Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
1 ತಿಂಗಳಿಂದ ಪುನರ್ವಸತಿ ಕೇಂದ್ರದಲ್ಲಿದ್ದ ಜಯಶ್ರೀ, ಮಾನಸಿಕ ಖಿನ್ನತೆಯೇ ಸಾವಿಗೆ ಕಾರಣವಾಯ್ತಾ?
ಬಿಗ್ ಬಾಸ್ ಸ್ಪರ್ಧಿ, ನಟಿ ಕಮ್ ಮಾಡೆಲ್ ಜಯಶ್ರೀ ರಾಮಯ್ಯ ಕಳೆದ ರಾತ್ರಿ (ಜನವರಿ 24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ಪುನರ್ವಸತಿ ಕೇಂದ್ರದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದದಾರೆ ಎಂದು ತಿಳಿದು ಬಂದಿದೆ.
Recommended Video
ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಯಶ್ರೀಗೆ ಹಲವು ಕಡೆ ಚಿಕಿತ್ಸೆ ಸಹ ನೀಡಲಾಗಿತ್ತು. ಆದರೆ, ಅದರಿಂದ ಹೊರಬರಲು ಸಾಧ್ಯವಾಗಿರಲಿಲ್ಲ. ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯೇ ನಟಿಯ ಈ ಸಾವಿಗೆ ಕಾರಣ ಎಂದು ಹೇಳಲಾಗುತ್ತಿದೆ.
ಬಿಗ್ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ
ಡಿಸೆಂಬರ್ 25 ರಂದು ಸಂಧ್ಯಾಕಿರಣ ಪುನರ್ವಸತಿ ಕೇಂದ್ರಕ್ಕೆ ಜಯಶ್ರೀ ಅವರನ್ನು ದಾಖಲಿಸಲಾಗಿತ್ತು. ಒಂದು ತಿಂಗಳಿಂದ ಈ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಜಯಶ್ರೀಗಾಗಿ ಪ್ರತ್ಯೇಕ ಕೊಠಡಿ ಸಹ ವ್ಯವಸ್ಥೆ ಮಾಡಲಾಗಿತ್ತು.
ಪುನರ್ವಸತಿ ಕೇಂದ್ರದಲ್ಲೂ ಸಹ ಜಯಶ್ರೀ ಅವರು ಒಬ್ಬಂಟಿಯಾಗಿರಲು ಹೆಚ್ಚು ಬಯಸುತ್ತಿದ್ದರು. ಕೊಠಡಿಯಲ್ಲಿ ಒಬ್ಬರೆ ಉಳಿದುಕೊಳ್ಳುತ್ತಿದ್ದರು. ನಿನ್ನೆ ರಾತ್ರಿಯಿಂದ ಯಾವ ಸಿಬ್ಬಂದಿ ಜೊತೆಗೆ ಸಂಪರ್ಕಕ್ಕೆ ಬಂದಿರಲಿಲ್ಲ. ಬೆಳಗ್ಗೆ ಕೊಠಡಿಯಿಂದಲೂ ಹೊರಗೆ ಬಂದಿರಲಿಲ್ಲ. ಹಾಗಾಗಿ, ಅನುಮಾನಗೊಂಡ ಸಿಬ್ಬಂದಿ ರೂಂಮಿನ ಬಾಗಿಲು ತೆಗೆದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ನಾನೊಬ್ಬಳು ಲೂಸರ್, ನಾನು ಹುಚ್ಚಿ, ನಾನು ಸಾಯಬೇಕು; ದಯಾಮರಣ ನೀಡಿ ಎಂದಿದ್ದ ಜಯಶ್ರೀ
ಸದ್ಯ, ಮಾರನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ಜಯಶ್ರೀ ಅವರ ಪಾರ್ಥಿವ ಶರೀರವನ್ನು ರವಾನಿಸಲಾಗಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777