twitter
    For Quick Alerts
    ALLOW NOTIFICATIONS  
    For Daily Alerts

    ಪ್ಯಾನ್ ಇಂಡಿಯಾ ಚರ್ಚೆಯ ನಂತರ ಯಶ್ ಬಗ್ಗೆ ಜಗ್ಗೇಶ್ ಟ್ವೀಟ್

    |

    ''ನನ್ನ ಹಿರಿಮಗನ ವಯಸ್ಸಿನವ, ಉಧ್ಯಮದ ಒಳಗೆ ನಮ್ಮಗಳ ವಿಶ್ವಾಸ ಹಿರಿಯರು ಕಿರಿಯರ ಜೊತೆ ಸೌಹಾರ್ದಯುವಾಗಿದೆ'' ಎಂದು ಹಿರಿಯ ನಟ ಜಗ್ಗೇಶ್ ಅವರು ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಟ್ವೀಟ್ ಮಾಡಿದ್ದಾರೆ.

    Recommended Video

    ಪ್ಯಾನ್ ಇಂಡಿಯಾ ವಿವಾದ, ಯಶ್ ವಿಡಿಯೋ ಹಂಚಿಕೊಂಡ ಜಗ್ಗೇಶ್ | Filmibeat Kannada

    ಚಿತ್ರರಂಗದಲ್ಲಿ 40 ವರ್ಷ ಪೂರೈಸಿದ ಹಿನ್ನೆಲೆ ಹಿರಿಯ ನಟ ಜಗ್ಗೇಶ್ ಇತ್ತೀಚಿಗಷ್ಟೆ ಪ್ರೆಸ್ ಮೀಟ್ ಮಾಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಜಗ್ಗೇಶ್ ಪ್ಯಾನ್ ಇಂಡಿಯಾ ಚಿತ್ರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಜಗ್ಗೇಶ್ ಅವರ ಹೇಳಿಕೆ ನಂತರ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ನವರಸ ನಾಯಕನ ವಿರುದ್ಧ ತಿರುಗಿಬಿದ್ದಿದ್ದರು. ಜಗ್ಗೇಶ್ ಅವರು ಯಶ್ ಅವರನ್ನು ಟಾರ್ಗೆಟ್ ಮಾಡ್ತಿದ್ದಾರೆ ಎಂದು ಟೀಕಿಸಿದ್ದರು.

    'ಪ್ಯಾನ್ ಇಂಡಿಯಾ ನಮ್ಮನ್ನ ಉದ್ದಾರ ಮಾಡಲ್ಲ': ನಟ ಜಗ್ಗೇಶ್ ಅಸಮಾಧಾನ'ಪ್ಯಾನ್ ಇಂಡಿಯಾ ನಮ್ಮನ್ನ ಉದ್ದಾರ ಮಾಡಲ್ಲ': ನಟ ಜಗ್ಗೇಶ್ ಅಸಮಾಧಾನ

    ಆದ್ರೆ, ಜಗ್ಗೇಶ್ ಅಂದು ಪ್ರೆಸ್‌ಮೀಟ್‌ನಲ್ಲಿ ಯಾರ ಹೆಸರು ಉಲ್ಲೇಖಿಸಿರಲಿಲ್ಲ. ಇದೀಗ, ಯಶ್ ಅವರ ಹಳೆ ಸಂದರ್ಶನದ ತುಣುಕು ಒಂದನ್ನು ಹಂಚಿಕೊಂಡಿರುವ ಜಗ್ಗೇಶ್, ಯಶ್ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ...

