Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಪೂರ್ಣ ಗುಣಮುಖರಾದ ಹಿರಿಯ ನಟಿ ಜಯಂತಿ
Recommended Video
ಕನ್ನಡ ಸಿನಿಮಾರಂಗದ ಹಿರಿಯ ನಟಿ ಜಯಂತಿ ಸುಮಾರು ಹತ್ತು ದಿನಗಳಿಂದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಭಿನಯ ಶಾರದೆ ಸಂಪೂರ್ಣ ಗುಣಮುಖರಾಗಿ ಇಂದು (ಏರ್ಪಿಲ್ 6) ಮನೆಗೆ ತೆರಳುತ್ತಿದ್ದಾರೆ. ಮನೆಗೆ ಹೋಗುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯಂತಿ ತನಗಾಗಿ ದೇವರಲ್ಲಿ ಪ್ರಾರ್ಥನೆ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ಆರಂಭದಲ್ಲೇ ಭಾವುಕರಾಗಿ ಮಾತನಾಡಿದ ನಟಿ ಜಯಂತಿ "ನನ್ನಿಂದ ಯಾರಿಗಾದರೂ ತೊಂದರೆ ಆಗಿದ್ದರೆ ಕ್ಷಮೆ ಇರಲಿ ಎಂದರು. ಮಾಧ್ಯಮದವರು ಹತ್ತು ದಿನಗಳ ಕಾಲ ನನಗಾಗಿ ಆಸ್ಪತ್ರೆ ಹೊರಗೆ ಕಾದಿದ್ದೀರಿ ನಿಮಗೆ ಧನ್ಯವಾದಗಳು, ಡಾ ಸತೀಶ್ ಮತ್ತು ತಂಡದವರು ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ".
ಹಿರಿಯ ನಟಿ ಜಯಂತಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
"ಕನ್ನಡ ಮಾಧ್ಯಮಗಳನ್ನ ಬಿಟ್ಟು ಬೇರೆ ಬಾಷೆಯ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಿದಾಡಿದೆ. ಆದರೆ ಕನ್ನಡದವರು ಹಾಗೆ ಮಾಡಲಿಲ್ಲ. ನನ್ನ ಆರೋಗ್ಯ ಹೇಗಿದೆ ಎನ್ನುವುದನ್ನ ತಿಳಿದುಕೊಂಡು ಸುದ್ದಿ ಪ್ರಸಾರ ಮಾಡಿದ್ದಾರೆ. ಕನ್ನಡಿಗರ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ" ಎಂದು ಸಂತೋಷ ವ್ಯಕ್ತ ಪಡಿಸಿದರು.
ಕೆಲವು ಕಟ್ಟುನಿಟ್ಟಿನ ಆಹಾರ ಕ್ರಮವನ್ನ ಪಾಲನೆ ಮಾಡುವಂತೆ ಜಯಂತಿ ಅವರಿಗೆ ವೈದ್ಯರು ಸೂಚನೆ ನೀಡಿದ್ದಾರೆ. ಇಂದು ಡಿಸ್ಚಾರ್ಜ್ ಆಗಿರುವ ಅಭಿನಯ ಶಾರದೆ ಕೆಲವು ದಿನಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ನಾನು ಸಂಪೂರ್ಣವಾಗಿ ಗುಣಮುಖವಾದ ನಂತರ ಮತ್ತೆ ಮಾಧ್ಯಮದವನ್ನು ಭೇಟಿ ಆಗುತ್ತೇನೆ ಎಂದು ಖುದ್ದು ಜಯಂತಿ ಅವರೇ ತಿಳಿಸಿದ್ದಾರೆ.
ನಟಿ ಜಯಂತಿ ಆರೋಗ್ಯದಲ್ಲಿ ಚೇತರಿಕೆ: ಅಭಿನಯ ಶಾರದೆ ಹೆಸರಲ್ಲಿ ಮೃತ್ಯುಂಜಯ ಹೋಮ