Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರುನಾಡ ಚಕ್ರವರ್ತಿ ಶಿವಣ್ಣ ಯಶೋಗಾಥೆ ಬಗ್ಗೆ ಬರಲಿದೆ ಪುಸ್ತಕ
ಡಾ.ಶಿವರಾಜ್ ಕುಮಾರ್ ಅವರ ಜೀವನ ಚರಿತ್ರೆ ಸಾರುವ ಪುಸ್ತಕವನ್ನು ಪತ್ರಕರ್ತ ಮತ್ತು ಛಾಯಾಗ್ರಾಹಕರಾದ ಜನಾರ್ಧನ ರಾವ್ ಸಾಳಂಕೆ ಬರೆದಿದ್ದಾರೆ. ಪುಸ್ತಕದ ಹೆಸರು 'ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಯಶೋಗಾಥೆ'.
ಬಹಳಷ್ಟು ನಟ, ನಟಿ, ನಿರ್ದೇಶಕ, ನಿರ್ಮಾಪಕರು ಮತ್ತು ಅಭಿಮಾನಿಗಳನ್ನು ಲೇಖಕ ಜನಾರ್ಧನ ರಾವ್ ಸಾಳಂಕೆ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಬಹುಶಃ ಇದು ಶಿವಣ್ಣ ಅವರ ಬಗ್ಗೆ ಹೊರಬರುತ್ತಿರುವ ಪೂರ್ಣಪ್ರಮಾಣದ ಮೊದಲ ಪುಸ್ತಕ.
ಪ್ರಕಾಶಕರಾದ ಸುರೇಶ್ ಅವರು ಈ ಪುಸ್ತಕವನ್ನು ಶಿವಣ್ಣ ಅವರ ಹುಟ್ಟುಹಬ್ಬದ ಮುನ್ನ ಬಿಡುಗಡೆ ಮಾಡಲಿದ್ದಾರೆ. ಇದರಲ್ಲಿ ಶಿವಣ್ಣ ಅವರ ಬಹು ಅಪರೂಪದ ಫೋಟೋಗಳಿವೆ.
ಪುಸ್ತಕ ಬರೆಯುವ ಮುನ್ನ ಅಂದರೆ ಮೂರು ವರ್ಷಗಳ ಹಿಂದೆ ರಾಘವೇಂದ್ರ ರಾಜ್ ಕುಮಾರ್ ಅವರನ್ನು ವಜ್ರೇಶ್ವರಿ ಕಂಬೈನ್ಸ್ ಕಚೇರಿಯಲ್ಲಿ ಸಾಳಂಕೆ ಎರಡು ಬಾರಿ ಭೇಟಿ ಮಾಡಿ ಈ ವಿಷಯದ ಬಗ್ಗೆ ಚರ್ಚಿಸಿದ್ದರು. ಇದರಿಂದ ಖುಷಿಗೊಂಡ ರಾಘಣ್ಣ "ನಿಮಗೆ ದೇವರು ಒಳ್ಳೆಯದು ಮಾಡಲಿ. ನಾವು ಸಹ ಈ ಪುಸ್ತಕಕ್ಕಾಗಿ ಕಾಯುತ್ತೇವೆ" ಎಂದು ಹೇಳಿ ಹರಸಿದ್ದರು. ಶಿವಣ್ಣ ಅವರಿಗೂ ಈ ಪುಸ್ತಕದ ವಿಚಾರ ತಿಳಿದಿದೆ.
ಈಗಾಗಲೇ ಸಾಳಂಕೆ ಯವರು ಡಾ.ವಿಷ್ಣುವರ್ಧನ್ ಅವರ ಬಗ್ಗೆ 4 ಪುಸ್ತಕಗಳನ್ನು ಬರೆದಿದ್ದಾರೆ.