    ನನ್ನ ಹಿರಿಮಗನ ವಯಸ್ಸಿನವ

    ನನ್ನ ಹಿರಿಮಗನ ವಯಸ್ಸಿನವ

    ಕನ್ನಡದ ಖಾಸಗಿ ಮಾಧ್ಯಮವೊಂದರ ಸಂದರ್ಶನ ಜಗ್ಗೇಶ್ ಅವರ ಬಗ್ಗೆ ಯಶ್ ಮಾತನಾಡುತ್ತಿರುವ ವಿಡಿಯೋ ಹಂಚಿಕೊಂಡಿರುವ ನವರಸ ನಾಯಕ ''ನನ್ನ ಹಿರಿಮಗನ ವಯಸ್ಸಿನವ..!! ನನ್ನಂತೆ ಯಾರ ಸಹಾಯವಿಲ್ಲದೆ ಬೆಳೆದವ ಎಂಬ ಹೆಮ್ಮೆಯಿದೆ..!! ಉಧ್ಯಮದ ಒಳಗೆ ನಮ್ಮಗಳ ವಿಶ್ವಾಸ ಹಿರಿಯರು ಕಿರಿಯರ ಜೊತೆ ಸೌಹಾರ್ದಯುವಾಗಿದೆ!'' ಎಂದು ಹೇಳುವ ಮೂಲಕ ನಾವು ಚೆನ್ನಾಗಿದ್ದೇವೆ ಎಂದು ಸಾರಿ ಹೇಳಿದ್ದಾರೆ.

    ಹಿಂಬಾಲಕರಿಗಾಗಿ ಅಲೆಯುವ ತಂತ್ರವಾದಿಗಳಿಗೆ ಗೊತ್ತಿಲ್ಲ

    ಹಿಂಬಾಲಕರಿಗಾಗಿ ಅಲೆಯುವ ತಂತ್ರವಾದಿಗಳಿಗೆ ಗೊತ್ತಿಲ್ಲ

    ''ಸಾಮಾಜಿಕ ಜಾಲತಾಣದಲ್ಲೆ ಲೈಕ್ಸ್‌ಗಾಗಿ ಜೀವಿಸಿ ಮೊಬೈಲ್ನಲ್ಲೆ ಬದುಕುವ ಹಾಗು ಇತ್ತೀಚಿಗೆ ಯ್ಯೂಟ್ಯೂಬ್‌ ಖಾತೆ ತೆರೆದು ಹಿಂಬಾಲಕರಿಗಾಗಿ ಅಲೆಯುವ ತಂತ್ರವಾದಿಗಳಿಗೆ ಅರಿವಾಗದು'' ಎಂದು ತಮ್ಮನ್ನು ಟೀಕಿಸಿದ ಕೆಲವರಿಗೆ ಜಗ್ಗೇಶ್ ಪ್ರತ್ಯುತ್ತರ ನೀಡಿದ್ದಾರೆ.

    ಮಾರುವೇಷದಲ್ಲಿ 'KGF' ನೋಡಿದ ಜಗ್ಗೇಶ್ : ದರ್ಶನ್ ಫ್ಯಾನ್ ಮಾತಿಗೆ ಜಗ್ಗೇಶ್ ಭಾವುಕಮಾರುವೇಷದಲ್ಲಿ 'KGF' ನೋಡಿದ ಜಗ್ಗೇಶ್ : ದರ್ಶನ್ ಫ್ಯಾನ್ ಮಾತಿಗೆ ಜಗ್ಗೇಶ್ ಭಾವುಕ

    ಪ್ಯಾನ್ ಇಂಡಿಯಾ ವಿವಾದ ಏನಿದು?

    ಪ್ಯಾನ್ ಇಂಡಿಯಾ ವಿವಾದ ಏನಿದು?

