twitter
    For Quick Alerts
    ALLOW NOTIFICATIONS  
    For Daily Alerts

    ರವೀಂದ್ರ ಕಲಾಕ್ಷೇತ್ರದಲ್ಲಿ ಜಯಂತಿ ಅವರ ಅಂತಿಮ ದರ್ಶನಕ್ಕೆ ಅವಕಾಶ

    |

    ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನು ನೆನಪು ಮಾತ್ರ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ ಇಂದು ಬೆಳಗ್ಗೆ ಕೊನೆಯುಸಿರೆಳಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.

    Recommended Video

    ರಾಜ್ ಕುಮಾರ್ ಜೊತೆಗೆ 45 ಚಿತ್ರಗಳಲ್ಲಿ ನಟಿಸಿ ದಾಖಲೆ ಬರೆದಿದ್ರು ಜಯಂತಿ

    ಇತ್ತೀಚಿಗಷ್ಟೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಚೇತರಿಸಿಕೊಳ್ಳುತ್ತಿದ್ದ ಜಯಂತಿ ನಿಧನ ಚಿತ್ರರಂಗಕ್ಕೆ ಆಘಾತತಂದಿದೆ. ಅನೇಕ ಗಣ್ಯರು ಜಯಂತಿ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ. ಜಯಂತಿ ಅವರ ಅಂತಿಮ ದರ್ಶನ ಪಡೆಯಬೇಕು ಎನ್ನುವುದು ಅನೇಕ ಅಭಿಮಾನಿಗಳ ಬಯಕೆ.

    ಜಯಂತಿ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಅವಕಾಶ ಮಾಡಿಕೊಲಾಗಿದೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಜಯಂತಿ ಅವರ ಪಾರ್ಥಿವ ಶರೀರ ರವೀಂದ್ರ ಕಲಾಕ್ಷೇತ್ರಕ್ಕೆ ರವಾನೆಯಾಗಲಿದ್ದು ಅಂತಿಮ ದರ್ಶನಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ನಟಿ ತಾರಾ, "ಈಗಾಗಲೇ ಸಿಎಂ ಅವರಿಗೆ ಮನವಿ ಮಾಡಿದ್ದೀವಿ. ರವಿ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ.

    Jayanthi Death: Ravindra Kalakshetra is arranged for visitors to have last sights

    ಅಂತಿಮ ವಿಧಿವಿಧಾನದ ಬಗ್ಗೆ ಇನ್ನು ಅಂತಿಮ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಕೆಲವೇ ಸಮಯದಲ್ಲಿ ನಿರ್ಧಾರದ ಬಗ್ಗೆ ಹೇಳುವುದಾಗಿ ನಟಿ ತಾರಾ ಹೇಳಿದ್ದಾರೆ.

    ಇನ್ನು ಜಯಂತಿ ಅವರ ಪುತ್ರ ಕೃಷ್ಣಕುಮಾರ್ ಕೂಡ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನಟಿ ತಾರಾ ಮತ್ತು ಗಿರಿಜಾ ಲೋಕೇಶ್ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಕೆಲವೇ ಸಮಯದಲ್ಲಿ ಅಂತಿಮ ವಿಧಿ ವಿಧಾನಗಳ ಬಗ್ಗೆ ತಿಳಿಸುವುದಾಗಿ ಹೇಳಿದ್ದಾರೆ.

    English summary
    Veteran Kannada actress Jayanthi Death: Ravindra Kalakshetra is arranged for visitors to have last sights.
    Monday, July 26, 2021, 10:34
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X