Don't Miss!
- News ಅಧಿಕಾರಕ್ಕೆ ಬಂದ 2-3 ತಿಂಗಳಲ್ಲಿ ಕಾಡುಗೊಲ್ಲರಿಗೆ ನ್ಯಾಯ ದೊರಕಿಸಿ ಕೊಡುತ್ತೇವೆ-ಕುಮಾರಸ್ವಾಮಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾವು ಮೂರ್ನಾಲ್ಕು ಜನ ಸತ್ತ ಮೇಲೆ ತಿಥಿ ಮಾಡಿ ಆನಂದಿಸಿ: ಜಗ್ಗೇಶ್ ಆಕ್ರೋಶದ ನುಡಿ
ಸ್ಯಾಂಡಲ್ ವುಡ್ ನಲ್ಲಿ ನವರಸನಾಯಕ ಜಗ್ಗೇಶ್ ಆಡಿಯೋ ಕ್ಲಿಪ್ ವಿವಾದ ಭುಗಿಲೆದಿದ್ದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅವರ ಅಭಿಮಾನಿಗಳಿಗೆ ಅವಹೇಳನ ಮಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ಬಗ್ಗೆ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ.
Recommended Video
ಮೈಸೂರಿನಲ್ಲಿ ಚಿತ್ರೀಕರಣದಲ್ಲಿದ್ದ ನಟ ಜಗ್ಗೇಶ್ ಮೇಲೆ ದರ್ಶನ್ ಅಭಿಮಾನಿಗಳು ಏಕಾಏಕಿ ಮುತ್ತಿಗೆ ಹಾಕಿ ತರಾಟೆ ತೆಗೆದುಕೊಂಡ ಬಳಿಕ ನವರಸನಾಯಕ ಜಗ್ಗೇಶ್ ಅವರ ಆಕ್ರೋಶದ ಕಟ್ಟೆ ಒಡೆದಿದೆ. ಒಬ್ಬ ಹಿರಿಯ ನಟ ಎನ್ನುವುದನ್ನು ಲೆಕ್ಕಿಸದೆ ಅವರ ಮೇಲೆ ಮುಗಿಬಿದ್ದ ಅಭಿಮಾನಿಗಳ ವಿರುದ್ಧ ಜಗ್ಗೇಶ ಅಸಮಾಧಾನ ಹೊರಹಾಕಿದ್ದಾರೆ. ಈ ಘಟನೆ ಬಳಿಕ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿ ಆಕ್ರೋಶ ಹೊರಹಾಕಿದ್ದಾರೆ. ಮುಂದೆ ಓದಿ..
ಜಗ್ಗೇಶ್ ಲೈವ್: ಮಾಧ್ಯಮ, ಸ್ಟಾರ್ಡಂ, ರೌಡಿಸಂ ಸಂಸ್ಕೃತಿ ಮೇಲೆ ಸಿಟ್ಟು
ಘಟಾನುಘಟಿಗಳ ಜೊತೆ ಹೆಜ್ಜೆ ಹಾಕಿದವನು ನಾನು
'ನಾನು ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಾಗ ಈ ಬಕೆಟ್ ಹೀಡಿಯೋರು ಯಾರು ಹುಟ್ಟಿರಲಿಲ್ಲ. 80ನೇ ದಶಕದಲ್ಲಿ ಸಿನಿಮಾರಂಗಕ್ಕೆ ಬಂದವನು ನಾನು. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಪ್ರಭಾಕರ್, ಶಂಕರ್ ನಾಗ್ ಜೊತೆ ಹೆಜ್ಜೆ ಹಾಕಿದವನು ನಾನು. ಅವರ ಜೊತೆ ಮಾತಾನಾಡಿ, ನಕ್ಕು, ಅತ್ತು ಬದುಕಿದವನು. ಇವತ್ತು ಈ ಜಾಗದಲ್ಲಿ ನಿಂತಿದ್ದೀನಿ ಅಂದರೆ ಅದು ಕನ್ನಡಿಗರಿಂದ, ಕನ್ನಡಿಗರ ಪ್ರೀತಿಯಿಂದ ಮಾತ್ರ' ಎಂದಿದ್ದಾರೆ.