    ''ಯಾವುದು ಅದು ಪ್ಯಾನ್‌ ಇಂಡಿಯಾ...? ಪ್ಯಾನ್ ಇಂಡಿಯಾ ಸಿನಿಮಾ ಬಂದು ನಮ್ಮನ್ನ ಉದ್ದಾರ ಮಾಡಲ್ಲ. ಪ್ಯಾನ್ ಇಂಡಿಯಾದಿಂದ ನಮ್ಮ‌ ಕನ್ನಡಿರಿಗೆ ಕೆಲಸ ಇಲ್ಲ..ಯಾರನ್ನೋ‌ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಸಿನಿಮಾ ಮಾಡೋ ಹಾಗಿದೆ. ಇದರಿಂದ ನಮ್ಮ‌ ನೆಲದ ಜನರಿಗೆ ಕೆಲಸ ಇಲ್ಲದಂತಾಗಿದೆ'' ಎಂದು ನಟ ಜಗ್ಗೇಶ್ ಕಿಡಿ ಕಾರಿದ್ದರು. ಈ ಹೇಳಿಕೆಯನ್ನು ಯಶ್ ಅವರನ್ನು ಉದ್ದೇಶಿಸಿ ಹೇಳಿದ್ದಾರೆ ಎಂದು ಕೆಲವರು ನವರಸ ನಾಯಕನ ವಿರುದ್ಧ ತಿರುಗಿಬಿದ್ದಿದ್ದರು. ಆದ್ರೆ, ಜಗ್ಗೇಶ್ ಅವರು ಹೀಗೆ ಹೇಳಿದ್ದು ಕನ್ನಡ ಚಿತ್ರರಂಗದ ಅಭಿವೃದ್ದಿಯನ್ನು ಗಮನದಲ್ಲಿಟ್ಟುಕೊಂಡೇ ಹೊರತು ಯಶ್ ಅವರನ್ನು ಟಾರ್ಗೆಟ್ ಮಾಡಿಲ್ಲ ಎನ್ನುವುದನ್ನು ಅರಿಯಬೇಕು. ಏಕಂದ್ರೆ, ಈ ಹಿಂದೆ ಯಶ್ ಅವರ ಬಗ್ಗೆ ಹಾಗೂ ಕೆಜಿಎಫ್ ಸಿನಿಮಾ ಬಗ್ಗೆ ಜಗ್ಗೇಶ್ ಬಹಿರಂಗವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.

    'ಕೆಜಿಎಫ್' ನೋಡಿ ಖುಷ್ ಆದೆ

    'ಕೆಜಿಎಫ್' ನೋಡಿ ಖುಷ್ ಆದೆ

    ಮಾರುವೇಷದಲ್ಲಿ ಕೆಜಿಎಫ್ ಸಿನಿಮಾ ನೋಡಿದ್ದ ಜಗ್ಗೇಶ್ ನಂತರ ಟ್ವಿಟ್ಟರ್‌ನಲ್ಲಿ ಸಂತಸ ಹಂಚಿಕೊಂಡಿದ್ದರು. ''2 ಅಕ್ಷರದ ನಟ 3 ಅಕ್ಷರದ ಮನಗಳ 2 ಅಕ್ಷರದಿಂದ ಕಲಾಸೇವೆಯಲ್ಲಿ ಸಾರ್ಥಕ ಸಾಧನೆ ಮಾಡಿಬಿಟ್ಟ hats off dear.. ಯಶ್ ಕನ್ನಡ ಮನಗಳ ಖುಷಿ ಪಡಿಸಿದ ನಿರ್ದೇಶಕ ನೀಲ್ ನೀನು ಅಸಮಾನ್ಯ ಪ್ರತಿಭೆ. ಕನ್ನಡವೆಂದರೆ ಇದ್ದ ತಾತ್ಸಾರ ಮನಸ್ಥಿತಿ ಬದಲಾಗುವಂತೆ ಮಾಡಿಬಿಟ್ಟಿರಿ. ಹೊಂಬಾಳೆ ಫಿಲ್ಮ್ಸ್ ನಿಮ್ಮ ಎದೆಗಾರಿಕೆಗೆ ನನ್ನ ಸಲಾಂ.. 'ಕೆಜಿಎಫ್' ನೋಡಿ ಖುಷ್ ಆದೆ.'' - ಜಗ್ಗೇಶ್, ನಟ

    ''ಕೆ.ಜಿ.ಎಫ್ ಫ್ಲಾಪ್ ಆಗುತ್ತೆ'' ಅಂದೋರಿಗೆ ಮಾತಲ್ಲೇ ಬಿಸಿ ಮುಟ್ಟಿಸಿದ ನಟ ಜಗ್ಗೇಶ್.!''ಕೆ.ಜಿ.ಎಫ್ ಫ್ಲಾಪ್ ಆಗುತ್ತೆ'' ಅಂದೋರಿಗೆ ಮಾತಲ್ಲೇ ಬಿಸಿ ಮುಟ್ಟಿಸಿದ ನಟ ಜಗ್ಗೇಶ್.!

    English summary
    Pan india controversy: Kannada actor Jaggesh tweet about Rocking Star Yash.
    Thursday, December 3, 2020, 15:44
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X