Don't Miss!
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಅಪಘಾತದ ಬಗ್ಗೆ ಜಗ್ಗೇಶ್ ಟ್ವೀಟ್
Recommended Video
ಸೋಮವಾರ ಬೆಳಗ್ಗೆಯೇ ಎಲ್ಲರೂ ಆತಂಕ ಪಡುವ ಸುದ್ದಿ ಎದುರಾಗಿದೆ. ನಟ ದರ್ಶನ್ ಚಲಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತವಾಗಿದ್ದು, ಅಭಿಮಾನಿಗಳಲ್ಲಿ ಭಯದ ವಾತವರಣ ಸೃಷ್ಟಿಯಾಗಿದೆ.
ಮೈಸೂರಿನಲ್ಲಿ ಕಾರು ಅಪಘಾತ, 'ದಾಸ' ದರ್ಶನ್ ಗೆ ಕೈ ಮುರಿತ
ಈ ಘಟನೆಯ ಬಗ್ಗೆ ಈಗ ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ''ಕಲಾ ಬಂಧು ದರ್ಶನ್ ಗೆ ಅಪಘಾತವಾದ ಸುದ್ದಿ ಕೇಳಿ ದಿಘ್ಬ್ರಾಂತನಾದೆ!!. ಕೊಟ್ಯಾಂತರ ಕನ್ನಡದ ಆತ್ಮಗಳು ಹಾಗೂ ಅಮ್ಮನ ಆಶೀರ್ವಾದ ದರ್ಶನ್ ಅನ್ನು ಕಾಪಾಡಿದೆ. ಕ್ಷೇಮವಾಗಿದ್ದಾರೆ ರಾಯರದಯೇ.. ಯಾರ ಕಣ್ಣು ತಾಕದೆ ಸುಖವಾಗಿ ಬಾಳಿ.. ಶುಭಹಾರೈಕೆ.'' ಎಂದು ಜಗ್ಗೇಶ್ ಬರೆದುಕೊಂಡಿದ್ದಾರೆ.
ಕಲಾಬಂಧು #ದರ್ಶನ ಗೆ ಅಪಘಾತವಾದ
— ನವರಸನಾಯಕ ಜಗ್ಗೇಶ್ (@Jaggesh2) September 24, 2018
ಸುಧ್ಧಿಕೇಳಿ ದಿಘ್ಬ್ರಾಂತನಾದೆ!!
ಕೊಟ್ಯಾಂತರ ಕನ್ನಡದ ಆತ್ಮಗಳು ಹಾಗು ಅಮ್ಮನ ಆಶೀರ್ವಾದ ದರ್ಶನನ್ನು ಕಾಪಾಡಿದೆ. ಕ್ಷೇಮವಾಗಿದ್ದಾರೆ ರಾಯರದಯೇ..
ಯಾರಕಣ್ಣು ತಾಕದೆ ಸುಖವಾಗಿ ಬಾಳಿ..
ಶುಭಹಾರೈಕೆ..
ಈಗಾಗಲೇ ನಟ ವಿನೋದ್ ಪ್ರಭಾಕರ್ ಕೂಡ ದರ್ಶನ್ ಆರೋಗ್ಯವಾದ ಬಗ್ಗೆ ಮಾತನಾಡಿದ್ದಾರೆ. ''ಇಂದು ಬೆಳಗ್ಗೆಯೇ ನಾನು ಶಾಕಿಂಗ್ ಸುದ್ದಿ ಕೇಳಿ ಬಿಟ್ಟೆ. ನಮ್ಮ ಫ್ರೆಂಡ್ ಒಬ್ಬರು ಫೋನ್ ಮಾಡಿ ದರ್ಶನ್ ಗೆ ಅಪಘಾತವಾಗಿದೆ ಎಂಬ ವಿಷಯವನ್ನು ತಿಳಿಸಿದರು. ನನಗೆ ಆ ವಿಷಯ ಕೇಳಿದಾಗ ಆತಂಕವಾಯ್ತು. ಅವಘಾತದಲ್ಲಿ ದರ್ಶನ್ ಕೈಗೆ ಪೆಟ್ಟಾಗಿದೆ.'' ಎಂದು ವಿನೋದ್ ಪ್ರಭಾಕರ್ ಘಟನೆಯ ಬಗ್ಗೆ ಹೇಳಿಕೆ ನೀಡಿದ್ದಾರೆ.
ದರ್ಶನ್ ಸ್ಥಿತಿ ಹೇಗಿದೆ? ವಿನೋದ್ ಪ್ರಭಾಕರ್ ನೀಡಿದ ಮಾಹಿತಿ
ಅಂದಹಾಗೆ, ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ಸಮಯದಲ್ಲಿ ಅವಘಾತವಾಗಿದೆ. ನಟ ದರ್ಶನ್ ಜೊತೆಗೆ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಸಹ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.