Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಯಶ್ರೀ ಡೈರಿ ಪತ್ತೆ: ಸಾಲ ಹಿಂತಿರುಗಿಸುವಂತೆ ಕುಟುಂಬಸ್ಥರಿಗೆ ಮನವಿ
ಪುನರ್ವಸತಿ ಕೇಂದ್ರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಟಿ ಜಯಶ್ರೀ ರಾಮಯ್ಯ ಅವರ ಖಾಸಗಿ ಡೈರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Recommended Video
ಜಯಶ್ರೀ ಸಾವಿನ ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಡೈರಿ ಸಿಕ್ಕಿದ್ದು, ಅದರಲ್ಲಿ ಸಾಕಷ್ಟು ವಿಚಾರಗಳಿವೆ ಎಂದು ಹೇಳಲಾಗಿದೆ. ಪ್ರಮುಖವಾಗಿ ಸಾಲ ಪಡೆದಿರುವ ಬಗ್ಗೆ ವಿವರಗಳಿದ್ದು, ಹಣ ಹಿಂತಿರುಗಿಸುವಂತೆ ಕುಟುಂಬಸ್ಥರಿಗೆ ಮನವಿ ಮಾಡಿದ್ದಾರೆ.
ಡೈರಿ ಜೊತೆ ಡೆತ್ ನೋಟ್ ಸಹ ಇದೆ ಎನ್ನಲಾಗಿದೆ. ಇದರಲ್ಲಿ ಸಾಲು ಪಡೆದಿರುವವರಿಗೆ ಹಣ ವಾಪಸ್ ನೀಡಿ ಎಂದು ತಮ್ಮ ಸಹೋದರನಿಗೆ ತಿಳಿಸಲಾಗಿದೆ. ಮನೆ ಬಾಡಿಗೆ, ವೈದ್ಯರ ಶುಲ್ಕ ಕೊಡುವಂತೆ ಕೋರಿದ್ದಾರೆ. ಯಾರ್ ಯಾರಿಗೆ ಹಣ ನೀಡಬೇಕು, ಯಾರ ಬಳಿ ಎಷ್ಟು ತೆಗೆದುಕೊಂಡಿದ್ದಾರೆ ಎಂದು ಬರೆದಿದ್ದಾರಂತೆ.
ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಕುಟುಂಬಸ್ಥರು ಹಾಗೂ ಸ್ನೇಹಿತರು ಭೇಟಿ ನೀಡಿದ್ದರು. ಜಯಶ್ರೀ ಚಿಕ್ಕಮ್ಮ, ಸಹೋದರ ಅಜಯ್ ಬಂದಿದ್ದರು. ಇವರಿಬ್ಬರಿಂದಲೂ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.
ಜಯಶ್ರೀ ಅವರ ಮೃತದೇಹವನ್ನು ವಿಕ್ಟೋರಿಯಾಗೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
'ಜೀವನ' ಹೋರಾಟದಲ್ಲಿ ಸೋತ ಜಯಶ್ರೀ: ಮಾಡೆಲಿಂಗ್, ಬಿಗ್ ಬಾಸ್, ಸಿನಿಮಾ ಕೈಹಿಡಿಯಲಿಲ್ಲ!
ಅಂದ್ಹಾಗೆ, ನಟಿ ಜಯಶ್ರೀ ರಾಮಯ್ಯ ಮಾಗಡಿ ರಸ್ತೆಯ ಸಂಧ್ಯಾಕಿರಣ ಪುನರ್ವಸತಿ ಕೇಂದ್ರದಲ್ಲಿ ಕಳೆದ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಕೊಂಡಿದ್ದಾರೆ. ಬೆಳಗ್ಗೆ ಸಮಯ ಕಳೆದರೂ ಕೊಠಡಿಯಿಂದ ಹೊರಬಾರದ ಕಾರಣ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777