Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅವನಿಗಾಗಿ ಗೆಲ್ಲಲೆ ಬೇಕು ಒಂದು ದಿನ ಎಂಬ ಛಲ ಇತ್ತು': ಮಗನಿಗೆ ವಿಶ್ ಮಾಡಿದ ಜಗ್ಗೇಶ್
ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಗನ ಬರ್ತಡೇಗೆ ಜಗ್ಗೇಶ್ ಅವರು ಟ್ವಿಟ್ಟರ್ ಮೂಲಕ ಶುಭಕೋರಿದ್ದಾರೆ.
ಗುರುರಾಜ್ ಅವರ ಸಣ್ಣ ವಯಸ್ಸಿನ ಫೋಟೋ ಹಂಚಿಕೊಂಡಿರುವ ಜಗ್ಗೇಶ್ ''ಅವನಿಗಾಗಿ ಗೆಲ್ಲಲೆ ಬೇಕು ಒಂದುದಿನ ಎಂಬ ಛಲ ಮೂಡಿತು ಅವನು ಬೆಳೆದಂತೆ ನಾನು ಬೆಳೆದೆ'' ಎಂದು ಹಳೆಯ ನೆನಪು ಮೆಲುಕು ಹಾಕಿದ್ದಾರೆ.
ವರ್ಷದ ಮೊದಲ ದಿನ ರಾಯರ ಮಠದಲ್ಲಿ ಕಳೆದ ನಟ ಜಗ್ಗೇಶ್
''5/1/1987...ಬದುಕು ಹೇಗೆ ನಿಭಾಯಿಸುವುದು ಎಂದು ಕೊರಗುತ್ತಿದ್ದ ದಿನಗಳು. ರಾಯರ ಪ್ರಸಾದ ಮಗ ಗುರುರಾಜನ ರೂಪದಲ್ಲಿ ಬಂತು. ಅವನಿಗಾಗಿ ಗೆಲ್ಲಲೆ ಬೇಕು ಒಂದುದಿನ ಎಂಬ ಛಲ ಮೂಡಿತು ಅವನು ಬೆಳೆದಂತೆ ನಾನು ಬೆಳೆದೆ. ಸಾತ್ವಿಕ ಸಂಭಾವಿತ ಮಗ ಗುರುರಾಜ ಹುಟ್ಟಿದದಿನ ಇಂದು. ಮನ ತುಂಬಿ ನನ್ನ ಶುಭ ಹಾರೈಕೆ ನೀವು ಹರಸಿ..ಧನ್ಯವಾದ'' ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಗುರುರಾಜ್ ಸಹ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಜಗ್ಗೇಶ್ ನಟನೆಯ 'ಬೇಡ ಕೃಷ್ಣ ರಂಗಿನಾಟ' ಚಿತ್ರದಲ್ಲಿ ನಟಿಸಿದ್ದ ಗುರುರಾಜ್, ಬಳಿಕ ಮೇಕಪ್ ಚಿತ್ರಕ್ಕೆ ಕಥೆ ಬರೆದಿದ್ದರು. ಕೋಮಲ್ ನಟನೆಯ ತಮಾಷೆಗಾಗಿ ಸಿನಿಮಾದಲ್ಲೂ ಒಂದು ಪಾತ್ರ ಮಾಡಿದ್ದರು.
2009ರಲ್ಲಿ ತೆರೆಕಂಡ 'ಗಿಲ್ಲಿ' ಚಿತ್ರದ ಮೂಲಕ ನಾಯಕನಟನಾಗಿ ಸಿನಿ ಇಂಡಸ್ಟ್ರಿ ಪ್ರವೇಶ ಮಾಡಿದ್ದರು. ತಮಿಳಿನ ಹಿಟ್ ಚಿತ್ರ '7ಜಿ ರೈನ್ಬೋ ಕಾಲೋನಿ' ರೀಮೇಕ್ ಇದಾಗಿದ್ದು, ಈ ಚಿತ್ರದಲ್ಲಿ ರಕುಲ್ ಪ್ರೀತ್ ಸಿಂಗ್ ನಾಯಕಿಯಾಗಿದ್ದರು.
ಜಗ್ಗೇಶ್ ಅವರ ಆಫೀಸ್ನಲ್ಲಿದೆ ದಿಗ್ಗಜ ನಟರೊಬ್ಬರ ಫೋಟೋ
ನಂತರ ಗುರು, ಸಂಕ್ರಾಂತಿ, ಪೈಪೋಟಿ, ಮಾಸ್ ಲೀಡರ್ ಹಾಗೂ ವಿಷ್ಣು ಸರ್ಕಲ್ ಚಿತ್ರಗಳಲ್ಲಿ ಗುರುರಾಜ್ ನಟಿಸಿದ್ದಾರೆ. ವಿದೇಶಿ ಯುವತಿಯನ್ನು ಪ್ರೀತಿಸಿ ಮದುವೆಯಾದ ಗುರುರಾಜ್ಗೆ ಅರ್ಜುನ್ ಎಂಬ ಗಂಡು ಮಗು ಇದೆ.