Just In
Don't Miss!
- Sports
ಐಎಸ್ಎಲ್: ಗೋವಾದ ಜಯದ ಓಟಕ್ಕೆ ಬ್ರೇಕ್ ಹಾಕಲು ಎಟಿಕೆಎಂಬಿ ಸಜ್ಜು
- Lifestyle
ವಾರ ಭವಿಷ್ಯ: ಮೇಷ ರಾಶಿಗೆ ಅದೃಷ್ಟದ ವಾರ, ಉಳಿದ ರಾಶಿಫಲ ಹೇಗಿದೆ ನೋಡಿ
- Automobiles
2020ರ ಡಿಸೆಂಬರ್ ಅವಧಿಯಲ್ಲಿ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡ ನ್ಯೂ ಜನರೇಷನ್ ಕ್ರೆಟಾ
- News
ಕೈ ತಪ್ಪಿದ ಸಚಿವ ಸ್ಥಾನ; ಅಪಚ್ಚು ರಂಜನ್ ಆಕ್ರೋಶ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಬಜೆಟ್ 2021: MSME ವಲಯಕ್ಕೆ ಏನು ಸಿಗಬಹುದು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2 ವರ್ಷದ ನಂತರ ದರ್ಶನ್ ಸಿನಿಮಾಗೆ ಹಾಡು ಬರೆದ ಜಯಂತ್ ಕಾಯ್ಕಿಣಿ
ಜಯಂತ್ ಕಾಯ್ಕಿಣಿ ಕನ್ನಡದ ಅನೇಕ ಸ್ಟಾರ್ ನಟರಿಗೆ ಒಳ್ಳೆ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಈ ಹಿಂದೆ ದರ್ಶನ್ ಸಿನಿಮಾಗೆ ಸಹ ಹಾಡು ಬರೆದಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ಈ ಕಾಂಬಿನೇಶನ್ ನಲ್ಲಿ ಯಾವ ಹಾಡು ಬಂದಿರಲಿಲ್ಲ.
'ತಾರಕ್' ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರು. ಈ ಸಿನಿಮಾದ ಎರಡು ಹಾಡುಗಳನ್ನು ಜಯಂತ್ ಕಾಯ್ಕಿಣಿ ಬರೆದಿದ್ದರು. 'ಬಿರುಗಾಳಿಯೊಂದಿಗೆ...' ಹಾಗೂ 'ಮಾತಾಡು ನೀ..' ಹಾಡುಗಳಲ್ಲಿ ಜಯಂತ್ ಕಾಯ್ಕಿಣಿ ಸಾಹಿತ್ಯ ಇತ್ತು. ಆ ಚಿತ್ರದ ನಂತರ ದರ್ಶನ್ ಸಿನಿಮಾಗೆ ಕಾಯ್ಕಿಣಿ ಹಾಡು ಬರೆದಿಲ್ಲ.
'ಮದಕರಿ'ಗೆ ನಾಯಕಿ ಯಾರು?: ಅತಿ ಹೆಚ್ಚು ಜನ ಹೇಳಿದ್ದು ಈಕೆಯ ಹೆಸರು
'ಕುರುಕ್ಷೇತ್ರ'ದ ಎಲ್ಲ ಹಾಡುಗಳನ್ನು ವಿ ನಾಗೇಂದ್ರ ಪ್ರಸಾದ್ ಬರೆದರು. 'ಯಜಮಾನ' ಹಾಡುಗಳಿಗೆ ಚೇತನ್ ಕುಮಾರ್, ಕವಿರಾಜ್, ಯೋಗರಾಜ್ ಭಟ್, ಸಂತೋಷ್ ಆನಂದ್ ರಾಮ್ ಪದ ಜೋಡಿಸಿದರು. ಈ ಎರಡು ಸಿನಿಮಾಗಳಲ್ಲಿ ಕಾಯ್ಕಿಣಿ ಸಾಹಿತ್ಯ ಇರಲಿಲ್ಲ.
ಇದೀಗ 'ಒಡೆಯ' ಸಿನಿಮಾ ಒಂದು ಹಾಡನ್ನು ಜಯಂತ್ ಕಾಯ್ಕಿಣಿ ಬರೆದಿದ್ದಾರೆ. 'ಕಾಣೆಯಾಗಿರುವ ನಾನು..' ಹಾಡು ಜಯಂತ್ ಕಾಯ್ಕಿಣಿ ನೀಡಿದ್ದಾರೆ. ಈ ಹಾಡು ನವೆಂಬರ್ 25ಕ್ಕೆ ಬೆಳಗ್ಗೆ 11 ಗಂಟೆಗೆ ಬಿಡುಗಡೆ ಆಗಲಿದೆ. ಸೋನು ನಿಗಮ್ ಹಾಗೂ ಅನುರಾಧ ಭಟ್ ಹಾಡಿಗೆ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯ 'ಒಡೆಯ' ಸಿನಿಮಾದ ಸಂಗೀತ ನಿರ್ದೇಶಕ.
ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಣ್ಣ ಮತ್ತು ದರ್ಶನ್: ಸ್ಟಾರ್ ನಟರು ಹೇಳಿದ್ದೇನು?
'ಒಡೆಯ' ಎಂ ಡಿ ಶ್ರೀಧರ್ ನಿರ್ದೇಶನದ ಸಿನಿಮಾ. ಸನಾ ತಿಮಯ್ಯ ಸಿನಿಮಾದ ನಾಯಕಿ. ಸಂದೇಶ್ ಪ್ರೊಡಕ್ಷನ್ಸ್ ನಲ್ಲಿ ಸಿನಿಮಾ ನಿರ್ಮಾಣ ಆಗಿದೆ.