಗಿಲ್ಲ. ತಪ್ಪು ಸಂದೇಶ ಹೋಗಬಾರದು. ಎಂದರು.
ಇನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಬಗ್ಗೆ ಮಾತನಾಡಿದ ಜಗ್ಗೇಶ್ ಅತಿಥಿಗಳ ಆಹ್ವಾನ ವಿಚಾರದ ಬಗ್ಗೆ ಬೇಸರ ಹೊರಹಾಕಿದರು. "ಹಿರಿಯರನ್ನು ಕರೆಸಿ ಚರ್ಚೆ ಮಾಡಿ ನಂತರ ನಿರ್ಧಾರ ತೆಗೆದುಕೊಳ್ಳಬೇಕು. ಯಾರನ್ನು ಕರೆಯಬೇಕು, ಯಾರಿಗೆ ಘನತೆ ಗೌರವ ಕೊಡಬೇಕು ಎಂದು ಹಿರಿಯರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕು" ಎಂದರು.
"ರವಿಚಂದ್ರನ್, ಶಿವರಾಜ್ ಕುಮಾರ್ ಇನ್ನೂ ಸಾಕಷ್ಟು ಹಿರಿಯರಿದ್ದಾರೆ. ಅವರನ್ನು ಕರೆಸಿ ಮೊದಲು ಚರ್ಚಿಸಿ ಆಯ್ಕೆ ಮಾಡಬೇಕು" ಎಂದರು. ಇನ್ನು ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಪೈರಸಿ ಆಗುತ್ತಿರುವುದರಿಂದ ಸೈಬರ್ ಕ್ರೈಮ್ ಅನ್ನು ಮತ್ತಷ್ಟು ಬಿಗಿಗೊಳಿಸಬೇಕು ಎಂದರು.