Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2 ವರ್ಷದ ನಂತರ ದರ್ಶನ್ ಸಿನಿಮಾಗೆ ಹಾಡು ಬರೆದ ಜಯಂತ್ ಕಾಯ್ಕಿಣಿ
Recommended Video
ಜಯಂತ್ ಕಾಯ್ಕಿಣಿ ಕನ್ನಡದ ಅನೇಕ ಸ್ಟಾರ್ ನಟರಿಗೆ ಒಳ್ಳೆ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಈ ಹಿಂದೆ ದರ್ಶನ್ ಸಿನಿಮಾಗೆ ಸಹ ಹಾಡು ಬರೆದಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ಈ ಕಾಂಬಿನೇಶನ್ ನಲ್ಲಿ ಯಾವ ಹಾಡು ಬಂದಿರಲಿಲ್ಲ.
'ತಾರಕ್' ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರು. ಈ ಸಿನಿಮಾದ ಎರಡು ಹಾಡುಗಳನ್ನು ಜಯಂತ್ ಕಾಯ್ಕಿಣಿ ಬರೆದಿದ್ದರು. 'ಬಿರುಗಾಳಿಯೊಂದಿಗೆ...' ಹಾಗೂ 'ಮಾತಾಡು ನೀ..' ಹಾಡುಗಳಲ್ಲಿ ಜಯಂತ್ ಕಾಯ್ಕಿಣಿ ಸಾಹಿತ್ಯ ಇತ್ತು. ಆ ಚಿತ್ರದ ನಂತರ ದರ್ಶನ್ ಸಿನಿಮಾಗೆ ಕಾಯ್ಕಿಣಿ ಹಾಡು ಬರೆದಿಲ್ಲ.
'ಮದಕರಿ'ಗೆ ನಾಯಕಿ ಯಾರು?: ಅತಿ ಹೆಚ್ಚು ಜನ ಹೇಳಿದ್ದು ಈಕೆಯ ಹೆಸರು
'ಕುರುಕ್ಷೇತ್ರ'ದ ಎಲ್ಲ ಹಾಡುಗಳನ್ನು ವಿ ನಾಗೇಂದ್ರ ಪ್ರಸಾದ್ ಬರೆದರು. 'ಯಜಮಾನ' ಹಾಡುಗಳಿಗೆ ಚೇತನ್ ಕುಮಾರ್, ಕವಿರಾಜ್, ಯೋಗರಾಜ್ ಭಟ್, ಸಂತೋಷ್ ಆನಂದ್ ರಾಮ್ ಪದ ಜೋಡಿಸಿದರು. ಈ ಎರಡು ಸಿನಿಮಾಗಳಲ್ಲಿ ಕಾಯ್ಕಿಣಿ ಸಾಹಿತ್ಯ ಇರಲಿಲ್ಲ.
ಇದೀಗ 'ಒಡೆಯ' ಸಿನಿಮಾ ಒಂದು ಹಾಡನ್ನು ಜಯಂತ್ ಕಾಯ್ಕಿಣಿ ಬರೆದಿದ್ದಾರೆ. 'ಕಾಣೆಯಾಗಿರುವ ನಾನು..' ಹಾಡು ಜಯಂತ್ ಕಾಯ್ಕಿಣಿ ನೀಡಿದ್ದಾರೆ. ಈ ಹಾಡು ನವೆಂಬರ್ 25ಕ್ಕೆ ಬೆಳಗ್ಗೆ 11 ಗಂಟೆಗೆ ಬಿಡುಗಡೆ ಆಗಲಿದೆ. ಸೋನು ನಿಗಮ್ ಹಾಗೂ ಅನುರಾಧ ಭಟ್ ಹಾಡಿಗೆ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯ 'ಒಡೆಯ' ಸಿನಿಮಾದ ಸಂಗೀತ ನಿರ್ದೇಶಕ.
ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಣ್ಣ ಮತ್ತು ದರ್ಶನ್: ಸ್ಟಾರ್ ನಟರು ಹೇಳಿದ್ದೇನು?
'ಒಡೆಯ' ಎಂ ಡಿ ಶ್ರೀಧರ್ ನಿರ್ದೇಶನದ ಸಿನಿಮಾ. ಸನಾ ತಿಮಯ್ಯ ಸಿನಿಮಾದ ನಾಯಕಿ. ಸಂದೇಶ್ ಪ್ರೊಡಕ್ಷನ್ಸ್ ನಲ್ಲಿ ಸಿನಿಮಾ ನಿರ್ಮಾಣ ಆಗಿದೆ.