twitter
    For Quick Alerts
    ALLOW NOTIFICATIONS  
    For Daily Alerts

    ಮಾಧ್ಯಮಗಳಿಗೆ ಧನ್ಯವಾದ ತಿಳಿಸಿದ ಜಗ್ಗೇಶ್

    |

    ಸಿದ್ಧಗಂಗಾ ಮಠದ ಶ್ರೀಗಳು, ಡಾ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನ ಪಡೆಯುವುದಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ಸಮಯದ ಅಭಾವದಿಂದ ಅನೇಕ ಮಂದಿ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ.

    ಆದ್ರೆ, ದೇಶಾದ್ಯಂತ ಅನೇಕ ಭಕ್ತರು ಮನೆಯಲ್ಲೇ ಕೂತು 'ನಡೆದಾಡುವ ದೇವರ' ಅಂತಿಮ ದರ್ಶನ ಪಡೆಯುವಂತೆ ಮಾಡಿದ ಕನ್ನಡ ದೃಶ್ಯ ಮಾಧ್ಯಮಗಳಿಗೆ ಕನ್ನಡ ನಟ ಜಗ್ಗೇಶ್ ಧನ್ಯವಾದ ತಿಳಿಸಿದ್ದಾರೆ.

    ನಟ ಜಗ್ಗೇಶ್ ಅವರ ಎರಡು ಕೋರಿಕೆ ನೆರವೇರಿಸಿದ್ದರು ಸಿದ್ದಗಂಗಾ ಶ್ರೀ ನಟ ಜಗ್ಗೇಶ್ ಅವರ ಎರಡು ಕೋರಿಕೆ ನೆರವೇರಿಸಿದ್ದರು ಸಿದ್ದಗಂಗಾ ಶ್ರೀ

    ''ನಡೆದಾಡುವ ದೇವರ ಅಂತಿಮ ಕ್ರಿಯೇ ನೇರಪ್ರಸಾರ ಮಾಡಿ ನಾವು ಸಾಕ್ಷಾತ್ ಕಣ್ಣೆದುರೆ ನಮ್ಮ ನೆಚ್ಚಿನದೇವರು ಸಿದ್ಧಗಂಗಾ ಶ್ರೀಗಳ ಅಂತ್ಯ ಕಾರ್ಯ ನೋಡುವಂತ ಸೌಭಾಗ್ಯ ಕರುಣಿಸಿದ ನಮ್ಮ ಹೆಮ್ಮೆಯ ಕನ್ನಡದ ದೃಶ್ಯಮಾಧ್ಯಮಗಳ ಮಹನೀಯರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು.. ವರ್ಣಿಸಲಾಗದ ಸಂತೋಷ ಭಾವುಕನಾದೆ ಅವರ ಅಂತಿಮ ಕರ್ತವ್ಯಕಂಡು.. ಓಂ ನಮಃ ಶಿವಾಯಃ..'' ಎಂದು ಟ್ವೀಟ್ ಮಾಡಿದ್ದಾರೆ.

    Jaggesh thank to kannada tv channels

    'ಸಿದ್ದಗಂಗಾ ಶ್ರೀಗಳಿಂದ ಈ ವಸ್ತುವನ್ನು ಕಿತ್ತುಕೊಂಡು ಬಂದಿದ್ದೆ' - ಜಗ್ಗೇಶ್ 'ಸಿದ್ದಗಂಗಾ ಶ್ರೀಗಳಿಂದ ಈ ವಸ್ತುವನ್ನು ಕಿತ್ತುಕೊಂಡು ಬಂದಿದ್ದೆ' - ಜಗ್ಗೇಶ್

    ಇಂದು ಬೆಳಗ್ಗೆ ಶ್ರೀಗಳ ಅಂತಿಮ ದರ್ಶನ ಪಡೆದ ಜಗ್ಗೇಶ್ ಸಿದ್ದಗಂಗಾ ಮಠದ ಜೊತೆಗಿನ ತಮ್ಮ ಬಾಂಧವ್ಯವನ್ನ ಹೇಳಿಕೊಂಡರು. ಅಂದ್ಹಾಗೆ, ಸಿದ್ದಗಂಗಾ ಮಠದಿಂದ ಕೆಲವೇ ಕಿ.ಮೀ ದೂರದಲ್ಲಿರುವ ಜಡೆಮಾಯಸಂದ್ರ ಊರಿನವಾರಿಗುವ ಜಗ್ಗೇಶ್‌ ಅವರ ಕುಟುಂಬಕ್ಕೆ ಸಿದ್ದಗಂಗಾ ಮಠದ ಜೊತೆಗೆ ಹಿಂದಿನಿಂದಲೂ ನಂಟು. ತಾಯಿಯ ಜೊತೆ ಮಠಕ್ಕೆ ಬಂದು ಶ್ರೀಗಳಿಂದ ವಿಭೂತಿ ಪಡೆದ, ಶ್ರೀಗಳ ಪುಣ್ಯ ಪಾದಕ್ಕೆ ಹಣೆ ಒತ್ತಿದ ನೆನಪುಗಳನ್ನು ಜಗ್ಗೇಶ್ ಅವರು ಮರೆತಿಲ್ಲ.

    English summary
    Kannada actor has taken his twitter account to thank kannada tv channels for telecasting siddaganga mutt swamiji last funeral rites.
    Tuesday, January 22, 2019, 20:30
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X