Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಳಿದಾಸ ಕನ್ನಡ ಮೇಷ್ಟ್ರನ್ನ ಹಾಡಿ ಹೊಗಳಿದ ಕವಿತಾ, ಜಯಂತ್ ಕಾಯ್ಕಿಣಿ
'ಕನ್ನಡ ಮೇಷ್ಟ್ರ' ಕ್ಲಾಸ್ ಆರಂಭವಾಗಿದೆ. 'ಕಾಳಿದಾಸ'ನ ಪಾಠ ಶುರುವಾಗಿದೆ. ಅರ್ಥಾತ್ 'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರ ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ. ಟ್ರೇಲರ್ ಮತ್ತು ಸಾಂಗ್ಸ್ ಗಳಿಂದಾಗಿ ಸ್ಯಾಂಡಲ್ ವುಡ್ ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡಿದ್ದ ಈ ಸಿನಿಮಾ ಇಂದಿನಿಂದ ಥಿಯೇಟರ್ ಗಳಲ್ಲಿ ರಾರಾಜಿಸಲಿದೆ.
ನವರಸ ನಾಯಕ ಜಗ್ಗೇಶ್, ಮೇಘನಾ ಗಾಂವ್ಕರ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ, ಚಿತ್ರ ಸಾಹಿತಿ ಕವಿರಾಜ್ ನಿರ್ದೇಶನ ಮಾಡಿರುವ, ಗುರುಕಿರಣ್ ಸಂಗೀತ ನೀಡಿರುವ ಈ ಚಿತ್ರ ಉತ್ತಮ ಓಪನ್ನಿಂಗ್ ಪಡೆದುಕೊಂಡಿದೆ.
ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿರುವ ಲೋಪಗಳನ್ನ ಹಾಸ್ಯಮಯವಾಗಿ, ವ್ಯಂಗ್ಯವಾಗಿ ಎತ್ತಿ ಹಿಡಿದಿರುವ 'ಕಾಳಿದಾಸ ಕನ್ನಡ ಮೇಷ್ಟ್ರು'ನ್ನು ಗೀತ ಸಾಹಿತಿ ಜಯಂತ್ ಕಾಯ್ಕಿಣಿ ಮತ್ತು ನಿರ್ದೇಶಕಿ ಕವಿತಾ ಲಂಕೇಶ್ ಹಾಡಿ ಹೊಗಳಿದ್ದಾರೆ. ಮುಂದೆ ಓದಿರಿ...
ಕವಿತಾ ಲಂಕೇಶ್ ಏನಂತಾರೆ.?
'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರವನ್ನ ವೀಕ್ಷಿಸಿದ ಬಳಿಕ ಕವಿತಾ ಲಂಕೇಶ್, ''ಅದ್ಭುತ ಚಿತ್ರ. ಇಂದಿನ ಸಮಾಜದ ಪ್ರಸ್ತುತ ಸಮಸ್ಯೆಗಳನ್ನು ಮನರಂಜನಾತ್ಮಕವಾಗಿ ಅಷ್ಟೇ ಭಾವನಾತ್ಮಕವಾಗಿ ಚಿತ್ರದಲ್ಲಿ ತೋರಿಸಲಾಗಿದೆ. ಈ ಚಿತ್ರ ದೊಡ್ಡ ಯಶಸ್ಸು ಗಳಿಸಿ ಸಮಾಜದಲ್ಲಿನ ಎಲ್ಲಾ ವರ್ಗಗಳನ್ನು ತಲುಪುವಂತಾಗಲಿ. ಕವಿರಾಜ್ ಇನ್ನಷ್ಟು ಅರ್ಥಪೂರ್ಣ ಚಿತ್ರಗಳನ್ನು ನೀಡಲಿ'' ಎಂದಿದ್ದಾರೆ.
ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಹೊಸ ದಾಖಲೆ ಬರೆದ 'ಕಾಳಿದಾಸ ಕನ್ನಡ ಮೇಷ್ಟ್ರು'!
ಜಯಂತ್ ಕಾಯ್ಕಿಣಿ ಹೇಳಿದ್ದೇನು.?
ಇನ್ನೂ ಖ್ಯಾತ ಗೀತ ಸಾಹಿತಿ ಜಯಂತ್ ಕಾಯ್ಕಿಣಿ, ''ನಮ್ಮನ್ನು ಕಾಡುವಂತಹ, ರೆಸ್ಟ್ ಲೆಸ್ ಮಾಡುವಂತಹ ಮಹತ್ವದ, ಮಾರ್ಮಿಕ, ಜೀವನ್ಮುಖಿ ಚಿತ್ರ ಇದು. ಚಿತ್ರತಂಡಕ್ಕೆ ಸಮಾಜ ಖಂಡಿತ ಋಣಿಯಾಗಿರುತ್ತದೆ. ಗುರುಕಿರಣ್ ರವರ ಸಂಗೀತ ಚಿತ್ರಕಥೆಗೆ ಪೂರಕವಾಗಿದೆ'' ಅಂತ ಹೇಳಿದ್ದಾರೆ.
ಕನ್ನಡ ಶಿಕ್ಷಕರಾಗಿ ಜಗ್ಗೇಶ್
ಕವಿರಾಜ್ ನಿರ್ದೇಶನದ ಎರಡನೇ ಚಿತ್ರ ಈ 'ಕಾಳಿದಾಸ ಕನ್ನಡ ಮೇಷ್ಟ್ರು'. ಈ ಸಿನಿಮಾದಲ್ಲಿ ಕನ್ನಡ ಶಿಕ್ಷಕರಾಗಿ ಜಗ್ಗೇಶ್ ನಟಿಸಿದ್ದರೆ, ಇಂಗ್ಲೀಷ್ ಭಾಷೆಯನ್ನ ಇಷ್ಟ ಪಡುವ ಪತ್ನಿ ಪಾತ್ರದಲ್ಲಿ ಮೇಘನಾ ಗಾಂವ್ಕರ್ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಮನರಂಜನೆ ಜೊತೆಗೆ ಉತ್ತಮ ಸಂದೇಶ ಕೂಡ ಇದೆ.
ನೀವು ನೋಡ್ತೀರಾ.?
ಕನ್ನಡ ಮೇಷ್ಟ್ರು ಕಾಳಿದಾಸನ ಪಾಠವನ್ನ ಕವಿತಾ ಲಂಕೇಶ್ ಮತ್ತು ಜಯಂತ್ ಕಾಯ್ಕಿಣಿ ಅಂತೂ ಮೆಚ್ಚಿದ್ದಾರೆ. ಇನ್ನೂ ಚಿತ್ರವನ್ನ ಥಿಯೇಟರ್ ನಲ್ಲಿ ನೋಡಿ ಭೇಷ್ ಎನ್ನುವುದು ನಿಮಗೆ ಬಿಟ್ಟಿದ್ದು...