Don't Miss!
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾಷೆಗಾಗಿ ಸ್ವಾಭಿಮಾನವಿಲ್ಲದ ಜನ್ಮ ಶವಕ್ಕೆ ಸಮಾನ: ಜಗನ್ ಸರ್ಕಾರದ ವಿರುದ್ಧ ಜಗ್ಗೇಶ್ ಬೇಸರ
Recommended Video
ಕನ್ನಡ ನಾಡು-ನುಡಿ ವಿಚಾರದಲ್ಲಿ ಸದಾ ಮುಂದೆ ನಿಲ್ಲು ನವರಸ ನಾಯಕ ಜಗ್ಗೇಶ್, ಕನ್ನಡ ಶಾಲೆಗಳ ವಿಚಾರದಲ್ಲಿ ಆಂಧ್ರ ಪ್ರದೇಶ ಸರ್ಕಾರ ಕೈಗೊಂಡಿರುವ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರ ಪ್ರದೇಶ ಸರ್ಕಾರ, ಆಂಧ್ರದಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲು ತೀರ್ಮಾನಿಸಿದೆಯಂತೆ. ಈ ಕುರಿತು ಶಾಲೆಗಳಿಗೆ ಅಲ್ಲಿನ ಸರ್ಕಾರ ನೋಟೀಸ್ ಕೂಡ ನೀಡಿದೆಯಂತೆ.
'ನಿಮ್ಮ ಪ್ರತಿಭೆಗೆ ಯಾಕಿಲ್ಲ ರಾಜ್ಯ ಪ್ರಶಸ್ತಿ'? ಅಭಿಮಾನಿಗೆ ಜಗ್ಗೇಶ್ ಉತ್ತರಿಸಿದ್ದೇನು?
ಗಡಿಭಾಗದಲ್ಲಿರುವ ಶಾಲೆಗಳು ತೆಲುಗು ಭಾಷೆ ಅಥವಾ ಇಂಗ್ಲಿಷ್ ಮಾಧ್ಯವಾಗಬೇಕೆಂದು ತಿಳಿಸಿದೆಯಂತೆ. ಆಂಧ್ರ ಸರ್ಕಾರದ ಈ ಆದೇಶ ತೆಲುಗು ರಾಜ್ಯಗಳಲ್ಲಿರುವ ಕನ್ನಡಿಗರಿಗೆ ಮತ್ತು ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಆಂತಕ ಸೃಷ್ಟಿಯಾಗಿದೆ.
ಈ ಸುದ್ದಿ ತಿಳಿದ ಬಳಿಕ ನಟ ಜಗ್ಗೇಶ್ ತಮ್ಮ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದು, ''ಇದು ಅನ್ಯರಾಜ್ಯದಲ್ಲಿ ಕನ್ನಡದ ಪರಿಸ್ಥಿತಿ! ನಮ್ಮ ರಾಜ್ಯದಲ್ಲಿ ವಿಶಾಲ ಹೃದಯವಂತೆ! ಎಂಥ ದೌರ್ಭಾಗ್ಯ! ಭಾಷೆಗಾಗಿ ಸ್ವಾಭಿಮಾನವಿಲ್ಲದ ಜನ್ಮ ಶವಕ್ಕೆ ಸಮಾನ! ಕನ್ನಡ ನೆಲದ ಬಂಧುಗಳೆ ನಮ್ಮ ಆಧ್ಯತೆ ಇರಲಿ ಮೊದಲು ನಮ್ಮ ಭಾಷೆಗೆ ಇನ್ನು ಮುಂದಾದರು! "ಕನ್ನಡಕ್ಕೆ ಕೈಯತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ" ಎಂದಿದ್ದಾರೆ.
'ಅನ್ನ ಕಿತ್ತುತಿನ್ನೋ ರಣಹದ್ದು ಬಂದರೂ ನಗುವಿನಲ್ಲಿ ನೋಡುವ ಬಂಗಾರದ ಹೃದಯ': ರಕ್ಷಿತ್ ಬಗ್ಗೆ ಜಗ್ಗೇಶ್ ಮಾತು
ಆಂಧ್ರ ಜೊತೆ ಮಾತುಕತೆ ಮಾಡಿ, ಕನ್ನಡ ಶಾಲೆಗಳನ್ನು ಉಳಿಸಬೇಕಾದ ಒತ್ತಡ ರಾಜ್ಯ ಸರ್ಕಾರದ ಮೇಲಿದೆ. ಆದರೆ, ಜಗನ್ ಮೋಹನ್ ರೆಡ್ಡಿ ಸರ್ಕಾರದ ಈ ನಿರ್ಧಾರ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳುತ್ತೆ ಎಂಬ ಪ್ರಶ್ನೆಯಾಗಿ ಉಳಿದಿದೆ.