Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರುನಾಡ ಚಕ್ರವರ್ತಿ ಶಿವಣ್ಣ ಯಶೋಗಾಥೆ ಬಗ್ಗೆ ಬರಲಿದೆ ಪುಸ್ತಕ
ಡಾ.ಶಿವರಾಜ್ ಕುಮಾರ್ ಅವರ ಜೀವನ ಚರಿತ್ರೆ ಸಾರುವ ಪುಸ್ತಕವನ್ನು ಪತ್ರಕರ್ತ ಮತ್ತು ಛಾಯಾಗ್ರಾಹಕರಾದ ಜನಾರ್ಧನ ರಾವ್ ಸಾಳಂಕೆ ಬರೆದಿದ್ದಾರೆ. ಪುಸ್ತಕದ ಹೆಸರು 'ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಯಶೋಗಾಥೆ'.
ಬಹಳಷ್ಟು ನಟ, ನಟಿ, ನಿರ್ದೇಶಕ, ನಿರ್ಮಾಪಕರು ಮತ್ತು ಅಭಿಮಾನಿಗಳನ್ನು ಲೇಖಕ ಜನಾರ್ಧನ ರಾವ್ ಸಾಳಂಕೆ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬಹುಶಃ ಇದು ಶಿವಣ್ಣ ಅವರ ಬಗ್ಗೆ ಹೊರಬರುತ್ತಿರುವ ಪೂರ್ಣಪ್ರಮಾಣದ ಮೊದಲ ಪುಸ್ತಕ.
ಪ್ರಕಾಶಕರಾದ ಸುರೇಶ್ ಅವರು ಈ ಪುಸ್ತಕವನ್ನು ಶಿವಣ್ಣ ಅವರ ಹುಟ್ಟುಹಬ್ಬದ ಮುನ್ನ ಬಿಡುಗಡೆ ಮಾಡಲಿದ್ದಾರೆ. ಇದರಲ್ಲಿ ಶಿವಣ್ಣ ಅವರ ಬಹು ಅಪರೂಪದ ಫೋಟೋಗಳಿವೆ.
ಪುಸ್ತಕ ಬರೆಯುವ ಮುನ್ನ ಅಂದರೆ ಮೂರು ವರ್ಷಗಳ ಹಿಂದೆ ರಾಘವೇಂದ್ರ ರಾಜ್ ಕುಮಾರ್ ಅವರನ್ನು ವಜ್ರೇಶ್ವರಿ ಕಂಬೈನ್ಸ್ ಕಚೇರಿಯಲ್ಲಿ ಸಾಳಂಕೆ ಎರಡು ಬಾರಿ ಭೇಟಿ ಮಾಡಿ ಈ ವಿಷಯದ ಬಗ್ಗೆ ಚರ್ಚಿಸಿದ್ದರು. ಇದರಿಂದ ಖುಷಿಗೊಂಡ ರಾಘಣ್ಣ "ನಿಮಗೆ ದೇವರು ಒಳ್ಳೆಯದು ಮಾಡಲಿ. ನಾವು ಸಹ ಈ ಪುಸ್ತಕಕ್ಕಾಗಿ ಕಾಯುತ್ತೇವೆ" ಎಂದು ಹೇಳಿ ಹರಸಿದ್ದರು. ಶಿವಣ್ಣ ಅವರಿಗೂ ಈ ಪುಸ್ತಕದ ವಿಚಾರ ತಿಳಿದಿದೆ.
ಈಗಾಗಲೇ ಸಾಳಂಕೆ ಯವರು ಡಾ.ವಿಷ್ಣುವರ್ಧನ್ ಅವರ ಬಗ್ಗೆ 4 ಪುಸ್ತಕಗಳನ್ನು ಬರೆದಿದ್ದಾರೆ.