Just In
Don't Miss!
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Automobiles
ಮಧ್ಯಮ ಗಾತ್ರದ ಕಾರುಗಳಿಗೆ ಹೊಸ ಡೀಸೆಲ್ ಎಂಜಿನ್ ಪರಿಚಯಿಸಲು ಸಜ್ಜಾದ ಮಾರುತಿ ಸುಜುಕಿ
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಬಂಜೆತನಕ್ಕೆ ಕಾರಣವಾಗುವ ಥೈರಾಯ್ಡ್ ಲಕ್ಷಣಗಳು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಜೈರಾಜ್ ಅವಿರೋಧ ಆಯ್ಕೆ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 2019 - 2020ರ ಸಾಲಿನ ಚುನಾವಣೆ ದಿನಾಂಕ 29 ಜೂನ್ ರಂದು ನಡೆಯಲಿದೆ. ಇದಕ್ಕೆ ಮೊದಲೇ ವಾಣಿಜ್ಯ ಮಂಡಳಿಯ ನೂತನ ಅಧ್ಯಕ್ಷರ ಆಯ್ಕೆ ಆಗಿದೆ. ಡಿ ಆರ್ ಜೈರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿದ್ದಾರೆ.
ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನರಸಿಂಹಲು ಹಾಗೂ ಸುಂದರ್ ರಾಜ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಆದರೆ, ಅವರೆಲ್ಲ ನಾಮಪತ್ರ ಹಿಂಪಡೆದ ಕಾರಣ ಜೈರಾಜ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜೈರಾಜ್ ಗುಬ್ಬಿಯ ಶ್ರೀ ಚನ್ನಬಸವೇಶ್ವರ ಟಾಕೀಸ್ ನ ಮಾಲೀಕರಾಗಿದ್ದಾರೆ.
ಈ ಬಾರಿ ಪ್ರದರ್ಶಕರ ವಲಯಕ್ಕೆ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ವೆಂಕಟರಮಣ ಕೂಡ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಎ ಗಣೇಶ ವಿತರಕ ವಲಯದಿಂದ, ಪ್ರದರ್ಶಕ ವಲಯದ ಕಾರ್ಯದರ್ಶಿಯಾಗಿ ನರಸಿಂಹಲು ಆಯ್ಕೆ ಆಗಿದ್ದಾರೆ.
ವಾಣಿಜ್ಯ ಮಂಡಳಿಯ ನಿರ್ಮಾಪಕ ವಲಯ ಉಪಾಧ್ಯಕ್ಷ ಸ್ಥಾನಕ್ಕೆ ಉಮೇಶ್ ಬಣಕರ್. ದಿನೇಶ್ ಗಾಂದಿ ಹಾಗೂ ಪ್ರಮಿಳಾ ಜೋಷಾಯಿ ಸ್ಪರ್ಧೆಯಲ್ಲಿದ್ದಾರೆ. ವಾಣಿಜ್ಯ ಮಂಡಳಿಯ ನಿರ್ಮಾಪಕ ವಲಯದ ಚುನಾವಣೆ ಜೂನ್ 29 ರಂದು ನಡೆಯಲಿದೆ.
ಚಿನ್ನೆಗೌಡ ಅವರ ಬಳಿಕ ಡಿ ಆರ್ ಜೈರಾಜ್ ಚಲನಚಿತ್ರ ಕರ್ನಾಟಕ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿದ್ದಾರೆ.