Don't Miss!
- News ಧಾರವಾಡ; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್, ಕಣದಲ್ಲಿ 17 ಮಂದಿ
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪದವಿ ಪೂರ್ವ' ಚಿತ್ರದ ಸೆಟ್ಗೆ ಸರ್ಪ್ರೈಸ್ ಭೇಟಿ ನೀಡಿದ ನಟ ಜಗ್ಗೇಶ್
ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪದವಿ ಪೂರ್ವ ಚಿತ್ರದ ಸೆಟ್ಗೆ ನವರಸ ನಾಯಕ ಜಗ್ಗೇಶ್ ಸರ್ಪ್ರೈಸ್ ಭೇಟಿ ನೀಡಿದ್ದಾರೆ. ಜಗ್ಗೇಶ್ ಅವರ ಆಗಮನದಿಂದ ಇಡೀ ಚಿತ್ರತಂಡ ಸಂತಸಗೊಂಡಿದೆ.
ಬೆಂಗಳೂರಿನ ಕಾಲೇಜುವೊಂದರಲ್ಲಿ ಪದವಿ ಪೂರ್ವ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಜಗ್ಗೇಶ್ ಭೇಟಿ ನೀಡಿ ನಿರ್ದೇಶಕರಿಗೆ ಹಾಗು ಕಲಾವಿದರಿಗೆ ಶುಭಕೋರಿದ್ದಾರೆ.
''ಮುಂದಿನ ಪೀಳಿಗೆ ಉದ್ಧಾರಕ್ಕೆ ಸತ್ಯ ನುಡಿದೆ, ಅನುಭವಿಸಿ ಕನ್ನಡಕ್ಕೆ ಚಟ್ಟ ತಯಾರು''- ಜಗ್ಗೇಶ್
ಪದವಿ ಪೂರ್ವ ಸಿನಿಮಾ ವಿದ್ಯಾರ್ಥಿಗಳ ಸುತ್ತ ಸುತ್ತುವ ಕಥೆಯಾಗಿದ್ದು, ಪೃಥ್ವಿ ಶಾಮನೂರ್ ಮತ್ತು ಅಂಜಲಿ ಅನೀಶ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇವರ ಜೊತೆಗೆ ಯಶಾ ಶಿವಕುಮಾರ್ ಎಂಟ್ರಿಯಾಗಿದ್ದಾರೆ.
ಇದು 90ರ ದಶಕದ ಹಿನ್ನೆಲೆಯಲ್ಲಿ ಬರುವ ಕಾಲೇಜಿನ ವಿದ್ಯಾರ್ಥಿಗಳ ಕಥೆಯಾಗಿದೆ. ಐದು ಪ್ರಮುಖ ಪಾತ್ರಗಳಿವೆ. ಸದ್ಯಕ್ಕೆ ಮೂರು ಪಾತ್ರಗಳನ್ನು ಅಂತಿಮ ಮಾಡಿದ್ದು, ಇನ್ನು ಎರಡು ಪಾತ್ರಕ್ಕೆ ಹುಡುಕಾಟ ಮಾಡುತ್ತಿದ್ದಾರೆ.
Recommended Video
ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣ ಪ್ರಾರಂಭಿಸಿದೆ. ಯೋಗರಾಜ್ ಭಟ್ ಅವರು ಸಾಹಿತ್ಯ ರಚಿಸಲಿದ್ದು, ಅರ್ಜುನ್ ಜನ್ಯ ಸಂಗೀತ ಇರಲಿದೆ. ಸಂತೋಷ್ ರೈ ಪತಾಜೆ ಅವರು ಛಾಯಾಗ್ರಹಣವನ್ನು ಈ ಚಿತ್ರ ಒಳಗೊಂಡಿದೆ.