Don't Miss!
- News 1951 ರಿಂದ 2019 : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಇಲ್ಲಿದೆ ವಿವರ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನಾರ್ಧನ ರೆಡ್ಡಿ ಪುತ್ರನ ಮೊದಲ ಸಿನಿಮಾಗೆ ಕೊನೆಗೂ ಸಿಕ್ಕಿತು ಟೈಟಲ್!
ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುತ್ತಿರೋದು ಗೊತ್ತಿರೋ ವಿಷಯವೇ. ಮೊದಲ ಸಿನಿಮಾ ಲಾಂಚ್ ಅನ್ನೇ ಅದ್ಧೂರಿಯಾಗಿ ಮಾಡಲಾಗಿತ್ತು. ಕಿರೀಟಿ ಸಿನಿಮಾಗಾಗಿ ತಯಾರಿ ನಟಿಸಿದ ಝಲಕ್ ಅನ್ನೂ ರಿಲೀಸ್ ಮಾಡಲಾಗಿತ್ತು.
ಮೊದಲ ಸಿನಿಮಾದಲ್ಲಿಯೇ ನಾಲ್ಕು ಭಾಷೆಗಳಿಗೆ ಹೀರೊ ಆಗಿ ಎಂಟ್ರಿ ಕೊಡುತ್ತಿದ್ದಾರೆ. ಆಕ್ಷನ್, ಲವ್, ಸೆಂಟಿಮೆಂಟ್ ಎಲ್ಲದರಲ್ಲೂ ತರಬೇತಿ ಪಡೆದುಕೊಂಡೇ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸಿನಿಮಾ ಬಗ್ಗೆ ದುಪ್ಪಟ್ಟು ನಿರೀಕ್ಷೆಯಿದೆ.
ಕಿರೀಟಿ ರೆಡ್ಡಿ: ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ಸಾಹಸಕ್ಕೆ ಭೇಷ್ ಎಂದ ನೆಟ್ಟಿಗರು
ಏಕಕಾಲಕ್ಕೆ ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗಕ್ಕೆ ಕಿರೀಟಿ ಹೀರೊ ಆಗಿ ಎಂಟ್ರಿ ಕೊಡ್ತಿರೋ ಸಿನಿಮಾ ಟೈಟಲ್ ಮಾತ್ರ ರಹಸ್ಯವಾಗಿಯೇ ಇಡಲಾಗಿತ್ತು. ಆದ್ರೀಗ ಆ ಟೈಟಲ್ ಕೂಡ ರಿವೀಲ್ ಆಗಿದೆ. ಅದುವೇ 'ಜೂನಿಯರ್'. ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಅಭಿನಯದ ಮೊದಲ ಸಿನಿಮಾದ ಟೈಟಲ್ 'ಜೂನಿಯರ್' ಎಂದು ಇಡಲಾಗಿದೆ.
ಪುನೀತ್ ರಾಜ್ಕುಮಾರ್ ನಿರ್ಮಿಸಿದ್ದ 'ಮಯಾಬಜಾರ್' ಸಿನಿಮಾದ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. 'ಜೂನಿಯರ್' ಸಿನಿಮಾ ಸದ್ಯ ಬಿರುಸಿನಿಂದ ಚಿತ್ರೀಕರಣ ನಡೆಯುತ್ತಿದೆ. ಇಲ್ಲಿವರೆಗೂ ಕಿರೀಟಿ ಮೊದಲ ಸಿನಿಮಾದ ಟೈಟಲ್ ಅನ್ನುಚಿತ್ರತಂಡ ರಿವೀಲ್ ಮಾಡಿರಲಿಲ್ಲ. ಈಗ ಫೈನಲಿ ಸಿನಿಮಾ ಟೈಟಲ್ ರಿವೀಲ್ ಆಗಿದೆ.ಇಷ್ಟು ದಿನದ ರಹಸ್ಯವೇ ಇಟ್ಟ ಗುಟ್ಟನ್ನು ಬಿಟ್ಟು ಕೊಡಲಾಗಿದೆ.
ಜನಾರ್ಧನ ರೆಡ್ಡಿ ಮಗನಿಗೆ ರಾಜಮೌಳಿ, ರವಿಚಂದ್ರನ್, ಶಿವಣ್ಣ ಕೊಟ್ಟ ಸಲಹೆ ಏನು?
ಇಂದು( ಸೆಪ್ಟೆಂಬರ್ 29) ಜನಾರ್ಧನ ರೆಡ್ಡಿಯ ಪುತ್ರ ಕಿರೀಟಿ ಹುಟ್ಟುಹಬ್ಬ. ಈ ಕಾರಣಕ್ಕೆ ಚಿತ್ರತಂಡ ಕಿರೀಟಿ ಹುಟ್ಟುಹಬ್ಬಕ್ಕೆ ಟೈಟಲ್ ಅನ್ನು ರಿವೀಲ್ ಮಾಡಿದೆ. ತೆಲುಗಿನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ವಾರಾಹಿ ಇಂದು (ಸೆಪ್ಟೆಂಬರ್ 30) ಸಂಜೆ 6.39ಕ್ಕೆ ಟೈಟಲ್ ವಿಡಿಯೋವನ್ನು ಬಿಡುಗಡೆ ಮಾಡಲಿದೆ.
ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದೆ. ಇದು ಬಿಗ್ ಬಜೆಟ್ನಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾ. ಬಹುದೊಡ್ಡ ಹಾಗೂ ಸ್ಟಾರ್ ಕಾಸ್ಟ್ ಈ ಸಿನಿಮಾದಲ್ಲಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ಇನ್ನೂ ಹಲವು ಸ್ಟಾರ್ಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ತೆಲುಗಿನ ರಾಕ್ ಸ್ಟಾರ್ ಅಂತಲೇ ಖ್ಯಾತಿ ಗಳಿಸಿರೋ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಟ್ಯೂನ್ ಹಾಕುತ್ತಿದ್ದಾರೆ. 'ಬಾಹುಬಲಿ' ಸಿನಿಮಾದ ಕ್ಯಾಮರಾ ಮ್ಯಾನ್ ಕೆ ಸೆಂಥಿಲ್ ಕುಮಾರ್ ಈ ಸಿನಿಮಾದ ಛಾಯಾಗ್ರಾಹಕರು. ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಆಕ್ಷನ್ ಸೀಕ್ವೆನ್ಸ್ ಅನ್ನು ಕಂಪೋಸ್ ಮಾಡಲಿದ್ದಾರೆ.