Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೇಮ್ಸ್ ನಿರ್ಮಾಪಕ ಕಿಶೋರ್ ಪಾತಿಕೊಂಡ ಆರೋಗ್ಯದಲ್ಲಿ ಚೇತರಿಕೆ!
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೊನೆಯ ಸಿನಿಮಾ ಜೇಮ್ಸ್ ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಕೋಮಾದಲ್ಲಿದ್ದಾರೆ. ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು, ಇಂದು ಅವರು ತುಸು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಕಿಶೋರ್ ಪತ್ತಿಕೊಂಡ ಅವರನ್ನು ದಾಖಲಿಸಲಾಗಿತ್ತು. ಈಗ ಗುಡ್ ನ್ಯೂಸ್ ಸಿಕ್ಕಿದೆ. ಕಿಶೋರ್ ಪತ್ತಿಕೊಂಡ ಅವರಿಗೆ ಮೆದುಳಿನ ಆಪರೇಷನ್ ಆಗಿದ್ದು, ಕಿಶೋರ್ ಔಟ್ ಆಫ್ ಡೇಂಜರ್ ಎಂದು ಗೊತ್ತಾಗಿದೆ.
ಪುನೀತ್ ರಾಜ್ಕುಮಾರ್ಗೆ ಆ ಒಂದು ಮಾತು ಹೇಳಲೇ ಬೇಕಿತ್ತಂತೆ ಸಾಯಿ ಪಲ್ಲವಿ!
ಸದ್ಯ ಕಿಶೋರ್ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಗಂಭೀರ ಸಮಸ್ಯೆಯಿಂದ ಪಾರಾಗಿದ್ದಾರೆ. ಇನ್ನು ಹೆಚ್ಚಿನ ಆತಂಕ ಪಡಬೇಕಾಗಿಲ್ಲ. ಶಸ್ತ್ರಚಿಕಿತ್ಸೆಯ ಬಳಿಕ ಕಿಶೋರ್ ಪತ್ತಿಕೊಂಡ ಚೇತರಿಸಿಕೊಳ್ಳುತ್ತಿದ್ದಾರೆ.
ಕಿಶೋರ್ ಅವರು ಮೂಲತಃ ಬಳ್ಳಾರಿಯ ಹೊಸಪೇಟೆಯವರು. ಪುನೀತ್ ಎಂದರೆ ಅಪಾರ ಅಭಿಮಾನ ಹೊಂದಿದ್ದರು. ಹೊಸಪೇಟೆಯಲ್ಲಿ ಥಿಯೇಟರ್ ಮಾಲೀಕರಾಗಿದ್ದ ಕಿಶೋರ್ ಅವರಿಗೆ ಅಪ್ಪುಗಾಗಿ ಸಿನಿಮಾ ಮಾಡುವ ಕನಸಿತ್ತು. ಅದನ್ನು 'ಜೇಮ್ಸ್' ಚಿತ್ರದ ಮೂಲಕ ಈಡೇರಿಸಿಕೊಂಡರು.
ಪುನೀತ್ ಅಗಲಿಕೆ ನೋವಿನಲ್ಲಿಯೇ ಸಿನಿಮಾ ಹಿಟ್ ಆಗಿತ್ತು. 100 ಕೋಟಿ ಕ್ಲಬ್ ಸೇರಿತ್ತು. ಅದಕ್ಕೂ ಮೊದಲು ಕಿಶೋರ್ ಪತ್ತಿಕೊಂಡ ಅವರ ಕುಟುಂಬ ಶಿವಣ್ಣನವರ 'ಸಂತೆಯಲ್ಲಿ ನಿಂತ ಕಬೀರ' ಚಿತ್ರ ನಿರ್ಮಾಣ ಮಾಡಿತ್ತು.
ಇದಾದ ನಂತರ ರಾಮ್ ಕುಮಾರ್ ಪುತ್ರ ಧಿರೇನ್ ಅವರಿಗಾಗಿ ಹೊಸ ಸಿನಿಮಾ ಘೋಷಣೆ ಮಾಡಿದ್ದರು ಕಿಶೋರ್ ಪತ್ತಿಕೊಂಡ. ಇನ್ನೂ ಹಲವು ಸಿನಿಮಾಗಳನ್ನು ಮಾಡುವ ಯೋಜನೆಯಲ್ಲಿ ಇದ್ದಾರೆ ಕಿಶೋರ್ ಪಾತಿಕೊಂಡ. ಅವರು ಬೇಗಗುಣ ಮುಖರಾಗಿ ಬರಲಿ ಎಂದು ಅಭಿಮಾನಿಗಳು, ಚಿತ್ರರಂಗ ಪ್ರಾರ್ಥಿಸುತ್ತಿದೆ.