Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2 ವರ್ಷದ ನಂತರ ದರ್ಶನ್ ಸಿನಿಮಾಗೆ ಹಾಡು ಬರೆದ ಜಯಂತ್ ಕಾಯ್ಕಿಣಿ
Recommended Video
ಜಯಂತ್ ಕಾಯ್ಕಿಣಿ ಕನ್ನಡದ ಅನೇಕ ಸ್ಟಾರ್ ನಟರಿಗೆ ಒಳ್ಳೆ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಈ ಹಿಂದೆ ದರ್ಶನ್ ಸಿನಿಮಾಗೆ ಸಹ ಹಾಡು ಬರೆದಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ಈ ಕಾಂಬಿನೇಶನ್ ನಲ್ಲಿ ಯಾವ ಹಾಡು ಬಂದಿರಲಿಲ್ಲ.
'ತಾರಕ್' ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರು. ಈ ಸಿನಿಮಾದ ಎರಡು ಹಾಡುಗಳನ್ನು ಜಯಂತ್ ಕಾಯ್ಕಿಣಿ ಬರೆದಿದ್ದರು. 'ಬಿರುಗಾಳಿಯೊಂದಿಗೆ...' ಹಾಗೂ 'ಮಾತಾಡು ನೀ..' ಹಾಡುಗಳಲ್ಲಿ ಜಯಂತ್ ಕಾಯ್ಕಿಣಿ ಸಾಹಿತ್ಯ ಇತ್ತು. ಆ ಚಿತ್ರದ ನಂತರ ದರ್ಶನ್ ಸಿನಿಮಾಗೆ ಕಾಯ್ಕಿಣಿ ಹಾಡು ಬರೆದಿಲ್ಲ.
'ಮದಕರಿ'ಗೆ ನಾಯಕಿ ಯಾರು?: ಅತಿ ಹೆಚ್ಚು ಜನ ಹೇಳಿದ್ದು ಈಕೆಯ ಹೆಸರು
'ಕುರುಕ್ಷೇತ್ರ'ದ ಎಲ್ಲ ಹಾಡುಗಳನ್ನು ವಿ ನಾಗೇಂದ್ರ ಪ್ರಸಾದ್ ಬರೆದರು. 'ಯಜಮಾನ' ಹಾಡುಗಳಿಗೆ ಚೇತನ್ ಕುಮಾರ್, ಕವಿರಾಜ್, ಯೋಗರಾಜ್ ಭಟ್, ಸಂತೋಷ್ ಆನಂದ್ ರಾಮ್ ಪದ ಜೋಡಿಸಿದರು. ಈ ಎರಡು ಸಿನಿಮಾಗಳಲ್ಲಿ ಕಾಯ್ಕಿಣಿ ಸಾಹಿತ್ಯ ಇರಲಿಲ್ಲ.
ಇದೀಗ 'ಒಡೆಯ' ಸಿನಿಮಾ ಒಂದು ಹಾಡನ್ನು ಜಯಂತ್ ಕಾಯ್ಕಿಣಿ ಬರೆದಿದ್ದಾರೆ. 'ಕಾಣೆಯಾಗಿರುವ ನಾನು..' ಹಾಡು ಜಯಂತ್ ಕಾಯ್ಕಿಣಿ ನೀಡಿದ್ದಾರೆ. ಈ ಹಾಡು ನವೆಂಬರ್ 25ಕ್ಕೆ ಬೆಳಗ್ಗೆ 11 ಗಂಟೆಗೆ ಬಿಡುಗಡೆ ಆಗಲಿದೆ. ಸೋನು ನಿಗಮ್ ಹಾಗೂ ಅನುರಾಧ ಭಟ್ ಹಾಡಿಗೆ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯ 'ಒಡೆಯ' ಸಿನಿಮಾದ ಸಂಗೀತ ನಿರ್ದೇಶಕ.
ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಣ್ಣ ಮತ್ತು ದರ್ಶನ್: ಸ್ಟಾರ್ ನಟರು ಹೇಳಿದ್ದೇನು?
'ಒಡೆಯ' ಎಂ ಡಿ ಶ್ರೀಧರ್ ನಿರ್ದೇಶನದ ಸಿನಿಮಾ. ಸನಾ ತಿಮಯ್ಯ ಸಿನಿಮಾದ ನಾಯಕಿ. ಸಂದೇಶ್ ಪ್ರೊಡಕ್ಷನ್ಸ್ ನಲ್ಲಿ ಸಿನಿಮಾ ನಿರ್ಮಾಣ ಆಗಿದೆ.