ಕನ್ನಡ ಚಿತ್ರರಂಗ ಹಾಳಾಗಿ ಹೋಗುತ್ತಿದೆ
'ಅನ್ಯ ಭಾಷಿಕರು ಬಂದು ಕನ್ನಡದ ಮಕ್ಕಳನ್ನು ದಬ್ಬಾಳಿಕೆ ಮಾಡುತ್ತಿದ್ದಾರೆ. ಕನ್ನಡ ಮಕ್ಕಳನ್ನು ತುಳಿಯುತ್ತಿದ್ದಾರೆ. ನಮ್ಮವರಿಗೆ ಪರಭಾಷೆಯಲ್ಲಿ ಮಾತನಾಡುವಂತೆ ಪ್ರಚೋದನೆ ನೀಡುತ್ತಿದ್ದಾರೆ. ಹಾಳಾಗಿ ಹೋಗುತ್ತಿದೆ ಕನ್ನಡ ಚಿತ್ರರಂಗ. ಇದನ್ನು ಕೇಳೋರು ಯಾರು ಇಲ್ಲ.'
ನಾವು ಸತ್ತ ಮೇಲೆ ತಿಥಿ ಮಾಡಿ ಆನಂದಿಸಿ
'ರಾಜ್ ಕಮಾರ್, ವಿಷ್ಣುವರ್ಧನ್, ಅಂಬರೀಶ್ ಸತ್ತ ಮಾರನೆ ದಿನ ಕನ್ನಡದ ಸ್ವಾಭಿಮಾನವೂ ಸಾಯುತ್ತಿದೆ. ನೆನಪಿರಲಿ ಉಳಿದಿದ್ದು ನಾವು ಮೂರ್ನಾಲ್ಕು ಜನ ಮಾತ್ರ. ನಾನೊಬ್ಬ ಶಿವರಾಜ್ ಕುಮಾರ್, ರವಿಚಂದ್ರನ್, ರಮೇಶ್ ಅರವಿಂದ್ ಮಾತ್ರ. ನಾವು ಸತ್ತ ಮೇಲೆ ತಿಥಿ ಮಾಡಿ, ಆನಂದ ಪಡಿ, ಸಂತೋಷ ಪಡಿ ಎಲ್ಲರೂ. ನಾಚಿಕೆ ಆಗಬೇಕು ನಿಮಗೆ' ಎಂದು ಗುಡುಗಿದ್ದಾರೆ.
ಜಗ್ಗೇಶ್ ಆಡಿಯೋ ಕ್ಲಿಪ್ ವಿವಾದ: ನವರಸನಾಯಕನ ವಿರುದ್ಧ ಮುಗಿಬಿದ್ದ ದರ್ಶನ್ ಅಭಿಮಾನಿಗಳು
ನನ್ನ ಪಾಡಿಗೆ ನನ್ನ ಬಿಡಿ
'ನನ್ನ ಪಾಡಿಗೆ ನನ್ನ ಬಿಡಿ. ನಾನು ಕನ್ನಡದ ಕೆಲಸ ಮಾಡುತ್ತೇನೆ. ಎಷ್ಟೋ ಜನ ಮಕ್ಕಳು ಅವರ ಕಷ್ಟಸುಖಕ್ಕೆ ನನ್ನ ಸಲಹೆ ಕೇಳುತ್ತಾರೆ. ದಯವಿಟ್ಟು ನನ್ನನ್ನೂ ಅವಮಾನ ಮಾಡಬೇಡು. ನಾನು ಇನ್ನು ಹತ್ತಾರು ವರ್ಷ ಕನ್ನಡದ ಕೆಲಸ ಮಾಡಬೇಕು. ನನಗೆ ಮಸಿ ಬಳಿಯಬೇಡಿ' ಎಂದು ಮನವಿ ಮಾಡಿದ್ದಾರೆ.
ನಾನು ತಲೆ ಹಿಡಿದು ಬೆಳೆದವನಲ್ಲ
'ನನ್ನ 40 ವರ್ಷವನ್ನು ಅಪಮಾನಿಸುತ್ತಿದ್ದೀರಿ. 40 ವರ್ಷ ಊಟ ನಿದ್ದೆ ಇಲ್ಲದೆ ಚಾಪೆ ಹಾಸಿಕೊಂಡು ಬೆಳೆದವನು ನಾನು. ತಲೆ ಹಿಡಿದು ಬೆಳೆದವನಲ್ಲ. ನಾನು ಕನ್ನಡಿಗರ ಚಪ್ಪಾಳೆ ತೆಗೆದುಕೊಂಡು ಬೆಳೆದವನು. ನನಗೆ ಅವಮಾನ ಮಾಡುವುದು ಒಂದೇ ಕನ್ನಡಿಗರು ಅವಮಾನ ಮಾಡುವುದೇ ಒಂದೆ. ದಯಮಾಡಿ ನನ್ನ ಬಗ್ಗೆ ಮಾತನಾಡಬೇಡಿ.