Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಜಯನಗರ 4ನೇ ಬ್ಲಾಕ್' ಒಂದು ವಿಭಿನ್ನ ಕಿರುಚಿತ್ರ
ಇದೊಂದು ಕಿರು ಚಿತ್ರವಾದರೂ ಬದುಕಿಗೊಂದು ಕನ್ನಡ ಹಿಡಿಯುವ ಪ್ರಯತ್ನ. ಸ್ನೇಹಕ್ಕೆ ಯಾವ ವಯಸ್ಸಿನ ಅಂತಸ್ತಿನ ಅಂತರ ಇಲ್ಲ ಎಂದು ಸಾರುವ ಚಿತ್ರ. 'ಜಯನಗರ್ 4ನೇ ಬ್ಲಾಕ್' ಮೂರು ಜೀವಗಳ ಸುತ್ತ ನಡೆಯುವ ಘಟನೆ. ಕಳೆದ ವಾರ ರೇಣುಕಾಂಬ ಡಿಜಿಟಲ್ ಚಿತ್ರಮಂದಿರದಲ್ಲಿ ಮಾಧ್ಯಮಕ್ಕೆ ಪ್ರದರ್ಶನ ಮಾಡಲಾಗಿತ್ತು.
ರಾಷ್ಟ್ರ ಖ್ಯಾತಿ ನಿರ್ದೇಶಕ ಟಿ ಎಸ್ ನಾಗಾಭರಣ, ಕುಂಚ ಕಲಾವಿದ ಬಿ ಕೆ ಎಸ್ ವರ್ಮಾ, ಕಿರುತೆರೆ ನಿರ್ದೇಶಕ ಕಲಾಗಂಗೋತ್ರಿ ಮಂಜು, ಅಂತರಾಷ್ಟ್ರೀಯ ಖ್ಯಾತಿಯ ಕೃಪಾಕರ್ ಹಾಗೂ ಸೇನಾನಿ ಸಹ ಈ ಕಿರುಚಿತ್ರವನ್ನು ನೋಡಿ ಮೆಚ್ಚುಗೆ ತಿಳಿಸಿದರು.
ಬದುಕಿನ ಘಟನೆಗಳು ಈ ರೀತಿ ಕಿರು ಚಿತ್ರವಾಗುವುದು ವಿರಳ. ಇಲ್ಲಿ ಸೆರೆ ಹಿಡಿರುವ ವಿಚಾರಗಳು ಮನಸ್ಸಿಗೆ ಮುದ ನೀಡುತ್ತದೆ. ಸಿನಿಮಾವನ್ನು ಪೆನ್ನಿನ ಹಾಗೆ ಬಳಸಬೇಕು. ದೃಶ್ಯ ಮಾಧ್ಯಮ ಒಳ್ಳೆ ಸಂದೇಶವನ್ನು ಸಾರಬೇಕು ಎಂದು ಅಭಿಪ್ರಾಯ ಪಟ್ಟರು ಹಿರಿಯ ನಿರ್ದೇಶಕ ಟಿ ಎಸ್ ನಾಗಾಭರಣ.
ಕುಂಚ ಕಲಾವಿದ ಬಿ ಕೆ ಎಸ್ ವರ್ಮಾ 26 ನಿಮಿಷದಲ್ಲಿ ಎರಡು ಘಂಟೆಯಲ್ಲಿ ಹೇಳುವ ವಿಚಾರ ಇಲ್ಲಿ ಹೇಳಲಾಗಿದೆ. ಇದು ಪ್ರಶಂಸನನೀಯ ಎಂದರು. ಇದೊಂದು ಉತ್ತಮ ಪ್ರಯತ್ನ. ಇಂತಹ ಪ್ರತಿಭೆಗಳು ಬರಬೇಕು ಎಂದು ಅಂತರಾಷ್ಟ್ರೀಯ ವನ್ಯ ಮೃಗಗಳ ಚಿತ್ರ ನಿರ್ದೇಶಕ ಸೇನಾನಿ ಅಭಿಪ್ರಾಯ ಪಟ್ಟರು.
ಏನಿದು ಜಯನಗರ 4ನೇ ಬ್ಲಾಕ್? ನಾಯಕನಾಗಬೇಕಂಬ ಆಸೆಯೊಂದಿಗೆ ಬೆಂಗಳೂರಿಗೆ ಬಂದು ಅಲೆದು ಸಾಕಾಗಿ ಸಂಜೆಯ ಹೊತ್ತಿಗೆ ಜಯನಗರ 4ನೇ ಬ್ಲಾಕ್ ಬಂದು ಕೂರುತ್ತಾನೆ ಧನಂಜಯ್. ಅವರ ಸ್ನೇಹಿತರು ಹಿರಿಯರಾದ ವೆಂಕಿ, ಹೂ ಮಾರುವ ರಾಣಿ ನೀನು ಹೀರೋ ತರಹ ಎಂದು ಧನಂಜಯ್ ರನ್ನು ಗುರುತಿಸುವ ಸ್ನೇಹಿತರ ಸುತ್ತ ಈ ಕಿರುಚಿತ್ರ ಮಾಡಲಾಗಿದೆ. ಮನುಷ್ಯ ಸಂಬಂಧ ಜೊತೆಗೆ ಮಾನವೀಯ ಗುಣಗಳ ಮೌಲ್ಯವನ್ನು ಸಹ ಇಲ್ಲಿ ಹೇಳಲಾಗಿದೆ.
ಸತ್ಯ ಪ್ರಕಾಷ್ ಅವರ ನಿರ್ದೇಶನ, ಬಿ ಎಸ್ ಕೆಂಪರಾಜ್ ಅವರ ಸಂಕಲನ, ಲವಿತ್ ಅವರ ಛಾಯಾಗ್ರಹಣ, ಸ್ಟೀವ್ ಕೌಶಿಕ್ ಅವರ ಸಂಗೀತ, ಕಥೆ ಹಾಗೂ ಸಂಭಾಷಣೆ ಧನಂಜಯ್, ಚಿತ್ರಕಥೆ ನಟರಾಜ್ ಎಸ್ ಭಟ್, ಧನಂಜಯ್ ಹಾಗೂ ಡಿ ಸತ್ಯಪ್ರಕಾಶ್ ಅವರದು. ತಾರಾಗಣದಲ್ಲಿ ಸುಬ್ಬರಾಯರು (ರಾಷ್ಟ್ರ ಪ್ರಶಸ್ತಿ ಪುರಸ್ಕೃತ), ಧನಂಜಯ್, ದಿವ್ಯಾ, ಧರ್ಮಣ್ಣ ಕಡೂರು, ಬಿಂಬಶ್ರೀ ಹಾಗೂ ಪ್ರಿಯಾಂಕಾ ಇದ್ದಾರೆ. (ಒನ್ಇಂಡಿಯಾ ಕನ್ನಡ)