Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರವೀಂದ್ರ ಕಲಾಕ್ಷೇತ್ರದಲ್ಲಿ ಜಯಂತಿ ಅವರ ಅಂತಿಮ ದರ್ಶನಕ್ಕೆ ಅವಕಾಶ
ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನು ನೆನಪು ಮಾತ್ರ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಇಂದು ಬೆಳಗ್ಗೆ ಕೊನೆಯುಸಿರೆಳಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.
Recommended Video
ಇತ್ತೀಚಿಗಷ್ಟೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಚೇತರಿಸಿಕೊಳ್ಳುತ್ತಿದ್ದ ಜಯಂತಿ ನಿಧನ ಚಿತ್ರರಂಗಕ್ಕೆ ಆಘಾತತಂದಿದೆ. ಅನೇಕ ಗಣ್ಯರು ಜಯಂತಿ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಜಯಂತಿ ಅವರ ಅಂತಿಮ ದರ್ಶನ ಪಡೆಯಬೇಕು ಎನ್ನುವುದು ಅನೇಕ ಅಭಿಮಾನಿಗಳ ಬಯಕೆ.
ಜಯಂತಿ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಅವಕಾಶ ಮಾಡಿಕೊಲಾಗಿದೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಜಯಂತಿ ಅವರ ಪಾರ್ಥಿವ ಶರೀರ ರವೀಂದ್ರ ಕಲಾಕ್ಷೇತ್ರಕ್ಕೆ ರವಾನೆಯಾಗಲಿದ್ದು ಅಂತಿಮ ದರ್ಶನಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ನಟಿ ತಾರಾ, "ಈಗಾಗಲೇ ಸಿಎಂ ಅವರಿಗೆ ಮನವಿ ಮಾಡಿದ್ದೀವಿ. ರವಿ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ.
ಅಂತಿಮ ವಿಧಿವಿಧಾನದ ಬಗ್ಗೆ ಇನ್ನು ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಕೆಲವೇ ಸಮಯದಲ್ಲಿ ನಿರ್ಧಾರದ ಬಗ್ಗೆ ಹೇಳುವುದಾಗಿ ನಟಿ ತಾರಾ ಹೇಳಿದ್ದಾರೆ.
ಇನ್ನು ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಕೂಡ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಟಿ ತಾರಾ ಮತ್ತು ಗಿರಿಜಾ ಲೋಕೇಶ್ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಲವೇ ಸಮಯದಲ್ಲಿ ಅಂತಿಮ ವಿಧಿ ವಿಧಾನಗಳ ಬಗ್ಗೆ ತಿಳಿಸುವುದಾಗಿ ಹೇಳಿದ್ದಾರೆ.