Don't Miss!
- News Lok Sabha Election 2024: ಟಿಕೆಟ್ ಹಂಚಿಕೆಯ ಬಳಿಕ ಬಿಜೆಪಿಯ ಮುಂದೆ ಹೊಸ-ಹೊಸ ಸವಾಲುಗಳು
- Automobiles ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಾವ ನಾಡಿನಲ್ಲಿ ಧ್ವಜ ಹಾರಿಸಿ ಗೆದ್ದರು ಕನ್ನಡದ ಸಂಜಾತನಲ್ಲವೇ; ರಜನಿಕಾಂತ್ ಗೆ ಜಗ್ಗೇಶ್ ವಿಶ್
ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 70ನೇ ವಸಂತಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ಕೋಟ್ಯಾಂತರ ಅಭಿಮಾನಿಗಳ ಜೊತೆಗೆ ಚಿತ್ರರಂಗದ ಮತ್ತು ರಾಜಕೀಯ ರಂಗದ ಗಣ್ಯರು ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಸೌತ್ ಯಿಂದ ನಾರ್ಥ್ ವರೆಗಿನ ಅಭಿಮಾನಿಗಳು ಶುಭಕೋರಿ ಪ್ರೀತಿಯ ಸಂದೇಶ ರವಾನಿಸುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಹ ರಜನಿಕಾಂತ್ ಗೆ ವಿಶ್ ಮಾಡಿದ್ದಾರೆ. ಸೂಪರ್ ಸ್ಟಾರ್ ಹುಟ್ಟುಹಬ್ಬಕ್ಕೆ ಸ್ಯಾಂಡಲ್ ವುಡ್ ನಿಂದಲೂ ಶುಭಾಶಯಗಳು ರವಾನೆಯುತ್ತಿವೆ. ಹೌದು, ನಟ ಜಗ್ಗೇಶ್, ರಜನಿಕಾಂತ್ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದ ಮೂಲಕ ವಿಶ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸೂಪರ್ ಸ್ಟಾರ್; ಸಹೋದರನನ್ನು ಭೇಟಿಯಾಗಿ ಆಶೀರ್ವಾದ ಪಡೆದ ರಜನಿಕಾಂತ್
ಸೂಪರ್ ಸ್ಟಾರ್ ಜೊತೆ ಕುಳಿತಿರುವ ಅಪರೂಪದ ಫೋಟೋ ಶೇರ್ ಮಾಡುವ ಮೂಲಕ ರಜನಿಕಾಂತ್ ಗೆ ಪ್ರೀತಿಯ ಸಂದೇಶ ರವಾನಿಸಿದ್ದಾರೆ.
'ಯಾವ ನಾಡಿನಲ್ಲಿ ಧ್ವಜ ಹಾರಿಸಿ ಗೆದ್ದರು ನಮ್ಮ ಕನ್ನಡ ನೆಲದ ಸಂಜಾತನಲ್ಲವೆ. 1987ರಿಂದ ಇವರ ಸಾಂಗತ್ಯ ಆತ್ಮೀಯತೆ ಪಡೆದವ ನಾನು ಎಂಬ ಹೆಮ್ಮೆಯಿದೆ. ಆತ್ಮೀಯ ಹೃದಯಕ್ಕೆ ಹುಟ್ಟುಹಬ್ಬದ ಶುಭಾಶಯ' ಎಂದು ಟ್ವೀಟ್ ಮಾಡಿದ್ದಾರೆ.
ಹುಟ್ಟುಹಬ್ಬದ ಪ್ರಯುಕ್ತ ಸೂಪರ್ ಸ್ಟಾರ್ ಚೆನ್ನೈ ಮನೆಯ ಮುಂದೆ ಅಭಿಮಾನಿಗಳು ಬಂದು ಜಮಾಯಿಸಿದ್ದಾರೆ. ಅಂದಹಾಗೆ ರಜನಿಕಾಂತ್ ಸದ್ಯ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ರಾಜಕೀಯ ಪ್ರವೇಶದ ಬಗ್ಗೆ ಖಚಿತಪಡಿಸಿದ್ದು, ಇದೇ ತಿಂಗಳು 31ರಂದು ಅಧಿಕೃತವಾಗಿ ತಮ್ಮ ರಾಜಕೀಯ ಪಕ್ಷ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
Recommended Video
ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸೂಪರ್ ಸ್ಟಾರ್ ಪಕ್ಷ ಸ್ಪರ್ಧಿಸಲಿದೆ. ಇತ್ತೀಚಿಗಷ್ಟೆ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿದ್ದರು. ರಾಜಕೀಯ ಪಕ್ಷ ಘೋಷಣೆ ಹಿನ್ನಲೆ ಸೂಪರ್ ಸ್ಟಾರ್ ಕುಟುಂಬದವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ರಜನಿಕಾಂತ್ ಬೆಂಗಳೂರು ಭೇಟಿಯ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.