Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2 ವರ್ಷದ ನಂತರ ದರ್ಶನ್ ಸಿನಿಮಾಗೆ ಹಾಡು ಬರೆದ ಜಯಂತ್ ಕಾಯ್ಕಿಣಿ
Recommended Video
ಜಯಂತ್ ಕಾಯ್ಕಿಣಿ ಕನ್ನಡದ ಅನೇಕ ಸ್ಟಾರ್ ನಟರಿಗೆ ಒಳ್ಳೆ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಈ ಹಿಂದೆ ದರ್ಶನ್ ಸಿನಿಮಾಗೆ ಸಹ ಹಾಡು ಬರೆದಿದ್ದರು. ಆದರೆ, ಕಳೆದ ಎರಡು ವರ್ಷಗಳಿಂದ ಈ ಕಾಂಬಿನೇಶನ್ ನಲ್ಲಿ ಯಾವ ಹಾಡು ಬಂದಿರಲಿಲ್ಲ.
'ತಾರಕ್' ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದರು. ಈ ಸಿನಿಮಾದ ಎರಡು ಹಾಡುಗಳನ್ನು ಜಯಂತ್ ಕಾಯ್ಕಿಣಿ ಬರೆದಿದ್ದರು. 'ಬಿರುಗಾಳಿಯೊಂದಿಗೆ...' ಹಾಗೂ 'ಮಾತಾಡು ನೀ..' ಹಾಡುಗಳಲ್ಲಿ ಜಯಂತ್ ಕಾಯ್ಕಿಣಿ ಸಾಹಿತ್ಯ ಇತ್ತು. ಆ ಚಿತ್ರದ ನಂತರ ದರ್ಶನ್ ಸಿನಿಮಾಗೆ ಕಾಯ್ಕಿಣಿ ಹಾಡು ಬರೆದಿಲ್ಲ.
'ಮದಕರಿ'ಗೆ ನಾಯಕಿ ಯಾರು?: ಅತಿ ಹೆಚ್ಚು ಜನ ಹೇಳಿದ್ದು ಈಕೆಯ ಹೆಸರು
'ಕುರುಕ್ಷೇತ್ರ'ದ ಎಲ್ಲ ಹಾಡುಗಳನ್ನು ವಿ ನಾಗೇಂದ್ರ ಪ್ರಸಾದ್ ಬರೆದರು. 'ಯಜಮಾನ' ಹಾಡುಗಳಿಗೆ ಚೇತನ್ ಕುಮಾರ್, ಕವಿರಾಜ್, ಯೋಗರಾಜ್ ಭಟ್, ಸಂತೋಷ್ ಆನಂದ್ ರಾಮ್ ಪದ ಜೋಡಿಸಿದರು. ಈ ಎರಡು ಸಿನಿಮಾಗಳಲ್ಲಿ ಕಾಯ್ಕಿಣಿ ಸಾಹಿತ್ಯ ಇರಲಿಲ್ಲ.
ಇದೀಗ 'ಒಡೆಯ' ಸಿನಿಮಾ ಒಂದು ಹಾಡನ್ನು ಜಯಂತ್ ಕಾಯ್ಕಿಣಿ ಬರೆದಿದ್ದಾರೆ. 'ಕಾಣೆಯಾಗಿರುವ ನಾನು..' ಹಾಡು ಜಯಂತ್ ಕಾಯ್ಕಿಣಿ ನೀಡಿದ್ದಾರೆ. ಈ ಹಾಡು ನವೆಂಬರ್ 25ಕ್ಕೆ ಬೆಳಗ್ಗೆ 11 ಗಂಟೆಗೆ ಬಿಡುಗಡೆ ಆಗಲಿದೆ. ಸೋನು ನಿಗಮ್ ಹಾಗೂ ಅನುರಾಧ ಭಟ್ ಹಾಡಿಗೆ ಧ್ವನಿಯಾಗಿದ್ದಾರೆ. ಅರ್ಜುನ್ ಜನ್ಯ 'ಒಡೆಯ' ಸಿನಿಮಾದ ಸಂಗೀತ ನಿರ್ದೇಶಕ.
ಒಂದೇ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶಿವಣ್ಣ ಮತ್ತು ದರ್ಶನ್: ಸ್ಟಾರ್ ನಟರು ಹೇಳಿದ್ದೇನು?
'ಒಡೆಯ' ಎಂ ಡಿ ಶ್ರೀಧರ್ ನಿರ್ದೇಶನದ ಸಿನಿಮಾ. ಸನಾ ತಿಮಯ್ಯ ಸಿನಿಮಾದ ನಾಯಕಿ. ಸಂದೇಶ್ ಪ್ರೊಡಕ್ಷನ್ಸ್ ನಲ್ಲಿ ಸಿನಿಮಾ ನಿರ್ಮಾಣ ಆಗಿದೆ.