Don't Miss!
- Sports RCB IPL 2024: 'ಆರ್ಸಿಬಿಯ ಹೊಸ ಅಧ್ಯಾಯ' ಮುಗಿದ ಅಧ್ಯಾಯನಾ? ಪ್ಲೇಆಫ್ ಸನ್ನಿವೇಶ ಹೇಗಿದೆ?
- News Neha Hiremath murder case: ನೇಹಾ ಕೊಲೆ ಖಂಡಿಸಿ ಕಾಂಗ್ರೆಸ್ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ
- Lifestyle ಗುಜರಾತ್ ಗಣಿಯಲ್ಲಿ ಬೃಹತ್ ಗಾತ್ರದ ಹಾವಿನ ಅಸ್ಥಿಪಂಜರ ಪತ್ತೆ..!
- Finance ಅಂತಾರಾಷ್ಟ್ರೀಯ ಮದ್ಯದ ಬ್ರ್ಯಾಂಡ್ಗಳಿಗೆ ಪ್ರಬಲ ಸ್ಪರ್ಧೆ ಒಡ್ಡುವ ಭಾರತೀಯ ವಿಸ್ಕಿಗಳು ಇವು
- Technology Uber: ಉಬರ್ನಲ್ಲಿ ಭಾರತೀಯರು ಏನನ್ನೆಲ್ಲಾ ಮರೆತು ಬರುತ್ತಾರೆ ಗೊತ್ತಾ!?
- Automobiles ಮದುವೆ ಉಡುಪು ಧರಿಸಿ ಕೆಟಿಎಂ ಬೈಕ್ನಲ್ಲಿ ಯುವತಿ ಸವಾರಿ... ವಿಡಿಯೋ ವೈರಲ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕ ದಿನ - ಜಗ್ಗೇಶ್
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ, ಅಧಿಕಾರ ನೀಡುವ ಸಂವಿಧಾನದ 370 ಮತ್ತು 35ಎ ಅನುಚ್ಛೇದ ರದ್ದುಗೊಳಿಸುವಂತೆ ಇಂದು (ಆಗಸ್ಟ್ 5) ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಸೂದೆಯನ್ನು ಮಂಡಿಸಿದೆ.
ಈ ಮಸೂದೆಯನ್ನು ಮಂಡಿಸಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಪ್ರತಿಕ್ರಿಯೆ ಸಿಕ್ಕಿದ್ದು, ಜನ ಸಾಮಾನ್ಯರಿಂದ ಹಿಡಿದು ಸಿನಿಮಾ ಸ್ಟಾರ್ ಗಳವರೆಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.
Kashmir Issue LIVE: ನೂತನ ಕೇಂದ್ರಾಡಳಿತ ಪ್ರದೇಶಕ್ಕೆ ಲೆಫ್ಟಿನೆಂಟ್ ಗವರ್ನರ್ ನೇಮಕ
ಈ ಬಗ್ಗೆ ಟ್ವೀಟ್ ಮಾಡಿರುವ ಕನ್ನಡ ನಟ ಹಾಗೂ ಬಿಜೆಪಿ ಪಕ್ಷದ ಮುಖಂಡ ಇಂದು ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕ ದಿನ ಎಂದು ವರ್ಣಿಸಿದ್ದಾರೆ.
''ಕರ್ಣಾನಂದವಾಯಿತು ಇಂದಿನ ನನ್ನ ಹೆಮ್ಮೆಯ ಭಾಜಪ ಪಕ್ಷದ ಐತಿಹಾಸಿಕ ನಿರ್ಣಯ. ಭಾರತೀಯರ ಪಾಲಿಗೆ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. 1947 ಅಲ್ಲಾ 2019 ಭಾರತಕ್ಕೆ ನಿಜವಾದ ಸ್ವತಂತ್ರ ಸಿಕ್ಕ ದಿನ. ಒಕ್ಕೂರಲಿನ ಸ್ವಾಭಿಮಾನದ ಘೋಷ ಮೊಳಗಲಿ'' ಎಂದು ನವರಸ ನಾಯಕ ಟ್ವೀಟ್ ಮಾಡಿದ್ದಾರೆ.
ಅಮಿತ್ ಶಾ ಮಂಡಿಸಿದ ವಿಧೇಯಕಕ್ಕೆ ಮಾಯಾವತಿಯ ಬಿಎಸ್ಪಿ ಬೆಂಬಲ
ಜಗ್ಗೇಶ್ ಮಾತ್ರವಲ್ಲದೆ, ಬಾಲಿವುಡ್ ಚಿತ್ರರಂಗದ ಸಾಕಷ್ಟು ತಾರೆಯರು ಕೂಡ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಕೇಂದ್ರದ ನಿರ್ಧಾರಕ್ಕೆ ಬೆಂಬಲ ನೀಡಿದ್ದಾರೆ.