Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯ ಚಕ್ರವರ್ತಿಯ ಸ್ಮಾರಕದ ನಿರ್ಮಾಣದ ಬಗ್ಗೆ ಮಾತು ಕೊಟ್ಟ ಜಗ್ಗೇಶ್
ಕನ್ನಡ ಚಿತ್ರರಂಗದ ಹಾಸ್ಯ ಚಕ್ರವರ್ತಿ ನರಸಿಂಹರಾಜು ಸ್ಮಾರಕದ ಬಗ್ಗೆ ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
''ಜಗ್ಗೇಶ್, ಕರ್ನಾಟಕದ ಜನರ ಹೃದಯ ಗೆದ್ದ ಹಾಸ್ಯ ನಟ ದಿ.ನರಸಿಂಹರಾಜು ಅವರ ಹೆಸರಲ್ಲಿ ಅವರ ನೆನಪು ಉಳಿಸಲು ತಿಪಟೂರಿನಲ್ಲಿ ಸ್ಮಾರಕ ಮಾಡಲಾಗುವುದು ಎಂದು ಒಂದು ಕಾರ್ಯಕ್ರಮದಲ್ಲಿ ಅವರ ಶ್ರೀಮತಿಯವರಿಗೆ ಆಶ್ವಾಸನೆ ನೀಡಿದ್ದ ನೆನಪು. ಅದೇನಾದರೂ ಕಾರ್ಯಗತ ಆಗ್ತಿದೆಯಾ, ಮಾನ್ಯ ಯಡಿಯೂರಪ್ಪರವರು ಮನಸ್ಸು ಮಾಡಿದ್ದಾರಾ?'' ಎಂದು ಜಗ್ಗೇಶ್ ಗೆ ಟ್ವಿಟ್ಟರ್ ನಲ್ಲಿ ಪ್ರಶ್ನೆ ಬಂತು.
'ಅನ್ನ ಕಿತ್ತುತಿನ್ನೋ ರಣಹದ್ದು ಬಂದರೂ ನಗುವಿನಲ್ಲಿ ನೋಡುವ ಬಂಗಾರದ ಹೃದಯ': ರಕ್ಷಿತ್ ಬಗ್ಗೆ ಜಗ್ಗೇಶ್ ಮಾತು
ಇದಕ್ಕೆ ಪ್ರತಿಕ್ರಿಯೆ ನೀಡಿದ ಜಗ್ಗೇಶ್ ''ಖಂಡಿತ.. ನಾನು ಹಾಗೂ ಸನ್ಮಾನ್ಯ ಶಾಸಕ ಮಿತ್ರ ನಾಗೇಶ್ ರವರು ಆ ಕಾರ್ಯದ ಬಗ್ಗೆ ವಿಶೇಷ ಆಸಕ್ತಿವಹಿಸಿರುವೆವು. ಅದರ ಬಗ್ಗೆ ಸಂಪೂರ್ಣ ಮಾಹಿತಿ ಶ್ರೀಮತಿ ನರಸಿಂಹರಾಜು ರವರ ಮಡದಿಗೆ ಕಳೆದ ವಾರ ಮಾಹಿತಿ ನೀಡಿರುವೆ. ನಗಿಸಿದ ದೇವರಿಗೆ ಕಂಡಿತ ನೆನಪಿನ ಸ್ಮಾರಕ ಆಗುತ್ತದೆ. ಧನ್ಯವಾದಗಳು'' ಎಂದಿದ್ದಾರೆ.
ನರಸಿಂಹರಾಜು ಹುಟ್ಟೂರು ತಿಪಟೂರಿನಲ್ಲಿ ಅವರ ಸ್ಮಾರಕ ಆಗಬೇಕು ಎನ್ನುವ ಮನವಿಗೆ ಜಗ್ಗೇಶ್ ಸ್ಪಂದಿಸಿದ್ದು, ಅವರ ಕಾರ್ಯ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಕಂಡಿತ..ನಾನು ಹಾಗು ಸನ್ಮಾನ್ಯ ಶಾಸಕ ಮಿತ್ರ ನಾಗೇಶ್ ರವರು ಆ ಕಾರ್ಯದ ಬಗ್ಗೆ
— ನವರಸನಾಯಕ ಜಗ್ಗೇಶ್ (@Jaggesh2) January 29, 2020
ವಿಶೇಷ ಆಸಕ್ತಿವಹಿಸಿರುವೆವು..
ಅದರ ಬಗ್ಗೆ ಸಂಪೂರ್ಣ ಮಾಹಿತಿ ಶ್ರೀಮತಿ
ನರಸಿಂಹರಾಜು ರವರ ಮಡದಿಗೆ ಕಳೆದವಾರ ಮಾಹಿತಿ ನೀಡಿರುವೆ..
ನಗಿಸಿದ ದೇವರಿಗೆ ಕಂಡಿತ ನೆನಪಿನ ಸ್ಮಾರಕ ಆಗುತ್ತದೆ...ಧನ್ಯವಾದಗಳು https://t.co/4wKepS3hEm
ನರಸಿಂಹ ರಾಜು ಕನ್ನಡ ಚಿತ್ರರಂಗ ಕಂಡ ಅಪರೂಪದ ಕಲಾವಿದ. 250ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೇವಲ 55 ವರ್ಷಕ್ಕೆ ನರಸಿಂಹರಾಜು ವಿಧಿವಶರಾಗಿದ್ದರು.