ಗಾಂಧಿನಗರದ ತಂತ್ರಗಾರಿಕೆಯಿಂದ ನನ್ನ ಆಸೆ ಈಡೇರಲಿಲ್ಲ- ಜಗ್ಗೇಶ್
ಗಾಂಧಿನಗರದ ತಂತ್ರಗಾರಿಕೆಯಿಂದ ನನ್ನ ಆಸೆ ಈಡೇರಿಲಿಲ್ಲ ಎಂದು ನಟ ಜಗ್ಗೇಶ್ ಹೇಳಿದ್ದಾರೆ. 'ಕಾಳಿದಾಸ ಕನ್ನಡ ಮೇಷ್ಟ್ರು' ಸಿನಿಮಾ ಪ್ರೆಸ್ ಮೀಟ್ ನಲ್ಲಿ ಬೇಸರ ವ್ಯಕ್ತ ಪಡಿಸಿದ್ದಾರೆ.
ಕನ್ನಡ ಭಾಷೆಯ ಬಗ್ಗೆ ಇರುವ 'ಕಾಳಿದಾಸ ಕನ್ನಡ ಮೇಷ್ಟ್ರು' ಸಿನಿಮಾವನ್ನು ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವದ ವಿಶೇಷವಾಗಿ ಬಿಡುಗಡೆ ಮಾಡಬೇಕು ಎನ್ನುವುದು ಜಗ್ಗೇಶ್ ಮತ್ತು ತಂಡದ ಆಸೆ ಆಗಿತ್ತು. ಆದರೆ, ಬೇರೆ ಬೇರೆ ಸಿನಿಮಾಗಳು ಬಿಡುಗಡೆ ದಿನಾಂಕ ನಿಗದಿ ಮಾಡಿದ್ದ, ಕಾರಣ ನಮ್ಮ ಸಿನಿಮಾ ಮುಂದಕ್ಕೆ ಹೋಯ್ತು ಎಂದು ಜಗ್ಗೇಶ್ ತಿಳಿಸಿದ್ದಾರೆ.
ಗಾಂಧಿನಗರದ ತಂತ್ರಗಾರಿಕೆಯಿಂದ ನಮ್ಮ ಸಿನಿಮಾ ಅಂದು ಬಿಡುಗಡೆಯಾಗದೆ ಇರುವ ಹಾಗೆ ಆಯಿತು. ಇದು ಒಳ್ಳೆಯ ಲಕ್ಷಣ ಅಲ್ಲ ಎಂದು ಜಗ್ಗೇಶ್ ಹೇಳಿಕೊಂಡಿದ್ದಾರೆ. ಈ ರೀತಿ ಮಾಡಿದರೆ, ಹೊಸಬರ ಸಿನಿಮಾಗಳಿಗೆ ಬಹಳ ಕಷ್ಟ ಆಗುತ್ತದೆ. ಈ ಹಿಂದೆ ಚಿತ್ರ ಬಿಡುಗಡೆಗೆ ಒಂದು ಮಾನದಂಡ ಇತ್ತು. ಇಂದು ಚಿತ್ರರಂಗದಲ್ಲಿ ಶಿಸ್ತು ಇಲ್ಲ ಎನ್ನುವುದು ಜಗ್ಗೇಶ್ ವಾದ.

ಇನ್ನು ಸಿನಿಮಾದ ಬಗ್ಗೆ ಮಾತನಾಡಿದ ಅವರು ಇಂದು ರಿಯಾಲಿಟಿ ಇರುವ ಸಿನಿಮಾಗಳು ಗೆಲ್ಲುತ್ತಿವೆ. ನಮ್ಮ ಸಿನಿಮಾ ಕೂಡ ಹಾಗೆಯೇ ಇದೆ. ಒಂದು ಗಂಭೀರ ವಿಷಯವನ್ನು ಕಾಮಿಡಿ ಮೂಲಕ ಹೇಳಿದ್ದೇವೆ. ಕೊನೆಯ ಹತ್ತು ನಿಮಿಷ ಸೀರಿಯಸ್ ಆಗಿದೆ. ವೈಯಕ್ತಿಕವಾಗಿ ನನಗೆ ತುಂಬ ಇಷ್ಟ ಆಗಿದೆ ಎಂದಿದ್ದಾರೆ
'ಕಾಳಿದಾಸ ಕನ್ನಡ ಮೇಷ್ಟ್ರು' ಸಿನಿಮಾ ನವೆಂಬರ್ 22 ರಂದು ಬಿಡುಗಡೆ ಆಗುತ್ತಿದೆ. ಕವಿರಾಜ್ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ.


Click it and Unblock the Notifications











